ಗ್ರಾಮೀಣಕೂ ಗಾಂಜಾ ಗಾಟು


Team Udayavani, Apr 5, 2021, 12:53 PM IST

ಗ್ರಾಮೀಣಕೂ ಗಾಂಜಾ ಗಾಟು

 

ಕುದೂರು: ಪಕ್ಕದ ಬೆಂಗಳೂರು ನಗರಕ್ಕೆ ಸಮೀತವಾಗಿದ್ದ ಗಾಂಜಾ ಮಾರಾಟ ಜಾಲಾ ಇದೀಗ ಮಾಗಡಿ ತಾಲೂಕಿಗೂ ವ್ಯಾಪ್ತಿಸಿದೆ. ಜಾಲವೊಂದು ಕುದೂರು ಸುತ್ತಮುತ್ತ ಪ್ರದೇಶದಲ್ಲಿ ಗಾಂಜಾ, ಅಫೀಮು ಯುವಜನರ ಕೈಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂಬ ಸುದ್ದಿ ಸಾರ್ವಜನಿಕ ವಲಯದಲ್ಲಿ ಹರಿ ದಾಡುತ್ತಿದೆ.

ಮಾಗಡಿ ಪಟ್ಟಣದಿಂದ ಕು ದೂರು ಇತರೆಡೆಗೆ ಗಾಂಜಾ, ಅಫೀಮು ಅನ್ನು ಜಾಲವೊಂದು ಸರಬರಾಜು ಮಾಡುತ್ತಿದೆ. ಸಣ್ಣ ಕವರ್‌ನಲ್ಲಿ ಗಾಂಜಾವನ್ನು ತುಂಬಿ ಅದನ್ನು250 ರೂ.ನಿಂದ 300 ರೂ.ಗೆ ಮಾರಾಟ ಮಾಡುತ್ತಿದೆ ಎಂಬ ಸುದ್ದಿ ಇದೆ. ಈ ಸಂಬಂಧ ಈಗಾಗಲೇ ಪೊಲೀಸರ ಗಮನಕ್ಕೆ ಬಂದಿದ್ದು, ಜಾಲವನ್ನು ಭೇದಿಸಬೇಕಿದೆ.

ಟೀ ಅಂಗಡಿಯಲ್ಲೂ ಮಾರಾಟ?: ಕುದೂರು ಮೂಲದ ಇಬ್ಬರು ಯುವಕರು ಮಾ.30ರಂದು ಮಾಗಡಿಗೆ ಗಾಂಜಾ ಖರೀದಿಸಲು ಬಂದು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದರು. ಇವರೇಗ್ರಾಮೀಣ ಪ್ರದೇಶಕ್ಕೂ ಗಾಂಜಾ ಸರಬರಾಜು ಮಾಡುತ್ತಿದ್ದರು ಎಂಬ ಅನುಮಾನವೂಮೂಡಿದೆ. ಕುದೂರಿಗೆ ಮಾಗಡಿಯಿಂದ ಗಾಂಜಾ ಸರಬರಾಜು ಮಾಡುವ ಏಜೆಂಟರಿದ್ದಾರೆ ಎನ್ನಲಾಗಿದೆ.

ಕೆಲವು ಏಜೆಂಟರುಗಳು ಕುದೂರಿನ ಬೀಡಾ, ಟೀ ಅಂಗಡಿಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರೆ, ಇನ್ನು ಕೆಲವರು ತಮ್ಮ ಲಿಂಕ್‌ನಲ್ಲಿರುವ ಯುವಕರಿಗೆ ಕರೆ ಮಾಡಿಮಾಗಡಿಗೆ ಕರೆಯಿಸಿಕೊಂಡು ನೇರವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿ: ಮಾದಕ ವಸ್ತು ಗಳ ಬಳಕೆ ವಿರುದ್ಧ ಹೋರಾಟ ಮಾಡಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಯುವ ಸಮುದಾಯವನ್ನು ವ್ಯಸನದಿಂದ ಹೊರತರುವ ಸಲುವಾಗಿ ಗ್ರಾಮೀಣ ಜನರು ಪೊಲೀಸರೊಂದಿಗೆ ಕೈಜೋಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸುತ್ತಮುತ್ತ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುವ ಮಾಹಿತಿ ತಿಳಿದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು. ಇದರಿಂದ ಕಾರ್ಯಾಚರಣೆಗೆ ಅನುಕೂಲವಾಗಲಿದೆ.

ಮಕ್ಕಳ ಮೇಲೆ ನಿಗಾ ಇರಲಿ: ಗಾಂಜಾ ನಶೆಗೆ ಯುವ ಸಮುದಾಯ ಆಕರ್ಷಿತರಾಗುತ್ತಿರುವು  ದಕ್ಕೆ ಪಾಲಕರು, ಮಕ್ಕಳ ಮೇಲೆ ಹೆಚ್ಚಿನ ನಿಗಾ ಇರಿಸದಿರುವುದು ಪ್ರಮುಖ ಕಾರಣ ಎನ್ನುವ ಮಾತುಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳಚಲನವಲನ, ಯಾರೊಂದಿ ಗೆ ಸ್ನೇಹ ಬೆಳೆಸಿದ್ದಾರೆ ಎನ್ನುವ ಬಗ್ಗೆ ತಿಳಿದುಕೊಂಡಿರಬೇಕು. ಇಲ್ಲವಾದರೆ ಮಕ್ಕಳು ಕುಟುಂಬ ಕ್ಕೆ ಮಾತ್ರವಲ್ಲದೆ, ಸಮಾಜಕ್ಕೂ ಹೊರೆಯಾಗುವುದು ನಿಶ್ಚಿತ.

ಗ್ರಾಮೀಣ ಭಾಗಕ್ಕೂ ಹಬ್ಬಿದೆ ವ್ಯಸನ: ನಗರ ಪ್ರದೇಶಕ್ಕೆ ಸೀಮಿತ ಆಗಿದ್ದ ಗಾಂಜಾ ಸೇವನೆ ಇದೀಗ ಗ್ರಾಮೀಣ ಭಾಗಕ್ಕೂ ವ್ಯಾಪಿಸುತ್ತಿದೆ.ವಸತಿರಹಿತ ಪ್ರದೇಶ, ಶಾಲಾ ಮೈದಾನಗಳುವ್ಯಸನಿಗಳು ಮತ್ತು ಪೂರೈಕೆದಾರರ ನೆಚ್ಚಿನ ತಾಣಗಳಾಗಿವೆ.

ಗ್ರಾಮೀಣ ಪ್ರದೇಶಕ್ಕೆ ಗಾಂಜಾ ಮಾರಾಟ ಮಾಡುವವರ ಬಗ್ಗೆಇಲಾಖೆಗೆ ಮಾಹಿತಿ ಇದೆ. ಸಿಬ್ಬಂದಿಈಗಾಗಲೇ ಕಾರ್ಯಪ್ರವೃತ್ತರಾಗಿ ದ್ದಾರೆ. ಕೆಲವರನ್ನು ಬಂಧಿಸಿದ್ದಾರೆ. ಸದ್ಯದಲ್ಲಿಯೇ ಉಳಿದವರನ್ನು ವಶಕ್ಕೆಪಡೆಯಲಾಗುವುದು.  ● ಎಸ್‌.ಗಿರೀಶ್‌, ಎಸ್ಪಿ.

ಗ್ರಾಮೀಣ ಪ್ರದೇಶಗಳಿಗೆ ಗಾಂಜಾ ಸರಬರಾಜು ಮಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ವ್ಯಸನಿಗಳನ್ನು ಹಿಡಿದು ವಿಚಾರಿಸಿ ಗಾಂಜಾ ಸಿಗುವ ಮೂಲ ಪತ್ತೆ ಹಚ್ಚಬೇಕು. ಯತಿರಾಜು, ತಾಪಂ ಮಾಜಿ ಅಧ್ಯಕ್ಷ.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.