ಛಾವಣಿ ಕುಸಿವ ಭೀತಿಯಲ್ಲಿ ಶಾಲೆ

ಭಯದಲ್ಲಿಯೇ ಮಕ್ಕಳು ಪಾಠ ಕೇಳುವ ಪರಿಸ್ಥಿತಿ • ಕಾಟಚಾರಕ್ಕಾಗಿ ಶಾಲಾ ಕಟ್ಟಡ ದುರಸ್ತಿ

Team Udayavani, Aug 2, 2019, 12:49 PM IST

rn-tdy-2

ಸರ್ಕಾರಿ ಶಾಲಾ ಮಕ್ಕಳು ಶಾಲಾ ಛಾವಣೆ ದುರಸ್ತಿಪಡಿಸುವಂತೆ ಒತ್ತಾಯಿಸಿದರು.

ಮಾಗಡಿ: ಇದೇ ನೋಡಿ ಒಳಗೆ ಹುಳುಕು, ಮೇಲೆ ತಳಕು ಅನ್ನುವುದು. ಕಲ್ಯಾಣ ಒಡೆಯರ ತಾಂಡದ ಸರ್ಕಾರಿ ಶಾಲೆಯ ಛಾವಣಿ ಕುಸಿಯುವ ಸ್ಥಿತಿಯಲ್ಲಿದೆ. ಶಾಲಾ ಮಕ್ಕಳು, ಶಿಕ್ಷಕರು, ಅಡುಗೆಯವರು ಛಾವಣೆ ಯಾವಾಗ ಕುಸಿಯುತ್ತದೆಯೋ ಎಂದು ಜೀವ ಕೈಯಲ್ಲಿಟ್ಟುಕೊಂಡು ಭಯದಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಮಕ್ಕಳು ಸಹ ಭಯದಲ್ಲಿಯೇ ಪಾಠ ಕೇಳುವಂತಾಗಿದೆ.

ಮಾಗಡಿ ತಾಲೂಕಿನ ಕೆವಿ ತಾಂಡ್ಯದ ಸರ್ಕಾರಿ ಶಾಲೆಯಲ್ಲಿ ಬಡ ಮಕ್ಕಳು ಶಿಕ್ಷಣ ಪಡೆಯಲು ಬರುತ್ತಾರೆ. ಬಡ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತದೆ ಎಂದು ಹೇಳುವ ಜನಪ್ರತಿನಿಧಿಗಳ ಕಣ್ಣಿಗೆ ಈ ಶಾಲೆಯ ಛಾವಣೆ ಪರಿಸ್ಥಿತಿ ಕಾಣಿಸುತ್ತಿಲ್ಲ ಎಂಬ ಆರೋಪ ನಿವಾಸಿಗಳಲ್ಲಿ ಕೇಳಿ ಬರುತ್ತಿದೆ.

ಛಾವಣೆ ದುರಸ್ತಿಗೂ ಅನುದಾನ: ಈ ಶಾಲೆಯ ಛಾವಣೆ ದುರಸ್ತಿಗೆ ಜಿಪಂ ಅನುದಾನ ಬಳಕೆಯಾಗಿದೆ. ಕೇವಲ ಸುಣ್ಣ- ಬಣ್ಣ ಬಳಿಯಲು ಅನುದಾನ ನೀಡಿಲ್ಲ. ಅನುದಾನ ಛಾವಣೆ ದುರಸ್ತಿಗೂ ನೀಡಿದೆ. ಗುತ್ತಿಗೆದಾರ ಮಾತ್ರ ಕಾಟಚಾರಕ್ಕೆ ಶಾಲಾ ಕಟ್ಟಡ ದುರಸ್ತಿಪಡಿಸಿ, ಸುಣ್ಣ- ಬಣ್ಣ ಬಳಿದು ಕೈಚಲ್ಲಿದೆ. ಬಹುತೇಕ ಇಲ್ಲಿ ಲಂಬಾಣಿ ಸಮುದಾಯದ ಬಡ ಕುಟುಂಬಗಳೇ ಹೆಚ್ಚು ವಾಸಿಸುತ್ತಿದ್ದಾರೆ. ಈ ಬಡಕುಟುಂಬಗಳು ಕೂಲಿ ಮಾಡಿದರೆ ಊಟ ಇಲ್ಲದಿದ್ದರೆ ಉಪವಾಸ. ಇಂಥ ಬಡಮಕ್ಕಳಿಗೆ ಗುಣಮಟ್ಟ ಶಿಕ್ಷಣ ಕೊಡಲು ಶಿಕ್ಷಕರು ಮಾತ್ರ ಉತ್ತಮ ಬೋಧನೆ ಮಾಡುತ್ತಿದ್ದಾರೆ. ಅಲ್ಲಿನ ಅಡುಗೆ ಸಿಬ್ಬಂದಿ ಸಹ ಗುಣಮಟ್ಟ ಪೌಷ್ಟಿಕ ಆಹಾರ ತಯಾರಿಸಿ ನೀಡಲಾಗುತ್ತಿದೆ.

ಕಟ್ಟಡವೇ ಶಿಥಿಲ: ಇವೆಲ್ಲವೂ ಸರಿ. ಆದರೆ, ಕಟ್ಟಡವೇ ಶಿಥಿಲಗೊಂಡಿದ್ದು, ಅದರಲ್ಲೂ ಮಳೆಗಾಲವಾಗಿರುವುದರಿಂದ ಛಾವಣೆ ದಿನೇದಿನೆ ಕಳಚಿ ಬೀಳುತ್ತಿದೆ. ಇದನ್ನು ದುರಸ್ತಿಪಡಿಸಬೇಕಾದ ಗುತ್ತಿಗೆದಾರ ಕಾಟಾಚಾರಕ್ಕೆ ದುರಸ್ತಿಪಡಿಸಿದ್ದಾರೆ. ಛಾವಣೆಯನ್ನು ಮಾತ್ರ ದುರಸ್ತಿಪಡಿಸಿಲ್ಲ. ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಶಾಲೆಯ ಮುಂಭಾಗ ಸುಣ್ಣ- ಬಣ್ಣ ಬಳಿದು ಅಂದಗೊಳಿಸಲಾಗಿದೆ.

ಕುಡಿಯುವ ನೀರಿಗಾಗಿ ಪರದಾಟ: ಒಂದೆಡೆ ಛಾವಣಿ ಕುಸಿವ ಭೀತಿಯಲ್ಲಿ ಸರ್ಕಾರಿ ಶಾಲೆ ಇದ್ದರೆ, ಮತ್ತೂಂದೆಡೆ ಶಾಲಾ ಮಕ್ಕಳಿಗಾಗಿ ನೀರಿನ ಟ್ಯಾಂಕ್‌ ನಿರ್ಮಿಸಿದ್ದರೂ, ಕುಡಿಯುವ ನೀರಿಗಾಗಿ ಪರದಾಡುವುದು ತಪ್ಪಿಲ್ಲ. ಕೊಳವೆ ಬಾವಿ ಸಹ ಕೊರೆಸಲಾಗಿದೆ. ಆದರೂ ಇಲ್ಲಿವರೆವಿಗೂ ಮೋಟರ್‌ ಅಳವಡಿಸಿ, ನೀರು ಪೂರೈಕೆ ಮಾಡಿಲ್ಲ, ನೀರಿಗಾಗಿ ಪರದಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಜನಪ್ರತಿನಿಧಿಗಳೇ ಇತ್ತ ಗಮನಹರಿಸಿ: ಇದೇ ನೋಡಿ ಒಳಗೆ ಹುಳುಕು, ಮೇಲೆ ತಳಕು ಅನ್ನುವುದು. ಸಂಬಂಧಪಟ್ಟ ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಇತ್ತ ಗಮನಹರಿಸಬೇಕು. ಶಿಥಿಲ ಛಾವಣೆ ಕೂಡಲೇ ದುರಸ್ತಿಪಡಿಸಿ, ಮಕ್ಕಳನ್ನು ರಕ್ಷಿಸಬೇಕಿದೆ. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಸ್ಥಳೀಯರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಧನಂಜಯ ನಾಯಕ್‌ ಅವರೊಂದಿಗೆ ಶಾಲೆಯ ಸ್ಥಿತಿಗತಿ ಕುರಿತು ಖುದ್ದು ಪರಿಶೀಲಿಸುವಂತೆ ಮಕ್ಕಳು, ಪೋಷಕರು ಶಾಲೆ ಮುಂದೆ ಪ್ರತಿಭಟನೆ ನಡೆಸಿದರು. ನ್ಯಾಯ ದೊರಕಿಸುವಂತೆ ಅಧ್ಯಕ್ಷರಲ್ಲಿ ಒತ್ತಾಯಿಸಿದರು.

ಕಳಪೆ ದುರಸ್ತಿ ವಿರುದ್ಧ ಮೇಲಧಿಕಾರಿಗಳಿಗೆ ದೂರು:

ಸರ್ಕಾರಿ ಶಾಲಾ ಸ್ಥಿತಿ ನೋಡಿದರೆ ನಿಜಕ್ಕೂ ಕಣ್ಣೀರು ಬರುತ್ತದೆ. ಬಡ ಮಕ್ಕಳು ಈ ಶಿಥಿಲ ಶಾಲೆಯಲ್ಲಿ ಕುಳಿತು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಛಾವಣೆಯಿಂದ ಉದುರುವ ಕಲ್ಲು ಮಣ್ಣಿನ ಊಟ ಮಾಡಬೇಕಿದೆ. ಬಡಮಕ್ಕಳು ಎಂದರೆ ತಾತ್ಸಾರವೇಕೆ. ಅನುದಾನದಡಿ ಗುತ್ತಿಗೆದಾರರು ಕಟ್ಟಡ ದುರಸ್ತಿ ಮಾಡಿದ್ದಾರೆ. ಛಾವಣೆ ದುರಸ್ತಿಪಡಿಸದೇ ಬಣ್ಣ ಬಳಿದು ಅಲಂಕಾರ ಮಾಡಿದರೆ ಯಾರಿಗೂ ಗೊತ್ತಾಗಲ್ಲ ಎಂದು ಭಾವಿಸಿದ್ದಾರೆ. ಈ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ದೂರು ನೀಡಲಾಗುವುದು. ● ಧನಂಜಯ ನಾಯಕ್‌, ತಾಪಂ ಅಧ್ಯಕ್ಷ, ಮಾಗಡಿ
● ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.