ಸುಧಾರಣೆಗೆ ಸರ್‌ಎಂವಿ ಆದ್ಯತೆ


Team Udayavani, Sep 16, 2019, 3:29 PM IST

rn-tdy-2

ಚನ್ನಪಟ್ಟಣ ತಾಲೂಕಿನ ರಾಂಪುರದಲ್ಲಿ ನೇಗಿಲಯೋಗಿ ಟ್ರಸ್ಟ್‌ನಿಂದ ನಡೆದ ಸರ್‌ಎಂ.ವಿಶ್ವೇಶ್ವರಯ್ಯ ಜಯಂತಿ ಪ್ರಯುಕ್ತ ಗಿಡ ನೆಡಲಾಯಿತು.

ಚನ್ನಪಟ್ಟಣ: ಸರ್‌ಎಂ.ವಿಶ್ವೇಶ್ವರಯ್ಯ ಪ್ರಗತಿಪರ ಸುಧಾರಣೆಗಳಿಗೆ ಆದ್ಯತೆ ನೀಡಿದ್ದರು. ಈ ಮೂಲಕ ಮೈಸೂರು ಸಂಸ್ಥಾನವನ್ನು ದೇಶದಲ್ಲಿಯೇ ಮಾದರಿ ರಾಜ್ಯವನ್ನಾಗಿ ರೂಪಿಸಲು ಶ್ರಮಿಸಿದ ಮಹನೀಯರು ಎಂದು ನೇಗಿಲಯೋಗಿ ಟ್ರಸ್ಟ್‌ನ ಸಂಸ್ಥಾಪಕ ಕಾರ್ಯದರ್ಶಿ ವಿಜಯ್‌ ರಾಂಪುರ ತಿಳಿಸಿದರು.

ತಾಲೂಕಿನ ರಾಂಪುರ ಗ್ರಾಮದ ಜಗದೇವರಾಯನ ಗುಂಡುತೋಪಿನ ಆವರಣದಲ್ಲಿ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್‌ವತಿಯಿಂದ ಸರ್‌ಎಂ.ವಿಶ್ವೇಶ್ವರಯ್ಯ 160ನೇ ಜಯಂತಿಯನ್ನು ಗಿಡ ನೆಡುವ ಮೂಲಕ ಆಚರಿಸಿದ ಅವರು ಮಾತನಾಡಿ, ಅಪಾರ ಪರಿಶ್ರಮದಿಂದ ಸರ್‌ಎಂವಿ ಅವರು ಮೈಸೂರು ಸಂಸ್ಥಾನದ ದಿವಾನರಾಗಿ, ಕೃಷಿ, ಕೈಗಾರಿಕೆ, ಶಿಕ್ಷಣ, ನೀರಾವರಿ, ವಿದ್ಯುಚ್ಛಕ್ತಿ, ತಂತ್ರಜ್ಞಾನ ಮುಂತಾದ ಕ್ಷೇತ್ರಗಳ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡಿದ್ದರು. ಈ ಮೂಲಕ ಆಧುನಿಕ ಮೈಸೂರಿನ ಪ್ರಗತಿಗೆ ಮುನ್ನುಡಿ ಬರೆದರು. ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸುವ ಮೂಲಕ ಕನ್ನಡ ಭಾಷಾ ಬೆಳವಣಿಗೆಗೆ ಕಾರಣ ಕರ್ತರಾದ ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ ಎಂದರು.

ಸರ್‌ಎಂವಿ ಪ್ರಾಮಾಣಿಕತೆ, ಶಿಸ್ತು ಮಾದರಿ: ಯುವ ಮುಖಂಡ ತುಂಬೇನಹಳ್ಳಿ ಕಿರಣ್‌ ರಾಜ್‌ ಮಾತನಾಡಿ, ಸರ್‌ಎಂವಿ ಅವರ ಪ್ರಾಮಾಣಿಕತೆ, ಶಿಸ್ತು ಮತ್ತು ಶ್ರದ್ಧೆ ಯುವ ಜನಾಂಗಕ್ಕೆ ಮಾದರಿ. ಆಧುನಿಕ ಭಾರತಕ್ಕೆ ಮೇಲ್ಪಂಕ್ತಿ ಹಾಕಿ ಕೊಟ್ಟ ಅವರ ಸಾಧನಾ ಪಥ ಸ್ಮರಣೀಯವಾದುದು. ಅವರ ಕೃತಿ ನನ್ನ ವೃತ್ತಿ ಜೀವನದ ನೆನಪುಗಳು ಯುವ ಜನಾಂಗಕ್ಕೆ ಸ್ಫೂರ್ತಿದಾಯಕ ಗ್ರಂಥವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಜಾನಪದ ಗಾಯಕ ಚೌ.ಪು.ಸ್ವಾಮಿ, ದಾಸರಹಳ್ಳಿ ಅಭಿಷೇಕ್‌, ರಾಂಪುರ ಗ್ರಾಮಸ್ಥರಾದ ಆರ್‌.ಎಸ್‌.ಶಶಿಧರ್‌(ಕಿಟ್ಟಿ), ಮಹೇಶ್‌, ಕೆ.ಜಗದೀಶ್‌, ಆರ್‌.ಎಂ.ಶಿವಕುಮಾರ್‌, ನವ್ಯಶ್ರೀ, ಮೌನೀಷ್‌, ನವನಿಧಿ, ಅಚಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುವೆ: ಸಿ.ಪಿ ಯೋಗೇಶ್ವರ್

Ramanagara; ಸಂಸತ್ ಗೆ ಹೋಗುವುದಿಲ್ಲ, ರಾಜ್ಯ ರಾಜಕೀಯದಲ್ಲೇ ಇರುತ್ತೇನೆ: ಸಿ.ಪಿ ಯೋಗೇಶ್ವರ್

10

Magadi: ಅಂತರ್ಜಲ ಕುಸಿತ; ಒಣಗುತ್ತಿವೆ ಬೆಳೆಗಳು

9

ಬೊಂಬೆನಗರಿಯಲ್ಲಿ ಕಾಮನಹಬ್ಬದ ರಂಗು!

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

Bangalore Rural Lok Sabha constituency; ಡಿಸಿಎಂ, ಮಾಜಿ ಮುಖ್ಯಮಂತ್ರಿಯ ಪ್ರತಿಷ್ಠೆಯ ಕಣ

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

ಈ ಬಾರಿಯ ಚುನಾವಣೆ ಧರ್ಮಯುದ್ಧ: ಬಿಜೆಪಿ ಅಭ್ಯರ್ಥಿ ಡಾ| ಸಿ.ಎನ್‌.ಮಂಜುನಾಥ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.