ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ


Team Udayavani, May 17, 2022, 2:57 PM IST

ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ಮಾಗಡಿ: ಸುಂದರ ಪ್ರಕೃತಿಯ ಮಡಿಲಲ್ಲಿರುವ ಇತಿಹಾಸ ಪ್ರಸಿದ್ಧ ಸಾವನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಭಕ್ತಸಾಗರದನಡುವೆ ವಿಜೃಂಭಣೆಯಿಂದ ಜರುಗಿತು.

ಶಾಸಕ ಎ.ಮಂಜುನಾಥ್‌ ಹಾಗೂ ಮಾಜಿ ಸಚಿವ ಎಚ್‌.ಎಂ.ರೇವಣ್ಣ, ರೆವಿನ್ಯೂ ಅಧಿಕಾರಿ ವೆಂಕಟೇಶ್‌ಹಾಗೂ ಇತರರು ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದಪೂಜೆ ಸಲ್ಲಿಸಿ ಚಾಲನೆ ನೀಡಿ ಭಕ್ತ ಸಾಗರರೊಡಗೂಡಿ ರಥ ಎಳೆದರು.ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿದರು.

ರಥ ಎಳೆಯು ತ್ತಿದ್ದಂತೆ ಇತ್ತ ಭಕ್ತಸಮೂಹ ಮಜ್ಜಿಗೆಪಾನಕ, ಕೋಸಂ ಬರಿ ವಿತರಣೆ ಮಾಡುತ್ತಿದ್ದ ದೃಶ್ಯಸಾಮಾನ್ಯವಾಗಿತ್ತು. ರಥೋತ್ಸವದ ಪ್ರಯುಕ್ತ ವಿವಿಧಸಮಾಜದವರಿಂದ ಅನ್ನದಾಸೋಹ ಅರವಂಟಿಕೆ ಏರ್ಪಡಿಸಲಾಗಿತ್ತು. ಸಹಸ್ರಾರು ಭಕ್ತರು ದಾಸೋಹ ಸ್ವೀಕರಿಸಿದರು. ಸಂಜೆ ವಿವಿಧ ಉತ್ಸವಾದಿಗಳು ನಡೆಯಿತು.

ದೇವರ ಆರ್ಶೀವಾದ: ಈ ವೇಳೆ ಸುದ್ದಿಗಾರರೊಂದಿಗೆ ಶಾಸಕ ಎ.ಮಂಜುನಾಥ್‌ ಮಾತನಾಡಿ, ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿರಥಕ್ಕೆ ಚಾಲನೆ ನೀಡುತ್ತಿದ್ದಂತೆ ದೇವರ ಮೇಲಿದ್ದಹೂವು ಬಲಭಾಗದಿಂದ ಬಿದ್ದಿದೆ. ದೇವರ ಆರ್ಶೀವಾದ ಆಗಿದೆ. ದೇವರ ದಯೆಯಿಂದ ಈ ಬಾರಿ ಉತ್ತಮ ಮಳೆ ಬೀಳಲಿದೆ ಎಂಬ ನಂಬಿಕೆಯಿದೆ.ಸಮೃದ್ಧ ವಾಗಿ ಬೆಳೆ ಬರುತ್ತದೆ. ನಾಡಿನ ರೈತರು ಸಮೃದ್ಧಿ ಯಾಗಿ ಬದುಕು ನಡೆಸುವಂತಾಗಲಿ ಎಂದರು.

ಸಾಂಸ್ಕೃತಿಕ ಉತ್ಸವ: ಜಾತ್ರಾ ಮಹೋತ್ಸವದ ಅಂಗವಾಗಿ ದೇವರ ವಿವಿಧ ಉತ್ಸವಾದಿಗಳು ಹಾಗೂ ಜಾನ ಪದ ಕಲಾ ಸಾಂಸ್ಕೃತಿಕ ಉತ್ಸವಾದಿಗಳು ಅದ್ಧೂರಿಯಾಗಿ ನಡೆಯಿತು. ಅಂಕನಹಳ್ಳಿ ಶಿವಣ್ಣ ಅವರ ಪೂಜೆಕುಣಿತ ಭಕ್ತರನ್ನು ಆಕರ್ಷಿಸಿತ್ತು. ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ಶಾಸಕ ಎ. ಮಂಜುನಾಥ್‌ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಜಾತ್ರಾ ಮಹೋತ್ಸವ ಎಂದ ಮೇಲೆ ಸಹಸ್ರಾರು ಭಕ್ತರುಭಾಗವಹಿಸುವುದು ಸಾಮಾನ್ಯ ವಾಗಿರುತ್ತದೆ. ಪೊಲೀಸರು ರಸ್ತೆ ಬದಿ ಇದ್ದ ವಾಹನ ಗಳನ್ನು ತೆಗೆಸಿ ಸುಗಮಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಪ್ರಾಣಿ, ಪಕ್ಷಿಗಳಿಲ್ಲದೇ ಬಣಗುಡುತ್ತಿರುವ ವನದಾಮ :

ಪ್ರಸಿದ್ಧ ಪ್ರವಾಸಿ ತಾಣದಲ್ಲಿ ಕೆಂಪೇಗೌಡ ವನದಾಮದಲ್ಲಿ ಯಾವುದೇ ಪ್ರಾಣಿ, ಪಕ್ಷಿಗಳಿಲ್ಲದ ವನದಾಮ ಬಣಗುಡುತ್ತಿತ್ತು. ಕೆಂಪೇಗೌಡ ವನದಾಮಕ್ಕೆ ನೂರಾರು ಭಕ್ತರು ತಮ್ಮ ಮಕ್ಕಳೊಂದಿಗೆ ತೆರಳಿದ್ದವರಿಗೆ ನಿರಾಸೆ ಉಂಟಾಗಿತ್ತು. ಸುಂದರವಾದ ಪ್ರಕೃತಿ ದತ್ತ ಸಾವನದುರ್ಗ ಪ್ರವಾಸಿಗರ ಸ್ವರ್ಗಾ ಎಂದೇ ಕರೆಯಲಾಗಿದೆ.ಇಲ್ಲಿನ ಕೆಂಪೇಗೌಡ ವನದಾಮದಲ್ಲಿ ಯಾವುದೇ ಪ್ರಾಣಿ ಪಕ್ಷಿಗಳು ಇಲ್ಲಿದರುವುದು ನಿಜಕ್ಕೂ ವಿಪರ್ಯಾಸ.ಸಂಬಂಧಪಟ್ಟ ಪ್ರವಾಸೋದ್ಯಮ ಸಚಿವರು ಇತ್ತ ಗಮನಹರಿಸಿ ಪ್ರವಾಸಿಗರ ಅನುಕೂಲಕ್ಕಾಗಿ ಮೂಲ ಸೌಕರ್ಯಗಳನ್ನು ಒದಗಿಸಬೇಕು. ವನದಾಮ ಅಭಿವೃದ್ಧಿ ಪಡಿಸುವಂತೆ ನಾಗರಿಕರು ಆಗ್ರಹಿಸಿದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.