ವಿದ್ಯಾರ್ಥಿಗಳಿಗೆ ಪ್ರಕೃತಿ ರಕ್ಷಣೆಯ ಜವಾಬ್ದಾರಿ ಅಗತ್ಯ


Team Udayavani, Jul 9, 2019, 3:59 PM IST

RN-TDY-3..

ಚನ್ನಪಟ್ಟಣದ ಹನುಮಂತನಗರದ ಸರ್ಕಾರಿ ಕಿರಿಯ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಸಿ ವಿತರಣೆ ಮಾಡಲಾಯಿತು.

ಚನ್ನಪಟ್ಟಣ: ಭವಿಷ್ಯದ ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳು ಪರಿಸರ ಹಾಗೂ ಪ್ರಕೃತಿ ರಕ್ಷಣೆಯಲ್ಲಿ ಮಹತ್ತರ ಜವಾಬ್ದಾರಿ ವಹಿಸಬೇಕಿದೆ ಎಂದು ಟಯೊಟಾ ಹಾಗೂ ಕಿಲೊರ್ಸ್ಕರ್‌ ಮೋಟಾರ್ ಘಟಕ 1ರ ವ್ಯವಸ್ಥಾಪಕ ರೇಣುಕಾ ಪ್ರಸಾದ್‌ ಹೇಳಿದರು.

ಪಟ್ಟಣದ ಹನುಮಂತ ನಗರದ ಸರ್ಕಾರಿ ಕಿರಿಯ ಮಾದರಿ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ನಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಪ್ರಸಕ್ತ ದಿನಗಳಲ್ಲಿ ನಾವು ಸೇವಿಸುತ್ತಿರುವ ಆಹಾರದಿಂದ ಪ್ರಾರಂಭವಾಗಿ ಕುಡಿಯುವ ನೀರು, ಗಾಳಿಯೂ ವಿಷಮಿಶ್ರೀತದಿಂದ ಕೂಡಿರುವುದು ಅನಾರೋಗ್ಯ ಬರಲು ಕಾರಣವಾಗಿದೆ. ಪ್ರಕೃತಿಯನ್ನು ನಾಶಪಡಿಸುತ್ತಿರುವುದರಿಂದಲೇ ಈ ರೀತಿಯ ಅವ್ಯವಸ್ಥೆ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದುರಾಸೆಗೆ ಪ್ರಕೃತಿಗೆ ಕೊಡಲಿ: ವ್ಯವಸ್ಥಾಪಕ ಅಜಯ್‌ಸಿಂಗ್‌ ಮಾತನಾಡಿ, ವರ್ಷಗಳ ಹಿಂದೆ ಭೂಮಿಯ ಮೇಲೆ ಸುರಿಯುತ್ತಿದ್ದ ಮಳೆಯ ಪ್ರಮಾಣ ಹೇರಳವಾಗಿತ್ತು. ಪ್ರಕೃತಿ ಸಂಪತ್ತು ಹೇರಳವಾಗಿತ್ತು. ಆದರೆ, ಮನುಷ್ಯ ಬುದ್ಧಿವಂತನಾದಂತೆಲ್ಲಾ ತನ್ನ ಐಷಾರಾಮಿ ಜೀವನ ಹಾಗೂ ಹಣದ ದುರಾಸೆಗೆ ಪ್ರಕೃತಿಗೆ ಕೊಡಲಿ ಹಾಕಿದ ಪರಿಣಾಮವೇ ಇಂದು ಮಳೆಯ ಕೊರತೆ ಎದುರಾಗಿ ಪ್ರಕೃತಿಯ ಜೊತೆ ಮಾನವನು ಕೂಡ ಅವನತಿಯನ್ನು ಕಾಣಬಹುದಾಗಿದೆ. ದೇಶದ ರಕ್ಷಣೆ ಹಾಗೂ ಸಂಪತ್ತನ್ನು ಪೋಷಣೆ ಮಾಡಬೇಕಾದ ಕಾಳಜಿ ಹೊಂದಬೇಕಾಗಿರುವ ವಿದ್ಯಾರ್ಥಿಗಳು, ಪ್ರಕೃತಿ ರಕ್ಷಣೆಯನ್ನು ಮಾಡುವುದರ ಮುಖಾಂತರ ಮುಂದೊಂದು ದಿನ ನಡೆಯ ಬೇಕಿದ್ದ ಘೋರ ದುರಂತವನ್ನು ತಪ್ಪಿಸಬೇಕಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ:ಸಹಾಯಕ ವ್ಯವಸ್ಥಾಪಕ ಮಹೇಶ್‌ ಗಾಣಿಗೇರ್‌ ಮಾತನಾಡಿ, ಗುಣಮಟ್ಟದ ಶಿಕ್ಷಣವನ್ನು ನೀಡುವ ಶಿಕ್ಷಣ ಸಂಸ್ಥೆಗಳೆಂದರೆ ಅದು ಸರ್ಕಾರಿ ಶಾಲೆಗಳು. ನುರಿತ ಬೋಧಕರನ್ನು ಹೊಂದಿರುವ ಸರ್ಕಾರಿ ಶಾಲೆಗಳಲ್ಲಿ ಅನೇಕ ಮಹಾನೀಯರು ವಿದ್ಯಾಭ್ಯಾಸ ಮಾಡಿದ್ದಾರೆ ಎಂದರು.

ಘಟಕದ ಅಧಿಕಾರಿ ವೆಂಕಟರಮಣಸ್ವಾಮಿ ಮಾತನಾಡಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕ ರಾಜು, ಸಹಶಿಕ್ಷಕಿ ಇಂದ್ರಮ್ಮ, ಸೂರ್ಯನಾರಾಯಣ್‌, ಹರಿಪ್ರಸಾದ್‌, ಬಸವರಾಜ್‌, ಬಸವರಾಜ್‌ ಹೊಸಮಣೆ, ಅಂಜನೇಯ ಸ್ವಾಮಿ ದೇವಾಲಯದ ಅಧ್ಯಕ್ಷ ಶಿವರಾಮೇಗೌಡ, ಸಮಾಜ ಸೇವಕ ಟೈಲರ್‌ ಮಹೇಶ್‌, ಅಶ್ವಥ್‌, ಚಿಕ್ಕಣ್ಣಪ್ಪ, ಕಾಂತರಾಜು ಹಾಗೂ ಚನ್ನಪಟ್ಟಣ ಲೀಡರ್ ಅಕಾಡೆಮಿಯ ತಂಡ ಹಾಜರಿದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.