ರಾಮನಗರ: ಕೊವ್ಯಾ ಕ್ಸಿನ್‌ ಎರಡನೇ ಡೋಸ್‌ಗೆ ಪರದಾಟ

ಎಲ್ಲೆಲ್ಲೂ ಕೊವ್ಯಾಕ್ಸಿನ್‌ ಸ್ಟಾಕ್‌ ಇಲ್ಲ ಎಂಬ ಬೋರ್ಡು !ಲಸಿಕೆ ಪಡೆಯಲು ವ್ಯಕ್ತಿಗತ ಅಂತರ ಮರೆತ ನಾಗರಿಕರು

Team Udayavani, May 14, 2021, 1:53 PM IST

1305rmnp4_1305bg_2

ರಾಮನಗರ: ಮೇ 14ರ ಶುಕ್ರವಾರದಿಂದ 18 ರಿಂದ 44 ವರ್ಷ ವಯೋಮಾನದವರಿಗೆ ಕೋವಿಡ್‌ ಲಸಿಕೆ ನೀಡುವುದನ್ನು ನಿಲ್ಲಿ ಸಲಾ ಗುತ್ತದೆ. 45 ವರ್ಷ ಮೇಲ್ಪಟ್ಟವರಿಗೂ ಮೊದಲನೆ ಡೋಸ್‌ ಲಸಿಕೆ ಕೊಡುವುದಿಲ್ಲ ಎಂಬ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಗುರು ವಾರ ಲಸಿಕೆ ಪಡೆಯಲು ನಾಗರಿಕರು ವ್ಯಕ್ತಿಗತ ಅಂತರ ಮೆರೆತು ಮುಗಿಬಿದ್ದ ಪ್ರಸಂಗ ನಡೆದಿದೆ. ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ತಾಲೂಕು ಆಸ್ಪತ್ರೆಗಳಲ್ಲೂ ಇದೇ ಪರಿಸ್ಥಿತಿ ಗುರುವಾರ ಬೆಳಗ್ಗೆ ಕಂಡು ಬಂದಿದೆ.

ಸ್ಥಳೀಯರು ಮತ್ತು ಬೆಂಗಳೂರು ನಗರ ನಿವಾಸಿಗಳು ಸೇರಿ ದಂತೆ 45 ವರ್ಷ ಮೇಲ್ಪಟ್ಟ ನಾಗರಿಕರು ಎರಡನೇ ಡೋಸ್‌ಗೆ ಮುಗಿಬಿದ್ದರೆ, 18 ರಿಂದ 44 ವರ್ಷ ವಯೋಮಾನದವರು ಹೇಗಾದರು ಮಾಡಿ ಮೊದಲ ಡೋಸ್‌ ಲಸಿಕೆ ಪಡೆದುಕೊಳ್ಳೋಣ ಎಂದು ಆಸ್ಪತ್ರೆಗಳಿಗೆ ಧಾವಿಸಿದ್ದರು.

ವ್ಯಕ್ತಿಗತ ಅಂತರ ಮರೆತ ನಾಗರಿಕರು:

ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ, ಬುಧವಾರ ನಾಗರಿಕರು ಸರದಿ ಸಾಲಿನಲ್ಲಿ ನಿಂತು ಲಸಿಕೆ ಪಡೆ ದಿದ್ದರು. ಆದರೆ ಗುರುವಾರ ಆಗಮಿಸಿದ್ದ ನಾಗರಿಕರು ತಾಳ್ಮೆ ಕಳೆದುಕೊಂಡಂತೆ ಕಂಡು ಬಂತು. ನಾ ಮುಂದು, ತಾ ಮುಂದು ಎಂದು ಮುಗಿಬಿದ್ದ ನಾಗರಿಕರು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಲಿಲ್ಲ. ಆಸ್ಪತ್ರೆಯ ಸಿಬ್ಬಂದಿ ತಿಳಿಹೇಳಿ ಹೈರಾಣಾಗಿದ್ದರು. ಅಲ್ಲಿ ಪೊಲೀ ಸರು ಸಹ ಕಾಣಲಿಲ್ಲ. ಮೊದಲ ನೂರು ಮಂದಿಗೆ ಲಸಿಕೆ ಕೊಟ್ಟ ನಂತರ ಉಳಿದವರನ್ನು ಸಿಬ್ಬಂದಿ ವಾಪಸ್ಸು ಕಳುಹಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕೊವ್ಯಾ ಕ್ಸಿನ್‌ ಎರಡನೇ ಡೋಸ್‌ಗೆ ಪರದಾಟ:

ಮೊದಲ ಡೋಸ್‌ ಕೋವ್ಯಾಕ್ಸಿನ್‌ ಲಸಿಕೆ ಪಡೆದ ನಾಗರಿಕರು ಎರಡನೇ ಡೋಸ್‌ಗಾಗಿ ಪರದಾಡುತ್ತಿದ್ದಾರೆ. ಮೊದಲ ಡೋಸ್‌ ಪಡೆದ ನಂತರ 60 ದಿನಗಳ ಒಳಗೆ ಎರಡನೇ ಡೋಸ್‌ ಪಡೆಯ ಬೇಕು ಎಂದು ವೈದ್ಯರು ಹೇಳಿದ್ದಾರೆ. ಆದರೆ ಜಿಲ್ಲೆಯಲ್ಲಿ ಕೊವ್ಯಾಕ್ಸಿನ್‌ ಸ್ಟಾಕ್‌ ಇಲ್ಲ ಎಂಬ ಬೋರ್ಡು ನೇತಾಡುತ್ತಿದೆ. ಅವಧಿ ಮುಗಿಯುವ ವೇಳೆಗೆ ಕೊವ್ಯಾಕ್ಸಿನ್‌ ಲಸಿಕೆ ಬರದಿದ್ದರೆ ತಮ್ಮ ಪಾಡೇನು ಎಂದು ಕೆಲ ವು ಹಿರಿಯ ನಾಗರಿಕರು ಆತಂಕ ವ್ಯಕ್ತಪಡಿಸಿದರು. ಕೊವ್ಯಾ ಕ್ಸಿನ್‌ ಏಕೆ ಕೊಟ್ಟಿರು ಎಂದು ಸರ್ಕಾ ರದ ವಿರುದ್ಧ ಹರಿಹಾಯ್ದರು.

ವಿಡಿಯೊ ಕಾನ್ಪರೆನ್ಸುಗಳಲ್ಲೇ ಮುಳುಗಿರುವ ಅಧಿಕಾರಿಗಳು!:

ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಿ ರಂಜನ್‌, ಆರ್‌. ಸಿ. ಎಚ್‌ ಅಧಿಕಾರಿ ಡಾ.ಪದ್ಮಾ ಸದಾ ಬ್ಯುಸಿ. ಲಸಿಕೆಯ ಬಗ್ಗೆ ಮಾಹಿತಿ ಪಡೆಯಲು ಕರೆ ಮಾಡಿದಾಗಲೆಲ್ಲ ಬ್ಯುಸಿ ಕರೆ ಗಳು ಇಲ್ಲವೇ ತಾವು ವಿ.ಸಿ.ಯಲ್ಲಿರುವುದಾಗಿ (ವಿಡಿಯೊ ಕಾನ್ಫರೆನ್ಸ್‌) ಹೇಳಿ ಕರೆ ಕಟ್‌ ಮಾಡು ವುದು, ಮೆಸೇಜ್‌ ಕಳುಹಿಸುವುದು ಮಾಡುತ್ತಿದ್ದಾರೆ ಎಂದು ಚುನಾಯಿತ ಪ್ರತಿನಿಧಿಗಳು ದೂರಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೂ ಇದೇ ಆನುಭವ ಆಗಿದೆ. ಅತ್ತ ಮುಖ್ಯ ಮಂತ್ರಿಗಳು ಮತ್ತು ಸಚಿವರು ಸದಾ ಒಂದಿಲ್ಲೊಂದು ಸಭೆಯಲ್ಲೇ ಮುಳುಗಿರುತ್ತಾರೆ. ಇತ್ತ ಅಧಿಕಾರಿ ಗಳು ವಿಡಿಯೊ ಕಾನ್ಫರೆ ನ್ಸ್‌ಗಳಲ್ಲಿ ತಲ್ಲೀನರಾಗಿರುತ್ತಾರೆ ಎಂದು ಕೆಲವು ಚುನಾಯಿತ ಪ್ರತಿನಿಧಿಗಳು ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.