ತಿಮ್ಮಕ್ಕ ನೆಟ್ಟು ಬೆಳೆಸಿದ್ದ ಮರಗಳಿಗೆ ಕೊಡಲಿ?

ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ನೆಪ | 287 ಆಲದ ಮರಗಳ ಮಾರಣ ಹೋಮಕ್ಕೆ ರಾಜ್ಯ ಸರ್ಕಾರ ಸಜ್ಜು

Team Udayavani, Jun 4, 2019, 10:15 AM IST

RN-TDY-1

ಕುದೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲು ಮರದ ತಿಮ್ಮಕ್ಕ ನೆಟ್ಟು, ತನ್ನ ಮಕ್ಕಳಂತೆ ಬೆಳೆಸಿದ್ದ ಆಲದ ಮರಗಳಿಗೆ ಕುತ್ತು ಬಂದೊದಗಿದೆ. ರಾಜ್ಯ ಹೆದ್ದಾರಿ 94ರ ಅಭಿವೃದ್ಧಿ ಮತ್ತು ಅಗಲೀಕರಣದ ನೆಪದಲ್ಲಿ ಸರ್ಕಾರ, ಕುದೂರಿನಿಂದ-ಹುಲಿಕಲ್‌ ಗ್ರಾಮದ ಮಾಗದಲ್ಲಿರುವ ಸುಮಾರು 287 ಆಲದ ಮರಗಳಿಗೆ ಕೊಡಲಿಪೆಟ್ಟು ನೀಡುವ ಮೂಲಕ ಮರಗಳ ಮಾರಣ ಹೋಮಕ್ಕೆ ಸಜ್ಜಾಗಿದೆ. ಆದರೆ ಸರ್ಕಾರದ ಈ ನಡೆಗೆ ಸಾರ್ವಜನಿಕರಿಮದ ಭಾರೀ ವಿರೋಧ ವ್ಯಕ್ತವಾಗಿದೆ.

ರಸ್ತೆ ಇಕ್ಕೆಲಗಳಲ್ಲಿರವ ಮರಗಳನ್ನು ಉರುಳಿಸಲಿರುವ ಸರ್ಕಾರ: ಸರ್ಕಾರ, ಹಲಗೂರು-ಬಾಗೇಪಲ್ಲಿ ಸಂಪರ್ಕದ ರಾಜ್ಯ ಹೆದ್ದಾರಿ ರಸ್ತೆಅಗಲೀಕರಣ ಕಾರ್ಯಕ್ಕೆ ಮುಂದಾಗಿದೆ. ಇದರಿಂದ ರಾಮನಗರ ಜಿಲ್ಲೆಯ ಹುಲಿಕಲ್‌ ಗ್ರಾಮದಲ್ಲಿರುವ ಸಾಲು ಮರದ ತಿಮ್ಮಕ್ಕನವರು ಬೆಳೆಸಿದ ಬೃಹತ್‌ ಗಾತ್ರದ ಮರಗಳು ಧರೆಗುರುಳಲಿವೆ. ಕುದೂರಿ ನಿಂದ ಹುಲಿಕಲ್‌ ಗ್ರಾಮದವರೆಗೆ 4 ಕಿಮೀ. ರಸ್ತೆಯ ಎರಡು ಬದಿಗಳಲ್ಲಿ ಸಾಲು ಮರದ ತಿಮ್ಮಕ್ಕನವರು ಬೆಳೆಸಿರುವ ಬೃಹತ್‌ ಆಲದ ಮರಗಳು ಇವೆ. ರಸ್ತೆಯ ಇಕ್ಕೆಲಗಳಲ್ಲಿ ಕಷ್ಟ ಪಟ್ಟು ಬೆಳೆಸಿರುವ ಮರಗಳೇ ತಿಮ್ಮಕ್ಕನ ಜೀವಾಳ. ಅವರ ಈ ಅದ್ಭುತ ಕಾರ್ಯವನ್ನು ರಾಜ್ಯ,ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿದೆ.ಭಾರತ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಮರಗಳನ್ನು ಕಡಿಯಲು ಬಿಡುವುದಿಲ್ಲ: ರಸ್ತೆ ಅಗಲೀಕರಣ ಕಾರ್ಯ ಆರಂಭವಾದರೆ, ಈಗಿರುವ 287 ಮರಗಳ ಕುರುಹು ಇಲ್ಲದಂತೆ ಆಗುತ್ತದೆ. ಇದರೊಂದಿಗೆ ಹುಲಿಕಲ್‌ ಗ್ರಾಮದಲ್ಲಿರುವ ಸಾಲು ಮರದ ತಿಮ್ಮಕ್ಕನವರ ಮನೆಯೂ ಸಹ ನೆಲಸಮವಾಗಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾಲು ಮರದ ತಿಮ್ಮಕ್ಕ, ಮರಗಳು ನನ್ನ ಮಕ್ಕಳಿದ್ದಂತೆ. ನಾನು ಯಾವುದೇ ಕಾರಣಕ್ಕೂ ಸಾಲು ಮರಗಳನ್ನು ಕಡಿಯಲು ಬಿಡುವುದಿಲ್ಲ. ನನ್ನ ಮಾತಿಗೆ ಬೆಲೆ ಕೊಡದೆ ಹೋದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕುದೂರಿನ ಹೃದಯ ಭಾಗವೇ ಕಣ್ಮರೆ: ರಾಜ್ಯ ಹೆದ್ದಾರಿ ಕಾಯ್ದೆ 1964 ಅಧ್ಯಾಯ-3 ಕ್ಲಾಸ್‌ 7(1)ರ ಅಡಿಯಲ್ಲಿ ಹೆದ್ದಾರಿ ರಸ್ತೆಗಡಿಗಳನ್ನು ಗುರುತಿಸುವ ಬಗ್ಗೆ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ರಾಮನಗರ ವಿಭಾಗದಿಂದಜೂ.1ರಂದು ಹೆದ್ದಾರಿ ವಿಸ್ತರಣೆ ಸಂಬಂಧಿಸಿದಂತೆ, ರಾಮನಗರ ತಾಲ್ಲೂಕು, ಮಾಗಡಿ, ಕಲ್ಯಾ, ಮರೂರು, ಕುದೂರು, ಹುಲಿಕಲ್‌,ಕಣನೂರು, ಸುಗ್ಗನಹಳ್ಳಿ ಗ್ರಾಮಗಳ ಸರ್ವೇ ನಂಬರ್‌ಗಳ ಬಗ್ಗೆ ಜಾಹೀರಾತು ಪ್ರಕಟಿಸಿದ್ದರು.ಇದರ ಅನ್ವಯ ರಸ್ತೆ ಮಧ್ಯ ಭಾಗದಿಂದ40 ಮೀ. ವರೆಗೆ ಇರುವ ಜಮೀನು ರಸ್ತೆ ವಿಸ್ತರಣೆಗಾಗಿ ಬಳಕೆಯಾಗುತ್ತದೆ. ಲೋಕೋಪಯೋಗಿ ಇಲಾಖೆಯವರು ಪ್ರಕಟಿಸಿರುವ ಸರ್ವೇ ನಂಬರುಗಳು ಕುದೂರು ಗ್ರಾಮದ ಮುಖ್ಯ ರಸ್ತೆಯ ಅಕ್ಕಪಕ್ಕದ ಕಟ್ಟಡಗಳ ಸರ್ವೇ ನಂಬರ್‌ಗಳು ಇದಾಗಿದೆ.

ಗ್ರಾಮದ ಚಿತ್ರಣವೇ ಬದಲು: ರಸ್ತೆ ಅಗಲೀಕರಣ ಯೋಜನೆಯಂತೆ ರಸ್ತೆ ವಿಸ್ತರಣೆಯಾದರೆ ಕುದೂರು ಗ್ರಾಮದ ಚಿತ್ರಣವೇಇಲ್ಲದಂತಾಗುತ್ತದೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ವ್ಯಾಪಾರ ಮಳಿಗೆಗೆಳು ಇರುವುದರಿಂದ ವ್ಯಾಪಾರಸ್ತರು ಕಂಗಾಲಾಗಿದ್ದಾರೆ.ಒಂದು ವೇಳೆ ರಸ್ತೆ ಅಗಲೀಕರಣ ಮಾಡುವುದಾದರೆ ಕುದೂರು ಗ್ರಾಮದ ಹೊರವಲಯದಲ್ಲಿರುವ ಬೈಪಾಸ್‌ ಮೂಲಕ ಮಾಡಲಿ ಎಂದು ಗ್ರಾಮಸ್ಥರು ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.