ಬಿಸಿಯೂಟಕ್ಕೆ ತಾತ್ಕಾಲಿಕ ತಡೆ
ಸರ್ಕಾರದಿಂದ ಆದೇಶ ,ಕ್ಷೀರ ಭಾಗ್ಯ ಯೋಜನೆಯೂ ಬಂದ್
Team Udayavani, Nov 4, 2020, 2:55 PM IST
ರಾಮನಗರ ಜಿಲ್ಲೆಯ ಅಂಗನವಾಡಿ ಕೇಂದ್ರವೊಂದರಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ವಿತರಣೆ ಯಾಗಬೇಕಿದ್ದ ಆಹಾರ ಪದಾರ್ಥಗಳನ್ನು ಜೋಡಿಸಿಇಟ್ಟಿರುವುದು. (ಸಂಗ್ರಹ ಚಿತ್ರ ),ಸಾಂದರ್ಭಿಕ ಚಿತ್ರ
ರಾಮನಗರ: ಕೋವಿಡ್ ಸೋಂಕು ಹೆಚ್ಚಳದಿಂದ ಸರ್ಕಾರ ವಿಧಿಸಿದ್ದ ಲಾಕ್ಡೌನ್ ನಿಂದಾಗಿ ಶಾಲೆಗಳು ಮುಚ್ಚಿದ್ದು, ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ ಬಿಸಿಯೂಟ ಮಕ್ಕಳಿಗೆ ಲಭ್ಯವಾಗುತ್ತಿಲ್ಲ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ತಲುಪಿಸುವ ವ್ಯವಸ್ಥೆಯನ್ನು ಜಿಲ್ಲಾ ಪಂಚಾಯ್ತಿ ಮಾಡಿತ್ತು. ಆದರೆ ಜೂನ್ನಲ್ಲಿ ಸರ್ಕಾರದ ಆದೇಶವಾಗಿದ್ದು, ಬಿಸಿಯೂಟಕ್ಕೆ ಬೇಕಾದ ಆಹಾರ ಪದಾರ್ಥಗಳ ದಾಸ್ತಾನನ್ನು ಶಾಲೆಗಳು ಪಡೆದುಕೊಂಡಿಲ್ಲ. ಲಾಕ್ಡೌನ್ ಕಾರಣದಿಂದಸರ್ಕಾರವೇ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ವ್ಯವಸ್ಥೆಯ ಮೂಲಕ ಆಹಾರ ಪದಾರ್ಥಗಳನ್ನು ವಿತರಿಸಿದ್ದು, ಸರ್ಕಾರಿ ಶಾಲೆಗಳ ಮೂಲಕವೂ ಮತ್ತೆ ಅದೇ ಕುಟುಂಬಗಳಿಗೆ ಆಹಾರ ಪದಾರ್ಥಗಳು ವಿತರಣೆಯಾಗುತ್ತವೆ ಎಂಬ ಕಾರಣಕ್ಕೆ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆಯನ್ನು ತತ್ಕಾಲಿಕವಾಗಿ ನಿಲ್ಲಿಸಲಾಗಿದೆ.
ಹೀಗಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಆಹಾರ ಪದಾರ್ಥಗಳು ಸಿಕ್ಕಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಗಳು ಆರಂಭವಾದ ತಕ್ಷಣದಲ್ಲೇ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಆರಂಭಿಸುವಂತೆ ಕರ್ನಾಟಕ ಸರ್ಕಾರದ ವಿತ್ತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ಬೇಸಿಗೆ ರಜೆಯ 57 ದಿನಗಳ ಪಡಿತರ ಅಕ್ಕಿ ಮತ್ತು ಬೇಳೆಯನ್ನು (ಏಪ್ರಿಲ್ ಮತ್ತು ಮೇ ತಿಂಗಳು) ಮಕ್ಕಳಿಗೆ ವಿತರಿಸಲಾಗಿದೆ. ಕೋವಿಡ್ ರಜೆಯ (ಜೂನ್ ತಿಂಗಳಿಂದ ನಂತರ) ಪಡಿತರವನ್ನು ವಿತರಿಸಬಾರದು ಎಂದು ಸರ್ಕಾರ ಆದೇಶಿಸಿದ್ದರಿಂದ ಅಕ್ಕಿ ಮತ್ತು ಬೇಳೆಯನ್ನು ಶಾಲೆಗಳು ಆಹಾರ ಇಲಾಖೆಯ ಗೋದಾಮುಗಳಿಂದ ಪಡೆದುಕೊಂಡಿಯೇ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 76,752 ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ದೂರೆಯಬೇಕಿದೆ.
ಹಾಲಿನ ಪುಡಿ ಖರೀದಿ ಸ್ಥಗೀತ: ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆ ಜೊತೆಗೆ ಕ್ಷೀರಭಾಗ್ಯ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶಿಸಿದೆ. ಹೀಗಾಗಿ ಹಾಲು ಒಕ್ಕೂಟಗಳಿಂದ ಹಾಲಿನ ಪುಡಿ ಖರೀದಿಯೂ ನಿಂತಿದೆ. ಆದರೆ ಕೆಲವು ಸರ್ಕಾರಿ ಶಾಲೆಗಳಲ್ಲಿ ಹಾಲಿನ ಪುಡಿ ದಾಸ್ತಾನು ಇದೆ. ಇದನ್ನು ಸಂರಕ್ಷಿಸಿ ಇಡಲಾಗಿದೆ. ಕ್ಷೀರಭಾಗ್ಯ ಯೋಜನೆಗೂ ತಡೆಯಾಗಿರುವುದರಿಂದ ಹಾಲಿನ ಒಕ್ಕೂಟಗಳಲ್ಲಿ ಟನ್ಗಟ್ಟಲೆ ಹಾಲಿನ ಪುಡಿ ಶೇಖರಣೆಯಾ ವಾಲಿ ಗಿದೆ ಎಂದು ಬಮೂಲ್ನ ಸದಸ್ಯರು ತಿಳಿಸಿದ್ದಾರೆ.
2020-21ನೇ ಸಾಲಿನ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಧ್ಯಾಹ್ನದ ಉಪಾಹಾರ ಯೋಜನೆ ಮತ್ತು ಕ್ಷೀರ ಭಾಗ್ಯ ಯೋಜನೆಯಡಿಯಲ್ಲಿ ಆಹಾರ ಪದಾರ್ಥಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಸರ್ಕಾರದ ಆದೇಶವಾಗಿರುವುದರಿಂದ ಅಕ್ಕಿ, ಬೇಳೆ ಮುಂತಾದವುಗಳನ್ನು ಆಹಾರ ಇಲಾಖೆಯ ಗೋದಾಮುಗಳಿಂದಲೇ ಶಾಲೆಗಳು ಪಡೆದುಕೊಂಡಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಆಹಾರ ಪದಾರ್ಥಗಳ ದಾಸ್ತಾನು ಇಲ್ಲ. –ನಟರಾಜ್, ಶಿಕ್ಷಣ ಅಧಿಕಾರಿ, ಅಕ್ಷರ ದಾಸೋಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ