ಶ್ರೀರಂಗ ಏತನೀರಾವರಿ ಕಾಮಗಾರಿ ಪೂರ್ಣ


Team Udayavani, Jun 7, 2020, 6:38 AM IST

sriranga poorna

ಮಾಗಡಿ: 1,100 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು-ಮಾಗಡಿ ಚತುಷ್ಪಥ ಮತ್ತು ಹೇಮಾವತಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ  ಎಂದು ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ಎಂ. ಧನಂಜಯ ರುದ್ರೇಶ್‌ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಡಿಯೂರಪ್ಪ ಬಳಿ ನಿಯೋಗ ತೆರಳಿ ಮನವಿ ಮಾಡಿ ಚರ್ಚಿಸಲಾಗಿದೆ. ಈ ಸಂಬಂಧ ಈಗಾಗಲೇ ಟೆಂಡರ್‌ ಪೂರ್ಣಗೊಂಡಿದ್ದು, ಬೇಗ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಈಗಾಗಲೇ ಡಿಸಿಎಂ ಬಹಳ ಆಸಕ್ತಿ ವಹಿಸಲಾಗಿದೆ ಎಂದಿದ್ದಾರೆ ಎಂದು ತಿಳಿಸಿದರು.

86 ಕೆರೆ ತುಂಬಿಸುವ ಯೋಜನೆ: ವೀರಪ್ಪ ಮೊಯ್ಲಿ ಮಖ್ಯಮಂತ್ರಿಯಾಗಿದ್ದಾಗ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಯೋಜನೆ ಅನುಷ್ಠಾನಕ್ಕೆ ಎಚ್‌.ಎಂ.ರೇವಣ್ಣ ಅವರು ಪ್ರಸ್ತಾವನೆ ಸಲ್ಲಿಸಿ,  ಮಾಗಡಿಗೆ ಹೇಮಾವತಿ ಹರಿಸಲು ಶ್ರೀರಂಗ ಏತ ನೀರಾವರಿ ಯೋಜನೆ ರೂಪಿಸಿದರು. ಯೋಜನೆ ಅನುಸಾರ ತುಮಕೂರು ಶಾಖಾ ನಾಲೆ 190 ಕಿ.ಮೀ. ಅಂತರದಿಂದ ಏತ ನೀರಾವರಿ ಮೂಲಕ ತಾಲೂಕಿನ 86 ಕೆರೆಗಳಿಗೆ ನೀರು ತುಂಬಿಸಿ  ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಕನಿಷ್ಠ 0.9 ಟಿಎಂಸಿ ನೀರು ಅವಶ್ಯ ಯೋಜನೆ ರೂಪಗೊಂಡಿದ್ದು, ಸುಮಾರು 190 ಕಿ.ಮೀ. ದೂರದಿಂದ 131 ಕ್ಯೂಸೆಕ್‌ ನೀರನ್ನು 120 ಮೀ. ಎತ್ತರಕ್ಕೆ ಲಿಫ್ಟ್ ಮಾಡಬೇಕಿದೆ.

ಯೋಜನೆ ಅನುಕೂಲತೆ: ಮಾಗಡಿ ಕ್ಷೇತ್ರಕ್ಕೆ ಹೇಮಾವತಿ ನೀರಾವರಿ ಯೋಜನೆಗೆ ಶ್ರೀರಂಗ ಏತ ನೀರಾವರಿ ಯೋಜನೆ ಎಂಬ ಹೆಸರಿಡಲಾಗಿತ್ತು. ಯೋಜನೆ ಅನುಷ್ಠಾನ  ದಿಂದ ಮಾಗಡಿ ತಾಲೂಕಿನ 86 ಕೆರೆಗಳಿಗೆ ನೀರು ಹರಿಸುವುದು.  ಅಂತರ್ಜಲ ಹೆಚ್ಚಿಳ್ಳ ಹಾಗೂ ತಾಲೂಕಿನ 11.015 ಎಕರೆ ಪ್ರದೇಶಕೆಕ ನೀರು ಹರಿಸಲು ಹಾಗೂ 0.062 ಟಿಎಂಸಿ ನೀರು ಕುಡಿಯುವ ಬಳಕೆಗೆ ಮೀಸಲಿಡಲಾಗಿತ್ತು. ನನಗೆ ರಾಜಕೀಯ ಶಕ್ತಿ ನೀಡಿದ ಮಾಗಡಿ ಜನತೆಯ ಋಣ ತೀರಿಸಬೇಕು  ಎಂಬ ಚಿಂತನೆಯಿಂದ ಸಣ್ಣ ಮತ್ತು ದೊಡ್ಡ ನೀರಾವರಿ ಇಲಾಖೆಯ ಎಂಜಿನಿಯರ್‌ ಅವರೊಂದಿಗೆ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಚರ್ಚಿಸಿದ್ದರು.

ನಂತರ ಆಗಿನ ಕೇಂದ್ರ ಕಾನೂನು ಮಂತ್ರಿಯಾಗಿದ್ದ ಡಾ.ಎಂ.ವೀರಪ್ಪ ಮೊಯ್ಲಿ  ಅವರೊಂದಿಗೆ ಚರ್ಚಿಸಿದರು. ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಭರವಸೆ ಸಿಕ್ಕಿತು. 325 ಕೋಟಿ ರೂ. ಹಣ ಮಂಜೂರು: ಎಸ್‌.ಎಂ.ಕೃಷ್ಣ ಮುಖ್ಯಮಂತ್ರಿಯಾದ ಬಳಿಕ ಯೋಜನೆಗೆ ಸುಮಾರು 96 ಕೋಟಿ ಅನುದಾನ  ಬಿಡುಗಡೆಗೊಳಿಸಿ, ಡಿಪಿಆರ್‌ ತಯಾರಿಸಲು ಸುಚಿಸಿದ್ದರು. ನಂತರದಲ್ಲಿ ಪರಿಸ್ಕೃತ ಅಂದಾಜು 124 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿತ್ತು. ಅದೇ ಸಮಯಕ್ಕೆ ಸರ್ಕಾರದ ಅವಧಿ ಮುಗಿದಿದ್ದರಿಂದ ಹೇಮಾವತಿ ಯೋಜನೆ ಮತ್ತೆ  ಸ್ಥಗಿತಗೊಂಡಿತು.

ಸಿದ್ದರಾಮಯ್ಯ ಸಿಎಂ ಆದ ನಂತರ ಲೋಕಸಭೆ ಉಪ ಚುನಾವಣೆ ಪ್ರಚಾರಕ್ಕೆ ಮಾಗಡಿಗೆ ಬಂದ ಸಮಯದಲ್ಲಿ ಹೇಮಾವತಿ ಯೋಜನೆಗೆ ಚಾಲನೆ ನೀಡಿದ್ದರು. ಈಗ ಸಿಎಂ ಬಿಎಸ್‌ವೈ, ಶೀಘ್ರ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿ ದ್ದಾರೆ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಮುಗಿದಿದೆ ಎಂದು ವಿವರಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್‌, ತಾಲೂಕು ಅಧ್ಯಕ್ಷ ಎಂ.ಜಿ.ರಂಗಧಾಮಯ್ಯ, ಎಂ.ಆರ್‌.ರಾಘವೇಂದ್ರ, ರಾಜೇಶ್‌, ಶಂಕರ್‌, ಶೇಷಪ್ಪ, ನಾಗರಾಜು ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.