ರಾಜ್ಯ ಸಾರಿಗೆ ನಿಗಮದ ನೌಕರರ ಪ್ರತಿಭಟನೆ

ಭ್ರಷ್ಟಾಚಾರ, ಕಿರಿಕುಳ, ಮೇಲಾಧಿಕಾರಿಗಳ ಕಾರ್ಯಭಾರ ತಪ್ಪಿಸಿ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Team Udayavani, May 29, 2019, 1:30 PM IST

ramanagar-tdy-1..

ರಾಮನಗರದಲ್ಲಿನ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಎದುರು ನೌಕರರು ಪ್ರತಿಭಟನಾ ಧರಣೆ ನಡೆಸುತ್ತಿರುವುದು.

ರಾಮನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ರಾಮನಗರ ವಿಭಾಗೀಯ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ರಾಜ್ಯದ ಸಾರಿಗೆ ನಿಗಮದ ನೌಕರರಿಗೆ ಕಿರುಕುಳ ಹೆಚ್ಚುತ್ತಿದ್ದು, ಕಿರುಕುಳವನ್ನು ತಪ್ಪಿಸಬೇಕು. ಚಾಲಕ ಮತ್ತು ನಿರ್ವಾಹಕ ಕೆಲಸದ ಭಾರ ಹೆಚ್ಚಾಗುತ್ತಿದೆ. ಕಾನೂನು ಪ್ರಕಾರ ಒವರ್‌ ಟೈಮ್‌ ನೀಡುತ್ತಿಲ್ಲ. ಕೆಲಸಕ್ಕೆಂದು ಹಾಜರಾದರೂ ಕರ್ತವ್ಯದ ಮೇಲೆ ಕಳುಹಿಸುತ್ತಿಲ್ಲ ಎಂದು ದೂರಿದ ನೌಕರರು ಕಲ್ಬುರ್ಗಿ ಸಮ್ಮೇಳನದ ತೀರ್ಮಾನಗಳು ಹಾಗೂ ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರ ಮತ್ತು ಸಾರಿಗೆ ನಿಗಮ ಗಳು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಮೇಲಾಧಿಕಾರಿಗಳಿಂದ ಹಿಂಸೆ, ಕಿರುಕುಳ ತಪ್ಪಿಸಿ: ಸಾರಿಗೆ ನಿಗಮಗಳಲ್ಲಿ ನೌಕರರು ತಮಗಾಗುತ್ತಿರುವ ಹಿಂಸೆ, ಕಿರುಕುಳ ತಾಳಲಾರದೆ ಹತಾಶರಾಗಿ ಆತ್ಮಹತ್ಯೆಗೆ ಶರಣಾದ ಪ್ರಸಂಗಗಳಿವೆ. ಈ ಪ್ರಯತ್ನದಲ್ಲಿ ಆಕಸ್ಮಿಕವಾಗಿ ಬದುಕುಳಿದವರ ವಿರುದ್ಧ ಶಿಸ್ತು ಕ್ರಮದ ಹೆಸರಿನಲ್ಲಿ ಆರ್ಥಿಕ ನಷ್ಟದ ಜತೆಗೆ ಮತ್ತಷ್ಟು ಹಿಂಸೆ ಕಿರುಕುಳ ನೀಡಲಾಗುತ್ತಿದೆ. ಇಂತಹ ಅಮಾನುಷ ಪರಿಸ್ಥಿತಿಯನ್ನು ಆಡಳಿತ ವರ್ಗ ತಪ್ಪಿಸಬೇಕು. ಅಂತಹ ಪ್ರಕರಣ ದಾಖಲಾದ ಕೂಡಲೇ ಸಂಬಂಧ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಆತ್ಮಹತ್ಯೆಗೆ ಒಳಗಾದ ಸಂತ್ರಸ್ತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಬದುಕುಳಿದ ನೌಕರನ ವಿರುದ್ಧ ಶಿಸ್ತು ಕ್ರಮ ಜರುಗಿಸಬಾರದು ಎಂದು ಒತ್ತಾಯಸಿದರು.

ರಜೆ ಮಂಜೂರಿಗೂ ಭ್ರಷ್ಟಾಚಾರ: ರಜೆ ವಿಚಾರದಲ್ಲಿ ತಮ್ಮ ನೋವು ಹೊರ ಹಾಕಿದ ನೌಕರರು ಬಹುತೇಕ ಘಟಕಗಳಲ್ಲಿ ರಜೆ ಮಂಜೂರು ಮಾಡುವ ವಿಚಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. 5 ದಿನ ಕೆಲಸ ಮಾಡಿ 6ನೇ ದಿನ ರಜೆಗೆ ಮನವಿ ಸಲ್ಲಿಸಿದರೆ, ವಾರದ ರಜೆಯನ್ನು ನಿರಾಕರಿಸಲಾಗುತ್ತಿದೆ ಎಂದು ಆರೋಪಿಸಿದರು. ನಿಗಮಗಳಲ್ಲಿನ ಭ್ರಷ್ಟಾಚಾರ ಕುರಿತು ದೂರಿದ ನೌಕರರು ವಾಹನ ಮತ್ತು ಮಾರ್ಗ ನೀಡುವುದ ರಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಕೆಲವೆಡೆ ಅಧಿಕಾರಿಗಳು ದಲ್ಲಾಳಿಗಳಂತೆ ಕಾರ್ಯನಿರ್ವಹಿಸುವ ನೌಕರರನ್ನು ಘಟಕದಲ್ಲಿ ಉಳಿಸಿಕೊಂಡು ಅವರಿಗೆ ಒಒಡಿ ಕೊಡುತ್ತಿದ್ದಾರೆ. ತಪಾಸಣೆಯ ಹೆಸರಿನಲ್ಲಿ ನಿರ್ವಾಹಕರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಗುತ್ತಿವೆ. ಎನ್‌ಐಎನ್‌ಸಿ ಹೆಸರಿನಲ್ಲಿ ವಿವೇಚನೆಯಿಲ್ಲದ ಶಿಕ್ಷೆ ಅನುಭವಿಸಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸೂಕ್ತ ವೈದ್ಯಕೀಯ ಸೌಲಭ್ಯವಿಲ್ಲ: ನಾಲ್ಕೂ ಸಾರಿಗೆ ನಿಗಮಗಳಲ್ಲಿ 1.15 ಲಕ್ಷಕ್ಕೂ ಹೆಚ್ಚಿನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರಿಗೆ ಒದಗಿಸಿರುವ ವೈದ್ಯಕೀಯ ವ್ಯವಸ್ಥೆ ಸಮರ್ಪಕವಾಗಿಲ್ಲ. ಇಲ್ಲಿ ಎಲ್ಲರೂ ಒತ್ತಡದಲ್ಲೇ ಕೆಲಸ ಮಾಡಬೇಕಾಗಿದೆ. ಆಡಳಿತ ವರ್ಗಕ್ಕೆ ತನ್ನ ನೌಕರರು ಹಾಗೂ ಅವರ ಕುಟುಂಬದ ಆರೋಗ್ಯದ ರಕ್ಷಣೆಗೆ ಸಂಪೂರ್ಣವಾಗಿ ವೈದ್ಯಕೀಯ ವೆಚ್ಚ ಭರಿಸುವ ಹೊಣೆಗಾರಿಕೆಯನ್ನು ನಿಭಾಯಿಸಬೇಕಾಗಿದೆ. ಆರೋಗ್ಯ ವಿಮಾ ಯೋಜನೆ ಗಳ ಅಡಿಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಕೊಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಕೈಗಾರಿಕಾ ನಿಯಮಗಳ ಉಲ್ಲಂಘಟನೆ: ಕೈಗಾರಿಕಾ ವಿವಾದ ಕಾಯ್ದೆ ಅಡಿಯಲ್ಲಿ ಕೈಗಾರಿಕಾ ಒಪ್ಪಂದ ವಾಗಿಲ್ಲ. ಈಗ ಚಾಲ್ತಿಯಲ್ಲಿರುವಂತೆ ಅಪಘಾತವಾ ದಾಗ ಚಾಲಕರಿಗೆ ಜಾಮೀನು , ಐಒಡಿ ಕೊಡುವ ವಿಷಯದಲ್ಲಿ ಸಸ್ಪೆನ್ಷನ್‌ ರದ್ದು ಮಾಡುವ ವಿಷಯದಲ್ಲಿ ದಿನವಹಿ ಕೈಗಾರಿಕಾ ಒಪ್ಪಂದಗಳ ಉಲ್ಲಂಘನೆ ಆಗುತ್ತಿವೆ ಎಂದು ಆರೋಪಿಸಿದರು.

ಕೇಂದ್ರ, ವಿಭಾಗ ಹಾಗೂ ಘಟಕ ಮಟ್ಟದಲ್ಲಾಗಲಿ ಮಾತುಕತೆ ನಡೆಯುತ್ತಿಲ್ಲ. ಇದರಿಂದ ಸಮಸ್ಯೆಗಳು ಹೇರಳವಾಗಿ ಉಳಿದುಕೊಂಡಿವೆ. ಆಡಳಿತ ವರ್ಗ ನೇರವಾಗಿ ಫೆಡರೇಷನ್‌ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾ ನಿರತ ನೌಕರರು ಒತ್ತಾಯಿಸಿದರು.

ನಾಲ್ಕೂ ನಿಗಮಗಳನ್ನು ಒಗ್ಗೂಡಿಸಿ

ಸಂಸ್ಥೆಯ ಹಣವನ್ನು ದಂಡ ಮಾಡಿ ರಾಜ್ಯಾದ್ಯಂತ ಕಾರ್ಮಿಕ ಸಂಘಟನೆಗಳ ವಿರುದ್ಧ ಇಂಜಂಕ್ಷನ್‌ ಕೇಸುಗಳನ್ನು ಆಡಳಿತ ವರ್ಗ ಹಾಕಿದೆ. ಮಾತುಕತೆಗಳ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಂಬಿಕೆ ಆಡಳಿತ ವರ್ಗಕ್ಕಿಲ್ಲ. ಕೆಎಸ್‌ಆರ್‌ಟಿಸಿ ನಾಲ್ಕು ನಿಗಮಗಳಾಗಿ ವಿಭಜನೆಯಾದ ಮೇಲೆ ನಷ್ಟದ ಪ್ರಮಾಣ ಹಾಗೂ ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆಯೇ ವಿನಾ ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕ ರಿಗಾಗಲಿ ಅಥವಾ ಪ್ರಯಾಣಿಕರಿಗಾಗಲಿ ವಿಶೇಷ ಅನುಕೂಲಗಳಾಗಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ನಾಲ್ಕು ನಿಗಮಗಳನ್ನು ಒಂದು ಮಾಡಬೇಕು ಎಂದು ಪ್ರತಿಭಟನೆ ನಡೆಸಿದ ನೌಕರರು ಒತ್ತಾಯಿಸಿದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.