ಎಸ್ಐಗೆ ಸೋಂಕು, ಠಾಣೆ ಸೀಲ್ಡೌನ್
Team Udayavani, Jul 7, 2020, 7:25 AM IST
ರಾಮನಗರ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಕೋವಿಡ್ 19 ಸೈನಿಕರಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಪೊಲೀಸ್ ಠಾಣೆಯೊಂ ದನ್ನು ಸೀಲ್ಡೌನ್ ಮಾಡಲಾಗಿದೆ. ಸ್ಯಾನಿಟೈಸೇಷನ್ಗೆ ಎಸ್ಪಿ ಕಚೇರಿಯಿರುವ ಪೊಲೀಸ್ ಭವನ ಕೂಡ ಬಂದ್ ಆಗಿದೆ.
ಟೊಯೋಟಾ ಕಿರ್ಲೋಸ್ಕರ್ ಕಾರ್ಖಾನೆ ಒಂದು ದಿನದ ಮಟ್ಟಿಗೆ ಲಾಕ್ಡೌನ್ ಆಗಿದೆ. ಜಿಲ್ಲೆಯ ಕನಕಪುರ ತಾಲೂಕು ಕೋಡಿಹಳ್ಳಿ ಪೊಲೀಸ್ ಠಾಣೆ ಎಸ್ಐಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆ ಸೀಲ್ಡೌನ್ ಮಾಡಲಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 15 ಮಂದಿ ಸಿಬ್ಬಂದಿ ಕ್ವಾರಂಟೈನ್ಗೊಳಿಸಲಾಗಿದೆ.
ಪೊಲೀಸ್ ಭವನ ಬಂದ್: ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಒಬ್ಬ ಸಿಬ್ಬಂದಿಗೆ ಸೊಂಕು ಪತ್ತೆ ಯಾಗಿರುವುದರಿಂದ ಪೊಲೀಸ್ ಭವನವನ್ನು ಸ್ಯಾನಿಟೈಸ್ಗೊಳಿಸಲು ಕಚೇರಿ ಮುಚ್ಚಲಾ ಗಿದೆ ಎಂದು ಜಿಲ್ಲಾ ಎಸ್ಪಿ ಅನೂಪ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ. ರಾಮನಗರದಲ್ಲಿ ಒಟ್ಟು 6 ಮಂದಿ ಪೊಲೀಸರಿಗೆ ಸೋಂಕು ತಗುಲಿದೆ. ಈ ಪೈಕಿ ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ದಿನದ ಮಟ್ಟಿಗೆ ಟೊಯೋಟಾ ಬಂದ್: ಇನ್ನೊಂದೆಡೆ ಬಿಡದಿಯ ಟೊಯೋಟಾ ಕಾರ್ಖಾನೆಯ ಕಾರ್ಮಿಕರೊಬ್ಬರು ಸೋಂಕು ತಗುಲಿ ಮೃತಪಟ್ಟಿದ್ದಾರೆ. ಸದರಿ ನೌಕರನ ತಂದೆಯವರಲ್ಲಿ ಸೋಂಕು ಕಾಣಿಸಿಕೊಂಡು ಅವರು ಜುಲೈ 2ರಂದು ಮೃತಪಟ್ಟಿದ್ದರು. ಇದೀಗ ನೌಕರ ಮೃತಪಟ್ಟಿದ್ದಾನೆ. ಹೀಗಾಗಿ ಟೊಯೋಟಾ ಕಾರ್ಖಾನೆಯನ್ನು ಸೋಮವಾರ ಸ್ಥಗಿತಗೊಳಿಸಲಾಗಿದೆ.
ಪಕ್ಕದ ಮನೆಗೂ ಹರಡಿದ ಸೋಂಕು?: ನಗರ ದ ಬಡಾವಣೆಯೊಂದರಲ್ಲಿ ಕೆಲದಿನಗಳ ಹಿಂದೆ ಸೋಂಕಿತ ವ್ಯಕ್ತಿಯಿದ್ದ ಪಕ್ಕದ ಮನೆಗೂ ಸೋಂಕು ಹರಡಿರುವ ಬಗ್ಗೆ ಮಾಹಿತಿ ಲಭ್ಯವಾ ಗಿದೆ. ಸೀಲ್ಡೌನ್ ಬೇಡ ಎಂದು ಹರಿಹಾಯುವ ಮಂದಿಗೆ ಈ ಪ್ರಕರಣ ಪಾಠವಾಗಬೇಕಾಗಿದೆ.
ಆರೋಗ್ಯ ಇಲಾಖೆ ಎಡವಟ್ಟು: ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ವಸತಿ ನಿಲಯದಲ್ಲಿ ಸೋಂಕಿನ ಶಂಕೆಯಿದ್ದ ಕಾರಣ 25 ಮಂದಿಯನ್ನು ಕ್ವಾರಂಟೈನ್ಗೊಳಿಸಲಾ ಗಿತ್ತು. ಅವೆರೆಲ್ಲ ಗಂಟಲ ದ್ರವದ ಫಲಿತಾಂಶ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಬಿಡು ಗಡೆ ಮಾಡಲಾಗಿತ್ತು. ಆದರೆ ಬಿಡುಗಡೆಯಾದವರ ಪೈಕಿ ಒಬ್ಬರಿಗೆ ಸೋಂಕಿರುವುದು ಗೊತ್ತಾಗಿ, ಅತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಳೇಗೌಡನದೊಡ್ಡಿ, ಚಿಕ್ಕೇಗೌಡನದೊಡ್ಡಿ ಹಾಗೂ ಮಾರೇಗೌಡನದೊಡ್ಡಿ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕ್ವಾರಂಟೈನ್ನಲ್ಲಿ ಇದ್ದವರಿಗೆ ಶೋಧ ನಡೆಸುತ್ತಿದ್ದರೆ ಎಂದು ಗೊತ್ತಾಗಿದ್ದು, ಆ ಗ್ರಾಮದ ನಿವಾಸಿಗಳು ಇಲಾಖೆ ವಿರುದ ತೀವ್ರ ಆಕ್ರೋಶ ವ್ಯಕ್ತಪಡಿಸಿಸುತ್ತಿದ್ದಾರೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ