ಮಹಿಳೆಯರಿಗೆ ಸೀರೆ, ಬೆಡ್ಶೀಟ್ ಹಂಚಿಕೆ
Team Udayavani, Dec 17, 2019, 5:05 PM IST
ರಾಮನಗರ: ಇರುಳಿಗರ ಕಾಲೋನಿಯ ಕುಟುಂಬಗಳಿಗೆ ಬೆಡ್ಶೀಟ್, ಮಹಿಳೆಯರಿಗೆ ಸೀರೆ ವಿತರಿಸಿ ಕಾಲೋನಿಯಲ್ಲೇ ಕೇಕ್ ಕತ್ತರಿಸಿ ವಿತರಿಸಿದ ಕುಮಾರಣ್ಣ ಅಭಿಮಾನಿಗಳ ಸಂಘದ ಸದಸ್ಯರು, ಮಾಜಿ ಸಿಎಂ ಕುಮಾರಸ್ವಾಮಿಯವರ 60ನೇ ವರ್ಷದ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
ಶ್ರೀರಾಮ ದೇವರ ಬೆಟ್ಟತಪ್ಪಲಿನಲ್ಲಿರುವ ಇರುಳಿಗರ ಕಾಲೋನಿಯಲ್ಲಿ ಸೋಮವಾರ ಸಂಭ್ರಮ ಮನೆ ಮಾಡಿತ್ತು. ಮಾಜಿ ಸಿಎಂ ಎಚ್ ಡಿಕೆಯವರ ಜನ್ಮದಿನವನ್ನು ಅಭಿಮಾನಿ ಬಳಗದ ಸದಸ್ಯರು ಕಾಲೋನಿ ಸದಸ್ಯರೊಂದಿಗೆ ಬೆರೆತು ಕೇಕ್ ಕತ್ತರಿಸಿ ಆಚರಿಸಿದ್ದು, ಕಾಲೋನಿಯನಿವಾಸಿಗಳಲ್ಲಿ ಹೊಸ ಹುರುಪು ಮೂಡಿಸಿತು. ಜೆಡಿಎಸ್ ಕಾನೂನು ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಮಾತನಾಡಿ, ರಾಮನಗರ ಶಾಸಕರಾಗಿ, ಈಗ ಚನ್ನಪಟ್ಟಣದ ಶಾಸಕರಾಗಿ ಕುಮಾರಸ್ವಾಮಿ ಜನ ಮೆಚ್ಚುವ ಅಭವೃದ್ಧಿ ಕೈಗೊಂಡಿದ್ದಾರೆ. ರೈತರ ಬಂಧು ಕುಮಾರಸ್ವಾಮಿ, ರೈತರ ಎಲ್ಲಾ ಸಾಲ ಮನ್ನಾ ಮಾಡಿ ಮಾದರಿಯಾಗಿದ್ದಾರೆ.
ರಾಜ್ಯದ ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಕೊಡುಗೆ ನೀಡಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ತೆಗೆದುಕೊಂಡ ಮಹತ್ವದ ನಿರ್ಧಾರಗಳು, ಜಾರಿಗೊಳಿಸಿದ ಯೋಜನೆಗಳು, ಕಾರ್ಯಕ್ರಮಗಳು ಇತ್ಯಾದಿ ಬಗ್ಗೆ ಮಾಹಿತಿನೀಡಿದರು. ರಾಮನಗರದ ಅಭಿವೃದ್ಧಿಗೆಕುಮಾರಸ್ವಾಮಿ ಹಾಕಿಕೊಟ್ಟ ಬುನಾದಿ ಕಾರಣ. ಕುಮಾರಣ್ಣಗೆ ಚಾಮುಂಡೇಶ್ವರಿ ತಾಯಿ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಶುಭ ಹಾರೈಸಿದರು.
ಜೆಡಿಎಸ್ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಜಯಕುಮಾರ್, , ಕುಮಾರಣ್ಣ ಅಭಿಮಾನಿ ಬಳಗದ ಸಿ.ಎಸ್.ರಾಜು, ಜೆಡಿಎಸ್ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ಗಂಗಾಧರ್ ಜಿ.ಕೆ., ಜೆಡಿಎಸ್ ಜಿಲ್ಲಾಸೇವಾದಳಅಧ್ಯಕ್ಷ ಯೋಗೇಶ್ಕುಮಾರ್, ಶರತ್ ಬಾಬು, ರಂಗನಾಥ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ