ಶ್ರೀರಾಮಲಿಂಗ ಚೌಡೇಶ್ವರಿ ದೇವಿ ಮಹಾರಥೋತ್ಸವ


Team Udayavani, Feb 7, 2023, 1:31 PM IST

TDY-11

ಕುದೂರು: ಕುದೂರಿನ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಾಲಯದಲ್ಲಿ 17 ನೇ ವರ್ಷದ ವಾರ್ಷಿಕೋತ್ಸವ ಮತ್ತು ಮಹಾರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವಕ್ಕೆ ದೇವಾಂಗ ಜಗದ್ಗುರು ಶ್ರೀ ದಯಾನಂದ ಪುರಿ ಸ್ವಾಮೀಜಿ ಪ್ರಥಮ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಇದಕ್ಕೂ ಮುನ್ನ ಅಲಂಕೃತ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಉತ್ಸವ ಮೂರ್ತಿಗೆ ಭಕ್ತರು ಶ್ರದ್ಧಾಭಕ್ತಯಿಂದ ಪೂಜೆ ಸಲ್ಲಿಸಿ ಪಾನಕ, ಮಜ್ಜಿಗೆ ವಿತರಿಸಿದರು, ದೇವಾಲಯದಲ್ಲಿ ಹೋಮ, ಹವನ, ನವಗ್ರಹ ಪೂಜೆ, ಕಳಸ ಸ್ಥಾಪನೆ, ಗಂಗಾ ಪೂಜೆ, ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಧಾರ್ಮಿಕ ಕೈಂಕರ್ಯ ನಡೆದವು.

ದೇವಾಂಗ ಜಗದ್ಗುರು ಶ್ರೀ ದಯಾನಂದ ಪುರಿ ಸ್ವಾಮೀಜಿ ಆಶೀರ್ವಚನ ನೀಡಿ,ಧಾರ್ಮಿಕ ಕಾರ್ಯಕ್ರಮಗಳಿಂದ ಗ್ರಾಮದ ಕಲ್ಯಾಣವಾಗುತ್ತದೆ. ಬಟ್ಟೆ ನೇಯ್ದು ನಾಗರಿಕ ಜಗತ್ತಿಗೆ ವಿಶೇಷ ಕೊಡುಗೆ ನೀಡಿರುವ ಶ್ರಮ ಸಂಸ್ಕೃತಿಯ ಜನರಾದ ನಾವು, ಸಮಾಜ ಸೇವೆಯ ಗುಣ ಮೈಗೂಡಿಸಿಕೊಂಡರೆ ದುಡಿಮೆ ಸಾರ್ಥಕವಾಗುತ್ತದೆ. ಉತ್ತಮ ಬದುಕಿಗೆ ದೇವರ ದಾಸಿಮಯ್ಯನವರ ವಚನಗಳು ಮಾದರಿಯಾಗಿದೆ ಎಂದರು.

ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ:ಶಾಸಕ ಎ. ಮಂಜುನಾಥ್‌ ಮಾತನಾಡಿ, ಸಮಾಜದ ಸ್ವಾಸ್ಥ್ಯವನ್ನು ಕಾಯ್ದುಕೊಂಡು ಎಲ್ಲ ಸ್ಮರದ ಜನರ ನಡುವೆ ಸಾಮರಸ್ಯವನ್ನುಂಟು ಮಾಡುವ ಕೇಂದ್ರಗಳಾಗಿ ದೇಗುಲಗಳಿದ್ದು, ಜೀವನಕ್ಕೆ ಮಹತ್ತರವಾದ ಪಾತ್ರ ವಹಿಸುತ್ತದೆ. ದೇವರ ಪೂಜೆ, ಧಾರ್ಮಿಕ ಕೈಂಕರ್ಯಗಳು ಅನಾದಿ ಕಾಲದಿಂದಲೂ ರೂಢಿಯಲ್ಲಿದ್ದು, ಇದರಿಂದ ನಮ್ಮ ಸಂಸ್ಕೃತಿ, ಸಂಪ್ರದಾಯಗಳು ಜೀವಂತವಿರಿಸಲು ಸಹಕಾರಿಯಾಗಿದ್ದು, ದೇವರ ಆರಾಧನೆಯಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ಉಂಟಾಗುತ್ತದೆ ಎಂದರು.

ಮಜ್ಜಿಗೆ, ಪಾನಕ ವಿತರಣೆ:ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಲಯದ ಸಂಘದ ಅಧ್ಯಕ್ಷ ಕೆ.ಬಿ.ಬಾಲರಾಜು ಮಾತನಾಡಿ, ಭಾವೈಕ್ಯತೆ ಯಿಂದ ಮನುಷ್ಯ, ಮನುಷ್ಯರಲ್ಲಿನ ಬಂಧ ಗಟ್ಟಿಗೊಳ್ಳುತ್ತದೆ. ಲೌಕಿಕ ಜೀವನದಲ್ಲಿ ಧರ್ಮ ಬೆಳೆಸಲು ದೇವಾಲಯಗಳು ಬಹುಮುಖ್ಯ ಎಂದರು. ರಥೋತ್ಸವ ನಡೆದ ರಸ್ತೆಗಳಲ್ಲಿ ಶ್ರೀ ರಾಮಲಿಂಗ ಚೌಡೇಶ್ವರಿ ದೇವಾಂಗ ಸಂಘದ ವತಿಯಿಂದ ಮಜ್ಜಿಗೆ, ಪಾನಕ ವಿತರಿಸಲಾಯಿತು.

ಲಕ್ಷ್ಮೀನಾರಾಯಣ್‌, ಜಯಚಂದ್ರ ಬಾಬು, ಶಿವಕುಮಾರ್‌, ರಂಗಸ್ವಾಮಿ, ಚಂದ್ರು ಶೇಖರ್‌, ಗೋಪಿ, ನಾಗೇಶ್‌, ಗೋಪಾಲಕೃಷ್ಣ, ಶಿವ ಶಂಕರ್‌, ಮುನಿರಂಗಪ್ಪ, ಗೋವಿಂದರಾಜು, ನಾಗ ಭೂಷಣ್‌, ಲಲಿತಾಪುರುಷೋತ್ತಮ್‌, ಗೋವಿಂದ ರಾಜ್‌, ವೆಂಕಟೇಶ್‌ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.