ಬಾಲ ಕಾರ್ಮಿಕ ಪದ್ಧತಿ ತಡೆಗಟ್ಟಿ: ಹನುಮಂತ

ನಾಗರಿಕರಿಗೆ ಪ್ರಧಾನ ಸಿವಿಲ್ ನ್ಯಾಯಾಧೀಶರ ಕಿವಿಮಾತು

Team Udayavani, Jun 17, 2019, 4:16 PM IST

rn-tdy-3..

ಕನಕಪುರ ನಗರದ ಶಿಕ್ಷಕರ ಭವನದ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಿತು.

ಕನಕಪುರ: ಬಾಲಕಾರ್ಮಿಕ ಪದ್ಧತಿ ಹೆಚ್ಚಾಗದಂತೆ ನಿರ್ಮೂಲನೆ ಮಾಡಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ ಎಂದು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ರಾದ ಜೆ.ಎಚ್.ಹನುಮಂತ ತಿಳಿಸಿದರು.

ಕನಕಪುರ ನಗರದ ಶಿಕ್ಷಕರ ಭವನದ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ವಿಶ್ವಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಬಾರಿ ಮಕ್ಕಳು ಕೆಲಸ ಬಿಟ್ಟು ಕನಸು ಕಾಣಿ. ಅದನ್ನು ನನಸಾಗಿಸಿಕೊಳ್ಳಿ ಎನ್ನುವ ಧ್ಯೇಯವಾಕ್ಯದಲ್ಲಿ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಕೆಲಸ ಬಿಟ್ಟು, ಶಿಕ್ಷಣ ಮತ್ತು ಕನಸನ್ನು ಕಾಣಬೇಕು ಎಂದು ದೇಶದ ವಿಜ್ಞಾನಿ ಅಬ್ದುಲ್ ಕಲಾಂ ಹೇಳಿದ್ದಾರೆ. ಅದರಂತೆ ನೀವು ಈ ನಿಟ್ಟಿನಲ್ಲಿ ಜಾಗೃತರಾಗಬೇಕು ಎಂದರು.

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಸರ್ಕಾರ ಅನೇಕ ಇಲಾಖೆಗಳನ್ನು ಬಳಸಿಕೊಳ್ಳುವ ಅವಕಾಶವಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಶಿಕ್ಷಣ ಪಡೆಯಬೇಕೆಂದರು.

1986 ರಲ್ಲಿ ಈ ಕಾಯ್ದೆ ಜಾರಿಯಾಗಿದ್ದು, ಇದರಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುವಂತಿಲ್ಲ. 14 ರ ನಂತರ 18 ವರೆಗಿನ ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಕೆಲಸಕ್ಕೆ ಬಳಸಿ ಕೊಳ್ಳುವಂತಿಲ್ಲ ಎಂದು ಜಾರಿಯಲ್ಲಿದೆ. ಕಾಯ್ದೆ ಉಲ್ಲಂಘಿಸಿದವರಿಗೆ ಕಾನೂನು ಪ್ರಕಾರ ಶಿಕ್ಷೆ ಹಾಗು ದಂಡ ವಿಧಿಸಲಾಗು ವುದು ಎಂದು ಎಚ್ಚರಿಸಿದರು.

ವಕೀಲರಾದ ಕಾಮೇಶ್‌, ಮೊಬೈಲ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿ, ಇಂದು ಮೊಬೈಲ್ ಬಳಕೆ ಕಾಡ್ಗಿಚ್ಚಿನಂತೆ ಎಲ್ಲೆಡೆ ಪಸರಿಸುತ್ತಿದ್ದು, ಅದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಮೊಬೈಲ್ ಬಳಕೆಯಿಂದ ಅನುಕೂಲಕ್ಕಿಂತ ಹೆಚ್ಚು ಅನಾನುಕೂಲವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸುನಿತಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ನಿರೀಕ್ಷಕರಾದ ಮಂಜುನಾಥ್‌ ವಿದ್ಯಾರ್ಥಿ ಗಳಿಗೆ ಬಾಲಕಾರ್ಮಿಕ ಪದ್ಧತಿ ಬಗ್ಗೆ ಮಾಡಿರುವ ತಿದ್ದುಪಡಿ ಕಾನೂನು ಕುರಿತು ತಿಳಿಸಿಕೊಟ್ಟರು. ಸಹಾಯಕ ಸರ್ಕಾರಿ ಅಭಿಯೋಜಕರಾದ ನಾರಾಯಣಸ್ವಾಮಿ, ವಕೀಲರ ಸಂಘದ ಅಧ್ಯಕ್ಷರಾದ ಗಿರಿಧರ, ಕಾರ್ಯದರ್ಶಿ ದೇವೂರಾವ್‌ಜಾಧವ್‌, ವಕೀಲರಾದ ಸಂಜಯ್‌, ಯೋಗೀಶ್‌, ಅನಿತಾ ಮತ್ತಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.