ಕೃಷಿಯಲ್ಲಿ  ವೈಜ್ಞಾನಿಕ ಮಾದರಿ ಅನಿವಾರ್ಯ


Team Udayavani, Sep 24, 2022, 2:52 PM IST

tdy-8

ರಾಮನಗರ: ಹೈನುಗಾರಿಕೆ ಹಾಗೂ ಅಣಬೆ ಬೇಸಾಯ ಎರಡು ಸಹ ಲಾಭದಾಯಕ ಉದ್ಯಮಗಳಾಗಿದೆ. ಕೃಷಿಗೆ ಪೂರಕವಾದ ಚಟುವಟಿಕೆಗಳಾಗಿವೆ. ವ್ಯವಸಾಯದ ಜೊತೆಗೆ ಇಂತಹ ಉಪಕಸುಬುಗಳು ಆರ್ಥಿಕ ಮಟ್ಟವನ್ನು ಹೆಚ್ಚಿಸುವತ್ತ ಶ್ರಮಿಸುತ್ತಿವೆ. ಪರಂಪರೆಯಿಂದಲೂ ನಮ್ಮಲ್ಲಿ ಇಂತಹ ಉಪಕಸುಬುಗಳನ್ನು ಮಾಡುತ್ತಿದ್ದರು ವೈಜ್ಞಾನಿಕ ಮಾದರಿಯಲ್ಲಿ ಮಾಡುವುದು ಅನಿವಾರ್ಯವಾಗಿದೆ ಎಂದು ರಾಮನಗರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಪ್ರಶಾಂತ್‌ ಪ್ರಭು ಹೇಳಿದರು.

ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ನಡೆದ ತರಬೇತಿ ಶಿಬಿರಗಳ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಇಂತಹ ತರಬೇತಿಗಳ ಅವಶ್ಯವಿದೆ. ತರಬೇತಿ ನಂತರ ಈ ವಿಧಾನಗಳನ್ನು ಅಳವಡಿಸಿಕೊಂಡು ಆಧುನೀಕರಣದತ್ತ ಹೆಜ್ಜೆ ಹಾಕಬೇಕು ಎಂದರು.

ಎಲ್ಲಾ ಸೌಲಭ್ಯ ಬಳಸಿಕೊಳ್ಳಿ: ನಬಾರ್ಡ್‌ನ ಡಿಡಿಎಂ ಹರ್ಷಿತ ಮಾತನಾಡಿ, ನಮ್ಮ ನಬಾರ್ಡ್‌ ಇರುವುದೇ ಕೃಷಿ ಚಟುವಟಿಕೆಗಳ ಅಭಿವೃದ್ಧಿಗಾಗಿ, ನಬಾರ್ಡ್‌ನಲ್ಲಿ ಇರುವಂತಹ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಕೃಷಿಗೆ ಪೂರಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ನಬಾರ್ಡ್‌, ಹೈನುಗಾರಿಕೆ, ಎರೆಹುಳು ಗೊಬ್ಬರ ತಯಾರಿಕೆ, ಅಣಬೆ ಬೇಸಾಯ ಇಂತಹ ಎಲ್ಲಾ ಚಟುವಟಿಕೆಗಳಿಗೂ ಸಾಲ ಸೌಲಭ್ಯದ ವ್ಯವಸ್ಥೆಯನ್ನು ಮಾಡುತ್ತಿದೆ. ಆದರೆ, ನಮ್ಮ ರೈತರಿಗೆ ಇದರ ಮಾಹಿತಿಯ ಕೊರತೆಯಿದ್ದು, ಉತ್ತಮ ಮಾಹಿತಿ ಪಡೆದು ಎಲ್ಲಾ ಸೌಲಭ್ಯಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕೃಷಿ ಚಟುವಟಿಕೆ ನಾಶವಾಗದ ಉದ್ಯಮ: ಜೋಗರದೊಡ್ಡಿ ಕರಕುಶಲ ತರಬೇತಿ ಸಂಸ್ಥೆ ನಿರ್ದೇಶಕ ವಿಠ್ಠಲ್‌ ಗೌರಿ ಮಾತನಾಡಿ, ಎಂದಿಗೂ ನಾಶವಾಗದ ಉದ್ಯಮಗಳೆಂದರೆ ಅದು ಕೃಷಿ ಪೂರಕ ಚಟುವಟಿಕೆಗಳು. ಆಧುನಿಕ ಮಾದರಿಯಲ್ಲಿ ಇಂತಹ ಚಟುವಟಿಕೆ ಕೈಗೊಂಡು ಉತ್ತಮ ಲಾಭಗಳಿಸಿ ಎಂದು ಹಾರೈಸಿದರು.

ಜೀವನ ಮಟ್ಟ ಸುಧಾರಿಸಿಕೊಳ್ಳಿ: ಸಂಸ್ಥೆ ನಿರ್ದೇಶಕ ಸ್ವಾಮಿ.ಎಂ.ಎಸ್‌ ಮಾತನಾಡಿ, ತರಬೇತಿಯಲ್ಲಿ ಕಲಿತ ವಿಷಯಗಳನ್ನು ಸಂಪೂರ್ಣವಾಗಿ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಬೇಕಿದೆ. ಬ್ಯಾಂಕಿನ ವಿಚಾರವಾಗಿ ಪೂರ್ವಗ್ರಹಪೀಡಿತರಾಗಬಾರದು. ಕಲ್ಪನೆಗಿಂತ ವಾಸ್ತವದ ಅನುಭವವಾಗಬೇಕು. ತಮ್ಮೆಲ್ಲರಿಗೂ ಸಂಸ್ಥೆ ಸಹಕಾರ ಯಾವಾಗಲೂ ಇರುತ್ತದೆ. ಬ್ಯಾಂಕಿನಲ್ಲಿ ಲಭ್ಯವಿರುವ ವಿಮೆ ಯೋಜನೆಗಳನ್ನು ಸೂಕ್ತ ಸಮಯಕ್ಕೆ ಮಾಡಿಸಿ, ನಮ್ಮ ಅವಲಂಬಿತರಿಗೆ ನಮ್ಮಿಂದ ಒಂದು ಕೊಡುಗೆಯನ್ನು ಕೊಟ್ಟಂತಾಗುತ್ತದೆ. ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಉಪನ್ಯಾಸಕರಾದ ದೇವೇಂದ್ರಪ್ಪ, ನೇತ್ರಾವತಿ, ಕನಕಾಂಬರಿ ಮಹಿಳಾ ಒಕ್ಕೂಟದ ಗಂಗಮ್ಮ, ಕವಿತ, ಕಾಂತಮ್ಮ ಧಾನ್‌ ಫೌಂಡೇಷನ್‌ನ ವರಲಕ್ಷ್ಮೀ, ಹುಲಿಬೆಲೆ ಹಾಲಿನ ಡೇರಿ ಸೆಕ್ರೆಟರಿ ಚಲುವರಾಜು ಹಾಗೂ ಶಿಬಿರಾರ್ಥಿಗಳು ಹಾಜರಿದ್ದರು

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.