ಅರಣ್ಯ ಪ್ರದೇಶ, ಗೋಮಾಳದಲ್ಲಿ ನಿವೇಶನ

ಕನಕಪುರದಲ್ಲಿ ಕೆರೆ,ಕಟ್ಟೆ,ಬೆಟ್ಟ,ಗುಡ್ಡ ಎಲ್ಲವೂ ಮಾಯ: ರೈತ ಸಂಘ ಆರೋಪ

Team Udayavani, Nov 23, 2020, 4:04 PM IST

ಅರಣ್ಯ ಪ್ರದೇಶ, ಗೋಮಾಳದಲ್ಲಿ ನಿವೇಶನ

ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಸಬಾ ಹೋಬಳಿ, ರಾಯಸಂದ್ರ ಗ್ರಾಮದ ಸಮೀಪ ಸರ್ವೆ ಸಂಖ್ಯೆ 101/1 ರಲ್ಲಿ (ಗಂಗಾಧರನ ಗುಡ್ಡ ರಾಜ್ಯಅರಣ್ಯ ಪ್ರದೇಶ) ಕರ್ನಾಟಕ ಹೌಸಿಂಗ್‌ ಬೋರ್ಡ್‌ ವಿಂಗಡಿಸಿರುವ ನಿವೇಶನಕೊಳ್ಳುವ ನಾಗರೀಕರು ಎಚ್ಚರದಿಂದ ಇರಬೇಕು. ಕಾರಣ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ನಿವೇಶನ ವಿಂಗಡಿಸಲಾಗಿದೆ ಎಂದು ಕನಕಪುರದ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಎಚ್ಚರಿಸಿದ್ದಾರೆ.

ಈ ಸಂಬಂಧ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಸಂಪತ್‌, ರಾಯಸಂದ್ರ ಗ್ರಾಮದ ಬಳಿ ಕರ್ನಾಟಕ ಹೌಸಿಂಗ್‌ ಬೋರ್ಡ್‌ 164 ಎಕೆರೆ ಜಮೀನು ಖರೀದಿಸಿ ವಸತಿ ಬಡಾವಣೆ ನಿರ್ಮಿಸಿದೆ. ಗಂಗಾಧರನ ಗುಡ್ಡ ರಾಜ್ಯ ಅರಣ್ಯ ಪ್ರದೇಶ ವ್ಯಾಪ್ತಿಯ ಅರಣ್ಯ ಪ್ರದೇಶದ ಬಫ‌ರ್‌ ಝೋನ್‌38.10ಎಕರೆ ಭೂಮಿಯೂ ಸೇರಿಕೊಂಡಿದೆ. ಅರಣ್ಯ ಇಲಾಖೆ 38.10 ಎಕರೆ ಭೂಮಿ ಬಫ‌ರ್‌ ಝೋನ್‌ ಎಂದು ಸ್ಪಷ್ಟವಾಗಿ ತಿಳಿಸಿದ್ದರೂ ಅಲ್ಲಿ ಬಡಾವಣೆ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ.

ಪ್ರಭಾವಿ ರಾಜಕೀಯ ವ್ಯಕ್ತಿಯ ಕುತಂತ್ರ!: ಅರಣ್ಯ ಪ್ರದೇಶದ ಬಫ‌ರ್‌ ಜೋನ್‌ನಲ್ಲಿ ಹಲವಾರು ರೈತರು ಉಳುಮೆ ಮಾಡಿಕೊಂಡಿದ್ದರು. ಹೀಗಾಗಿ ಅವರಿಗೆ ಸಾಗುವಳಿ ಚೀಟಿ ಸಿಕ್ಕಿರಲಿಲ್ಲ. ಈ ಭೂಮಿಗೆ ಲಗತ್ತಾದ ಇತರ ಸರ್ವೆ ಸಂಖ್ಯೆಗಳಲ್ಲಿನ ಭೂಮಿಯನ್ನು ಹೌಸಿಂಗ್‌ ಬೋರ್ಡು ವಸತಿ ಬಡಾವಣೆ ನಿರ್ಮಿಸಲು ಭೂಸ್ವಾಧೀನಕ್ಕೆ ಮುಂದಾಗಿತ್ತು. ಸರ್ವೆ ಸಂಖ್ಯೆ 101/1ರ ಒಟ್ಟು ವಿಸ್ತೀರ್ಣ 249 ಎಕರೆ ಭೂಮಿ ಪೈಕಿ ಅರಣ್ಯ ಮತ್ತು ಗೋಮಾಳ ಪ್ರದೇಶವಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿಯ ಸದಸ್ಯೆಯೊಬ್ಬರ ಪತಿ ರಾಜಕೀಯ ಮುಖಂಡ ರವಿ ಎಂಬಾತ ಅರಣ್ಯ ಮತ್ತು ಗೋಮಾಳ ಭೂಮಿಗೆ ಅಕ್ರಮ ಮತ್ತು ಬೇನಾಮಿ ಹೆಸರಿನಲ್ಲಿ ಖಾತೆಗಳನ್ನು ಸೃಜಿಸಿಕೊಂಡು ಅದನ್ನು ಹೌಸಿಂಗ್‌ ಬೋರ್ಡ್‌ಗೆ ಮಾರಿ ಕೋಟ್ಯಂತರ ರೂ. ಲಪಟಾಯಿಸುವ ಹುನ್ನಾರ ನಡೆಸಿದ್ದಾರೆ. ಬಫ‌ರ್‌ ಜೋನ್‌ನಲ್ಲಿ ಉಳುಮೆ ಮಾಡುತ್ತಿದ್ದ ರೈತರ ಕೈಗೆ ಒಂದಿಷ್ಟು ದುಡ್ಡು ಕೊಟ್ಟು, ಸರ್ಕಾರಕ್ಕೆ ಹೋದರೆ ಇದು ಬರೋಲ್ಲ ಎಂದು ಹೆದರಿಸಿ ಅವರಿಗೆ ಸಲ್ಲಬೇಕಾದ ಪರಿಹಾರದ ಹಣವನ್ನು ತಾನೇ ಜೇಬಿಗಿಳಿಸಿಕೊಳ್ಳುವ ಕುತಂತ್ರ ಹೆಣೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಪೂರ್ಣ ತನಿಖೆ ನಡೆಸಿದರೆ ಎಲ್ಲಾವಿಷಯಹೊರಗೆ ಬರುತ್ತೆ. ತಮಗೆ ಲಭ್ಯವಿರುವ ದಾಖಲೆಗಳನ್ನು ತಾಲೂಕು ಮತ್ತು ಜಿಲ್ಲಾಡಳಿತಕ್ಕೆ ಕೊಟ್ಟರೂ ಉಪಯೋಗವಾಗಿಲ್ಲ ಎಂದು ಸಂಪತ್‌ ಬೇಸರ ವ್ಯಕ್ತಪಡಿಸಿದರು. ಗೋಷ್ಠಿಯಲ್ಲಿ ರೈತ ಮುಖಂಡ ಎಂ.ಡಿ.ಶಿವಕುಮಾರ್‌ ಮುಂತಾದವರು ಹಾಜರಿದ್ದರು.

ಗೃಹ ಮಂಡಳಿ, ಡೀಸಿಗೆ ಅರಣ್ಯ ಇಲಾಖೆ ಪತ್ರ :  ಗಂಗಾಧರನಗುಡ್ಡ ರಾಜ್ಯ ಅರಣ್ಯ ಪ್ರದೇÍ ‌¨ ‌ಬಫ‌ರ್‌ ಜೋನ್‌ ಸರ್ವೆ ಸಂಖ್ಯೆ392,356, 372,373, 325, ಮತ್ತು101ರ ಭಾಗಶಃ ವಿಸ್ತೀರ್ಣ ಹಾಗೂ ಸರ್ವೆ ಸಂಖ್ಯೆ357,371 ಮತ್ತು374ರ ವಿಸ್ತೀರ್ಣಗಳು ಸಂಪೂರ್ಣ ಗಂಗಾಧರನ ಗುಡ್ಡ ರಾಜ್ಯ ಗಡಿಯಿಂದ 100 ಮೀಟರ್‌ ಬಫ‌ರ್‌ ಜೋನ್‌ ಪ್ರದೇಶದಲ್ಲಿದೆ. ಅರಣ್ಯ ನಿಯಮ 1969 ‌ಕಲಂ41(2)ರ ಪ್ರಕಾರ ಭೂ ಮಂಜೂರಾತಿಯನ್ನು ಮಾಡಲು ಅವಕಾಶವಿಲ್ಲ, ಹೀಗಾಗಿ, ಯಾವುದೇ ಭೂ ಸ್ವಾಧೀನ ಕೈಗೊಳ್ಳಬಾರದು ಎಂದು ರಾಮನ‌ಗರ ಉಪ ‌ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕರ್ನಾಟಕ ಗೃಹ ಮಂಡಳಿಗೂ ಸೇರಿ ಜಿಲ್ಲಾಧಿಕಾರಿಗಳಿಗೂ ಕಳೆದ ಜುಲೈನಲ್ಲಿ ಲಿಖೀತವಾಗಿ ತಿಳಿಸಿದ್ದರೂ ಇಲ್ಲಿ ಬಡಾವಣೆ ನಿರ್ಮಾಣವಾಗಿದೆ ಎಂದು ಮತ್ತೂಬ್ಬ ಸಾರ್ವಜನಿಕ ‌ಮುಖಂಡ ರಾಜೇಶ್‌, ಅರಣ್ಯ ಇಲಾಖೆಯ ದಾಖಲೆಗಳನ್ನು ಪ್ರಸ್ತುತ ಪಡಿಸಿ ಮಾಹಿತಿ ನೀಡಿದರು.

ನಿವೇಶನಖರೀದಿಗೆ ಮುನ್ನ ಎಚ್ಚರವಿರಲಿ! : ಆರ್‌.ಟಿ.ಐ ಕಾರ್ಯಕರ್ತ ರಾಮಲಿಂಗಯ್ಯ ಮಾತನಾಡಿ, ಹೌಸಿಂಗ್‌ ಬೋರ್ಡ್‌ ನಿರ್ಮಿಸಿರುವ ಬಡಾವಣೆಯಲ್ಲಿ ಅರಣ್ಯ ಭೂಮಿ, ಗೋಮಾಳ ಸೇರಿದೆ. ಇದು ಎಂದಿದ್ದರೂ ತಕರಾರು ಸಾಧ್ಯತೆ ಇದೆ. ಹೀಗಾಗಿ ಇಲ್ಲಿ ನಿವೇಶನ ಖರೀದಿಸುವವರು ಎಚ್ಚರವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಉದ್ಘಾಟಿಸಲು ಸಿದ್ಧತೆ :  ರಾಯಸಂದ್ರ ಗ್ರಾಮದ ಬಳಿ ನಿರ್ಮಿಸಿರುವ ಹೌಸಿಂಗ್‌ ಬೋರ್ಡ್‌ ವಸತಿ ಬಡಾವಣೆಯನ್ನುಉದ್ಘಾಟಿಸಿಲು ವಸತಿ ಸಚಿವ ಸೋಮಣ್ಣ ಸದ್ಯದಲ್ಲೇ ಭೇಟಿ ನೀಡಲಿದ್ದಾರೆ. ಅಕ್ರಮಗಳ ಬಗ್ಗೆ ಈಗಾಗಲೆ ಡಿಸಿಎಂ ಡಾ.ಸಿ.ಎನ್‌.ಅಶ್ವಥನಾರಾಯಣ ಅವರ ಗಮನ ಸೆಳೆಯಲಾಗಿದೆ. ಸಚಿವ ಸೋಮಣ್ಣ ಅವರಿಗೂ ಅಕ್ರಮದ ಬಗ್ಗೆ ಮಾಹಿತಿ ಇದೆ. ಆದರೂ ಉದ್ಘಾಟನೆಗೆ ಸಿದ್ಧತೆಗಳು ನಡೆಯುತ್ತಿವೆ ಎಂದು ರೈತ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.