ಪ್ರಾಂಶುಪಾಲೆ ವರ್ತನೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ


Team Udayavani, Feb 13, 2019, 7:28 AM IST

pranshu.jpg

ಕನಕಪುರ: ವರ್ಗಾವಣೆಗೊಂಡಿರುವ ಪ್ರಾಂಶು ಪಾಲರನ್ನು ಮತ್ತೆ ಇಲ್ಲಿಗೆ ನಿಯೋಜಿಸಬೇಕು ಮತ್ತು ಈಗಿರುವವರು ಸರಿಯಾಗಿ ಊಟ ನೀಡುವುದಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ತರಗತಿಗೆ ತೆರ ಳದೆ ತಮ್ಮ ಪೋಷಕರೊಂದಿಗೆ ಶಾಲೆ ಆವರಣದಲ್ಲಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಬಾದಗೆರೆ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆಯಿತು.

ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದ ಎನ್‌.ಗೋವಿಂದರಾಜು ಬೇರೆಡೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಕನ್ನಡ ಶಿಕ್ಷಕಿ ಆಶಾ ಅವರಿಗೆ ಈ ಜವಾಬ್ದಾರಿ ವಹಿಸಲಾಗಿತ್ತು. ಆದರೆ, ಆಶಾ ಪ್ರಾಂಶುಪಾಲರಾಗಿ ನಿಯುಕ್ತಿಗೊಂಡ ದಿನದಿಂದ ಮಕ್ಕಳಿಗೆ ಸರಿಯಾದ ಆಹಾರ ನೀಡದೇ ಅವರನ್ನೇ ಗದರುತ್ತಿದ್ದರು. ಇದರಿಂದ ಬೇಸತ್ತ ಮಕ್ಕಳು ತಮ್ಮ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದರು.

ಮೂಗರ್ಜಿ: ಈ ಶಾಲೆಯಲ್ಲಿ ಕಳೆದ 6 ವರ್ಷಗಳಿಂದ ಸೇವೆ ಸಲ್ಲಿಸಿದ ಪ್ರಾಂಶುಪಾಲ ಎನ್‌.ಗೋವಿಂದರಾಜು ಮಕ್ಕಳಲ್ಲಿ ಒಳ್ಳೆಯ ನಡತೆ ಮತ್ತು ಶಿಸ್ತನ್ನು ಬೆಳೆಸಿ ಉತ್ತಮವಾಗಿ ಊಟ ನೀಡುತ್ತಿದ್ದರು. ವರ್ಷದ ಹಿಂದೆ ಇವರನ್ನು ವರ್ಗಾವಣೆ ಮಾಡಲಾಗಿತ್ತು. ನಂತರ ಈಗಿರುವ ಕನ್ನಡ ಶಿಕ್ಷಕಿ ಆಶಾ ಮೇಲಧಿ ಕಾರಿಗಳಿಗೆ ಮಕ್ಕಳ ಹೆಸರಲ್ಲಿ ವಾರಕ್ಕೆ ಮೂರು ಮೂಗರ್ಜಿ ಬರೆದು ಕಳುಹಿಸುತ್ತಿದ್ದರು.

ಇದರಿಂದ ಬೇಸತ್ತ ಗೋವಿಂದರಾಜು ಬೇರೆಡೆಗೆ ವರ್ಗಾವಣೆ ಮಾಡಿಸಿಕೊಂಡು ಹೋಗಿದ್ದರು. ಸರ್ಕಾರ ಮತ್ತೆ ಇವರನ್ನು ಇದೇ ಶಾಲೆಗೆ 2 ತಿಂಗಳ ನಂತರ ವರ್ಗಾವಣೆ ಮಾಡಿತ್ತು. ಈ ವರ್ಗಾ ವಣೆಯಾದ ಅವಧಿಯಲ್ಲಿ ಇದೇ ಆಶಾ ಪ್ರಾಂಶು ಪಾಲರಾಗಿ ಶಾಲೆ ಮೇಲ್ವಿಚಾರಕಿಯಾಗಿ ಸರಿಯಾದ ಆಹಾರ ನೀಡದೇ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದರು.

ಪ್ರಾಂಶುಪಾಲೆ ಬೇಡ: ಇದರಿಂದ ಬೇಸತ್ತ ಪೋಷಕರು ಸಮಾಜ ಕಲ್ಯಾಣ ಸಚಿವರು ಮತ್ತು ಸಂಸದ ಡಿ.ಕೆ.ಸುರೇಶ್‌ ಅವರಿಗೆ ಮನವಿ ಸಲ್ಲಿಸಿ ಇಲ್ಲಿಗೆ ಮತ್ತೆ ಗೋವಿಂದ ರಾಜು ಅವರನ್ನು ವರ್ಗಾವಣೆ ಮಾಡಿಸಿದ್ದರು. ಇವರು ಬಂದ ಒಂದೂವರೆ ತಿಂಗಳಿನಲ್ಲಿ ಮತ್ತೆ ಮೇಲಧಿಕಾರಿಗಳಿಗೆ ಆಶಾ ಮೂಗರ್ಜಿಗಳನ್ನು ಬರೆ ಯಲು ಪ್ರಾರಂಭಿಸಿದರು. ಇದರಿಂದ ಬೇಸತ್ತ ಅಧಿ ಕಾರಿ ಗೋವಿಂದರಾಜು ಪದವಿ ಕಾಲೇಜಿನ ಪ್ರೊಫೆಸರ್‌ ಹುದ್ದೆ ಸಿಕ್ಕಿದ್ದರೂ ಮಕ್ಕಳಿಗಾಗಿ ಇಲ್ಲೇ ಇದ್ದು ಸೇವೆ ಸಲ್ಲಿಸಲು ಮನಸ್ಸು ಮಾಡಿದ್ದರು.

ಆದರೆ, ಇವರ ಚಿತ್ರಹಿಂಸೆ ತಾಳಲಾರದೇ ಅವರೇ ಇಲಾಖೆಗೆ ಪತ್ರ ಬರೆದು ವಾರದ ಹಿಂದೆ ಹೋಗಿದ್ದಾರೆ. ಪ್ರಾಂಶು ಪಾಲೆ ಆಶಾ ವರ್ತನೆಯಿಂದ ಬೇಸತ್ತ ಮಕ್ಕಳು ನಮಗೆ ಇವರು ಬೇಡ ಎಂದು ಹಠ ಹಿಡಿಯು ತ್ತಿರುವುದರಿಂದ ಪೋಷಕರು ಮತ್ತು ವಿದ್ಯಾರ್ಥಿ ಗಳು ತಮ್ಮ ಶಾಲೆಯ ಎದುರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ನಾಗರಾಜು ಭೇಟಿ ನೀಡಿ 15 ದಿನಗಳಲ್ಲಿ ನೂತನ ಪ್ರಾಂಶುಪಾಲರನ್ನು ನಿಯೋಜಿಸಲಾಗು ವುದು ಎಂದು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.