ಲಕ್ಕೋಜನಹಳ್ಳಿಯಲ್ಲಿ ತಹಶೀಲ್ದಾರ್‌ ವಾಸ್ತವ್ಯ


Team Udayavani, Feb 21, 2021, 1:23 PM IST

ಲಕ್ಕೋಜನಹಳ್ಳಿಯಲ್ಲಿ ತಹಶೀಲ್ದಾರ್‌ ವಾಸ್ತವ್ಯ

ರಾಮನಗರ: ತಾಲೂಕಿನ ಕೈಲಾಂಚ ಹೋಬಳಿ ಲಕ್ಕೋಜನಹಳ್ಳಿ ಸರ್ಕಾರಿ ಶಾಲಾ ಆವರಣದಲ್ಲಿ ತಹಶೀಲ್ದಾರ್‌ ನರಸಿಂಹ ಮೂರ್ತಿ , ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ನಡೆಸಿಕೊಟ್ಟರು.

ತಾಲೂಕು ತಹಸೀಲ್ದಾರ್‌ ನರಸಿಂಹಮೂರ್ತಿ ಮತ್ತು ಅಧಿಕಾರಗಳ ತಂಡ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ವಾಸ್ತವ್ಯ ಹೂಡಿದ್ದರು. ಜನತೆಯಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಮನೆ ಬಾಗಿಲಿಗೆ ಬಂದ ತಾಲೂಕು ಆಡಳಿತದ ಅಧಿಕಾರಿಗಳೊಂದಿಗೆ ನಾಗರೀಕರು, ತಮ್ಮ ಸಮಸ್ಯೆಗಳನ್ನು ಹೇಳಿ ಕೊಂಡರು. ಕೆಲವರು ತಮ್ಮ ಪಹಣಿಯಲ್ಲಿ ಲೋಪಗಳ ಬಗ್ಗೆ ದೂರು ನೀಡಿದರೇ, ಕೆಲವರು ಪೋಡಿ ಸಮಸ್ಯೆ ಮುಂದಿಟ್ಟರು. ಪೌತಿ ಖಾತೆ ಮಾಡಿ ಕೊಟ್ಟಿಲ್ಲ. ಮೋಜಿಣಿ ಸರ್ವೆ, ಹದ್ದು ಬಸ್ತಿ ಗುರುತಿಸಲು ವಿಳಂಬದ ಬಗ್ಗೆಯೂ ದೂರುಗಳು ವ್ಯಕ್ತವಾದವು. ಸಾಗುವಳಿ ಚೀಟಿಗಾಗಿ ಕೆಲವು ಅರ್ಜಿ ಸಲ್ಲಿಸಿದರೆ, ಕೆಲವರು ಇ-ಖಾತೆ ಮಾಡಿ ಕೊಡುವಲ್ಲಿ ವಿಳಂಬವಾಗುತ್ತಿದೆ ಎಂದು ನೇರ ತಹಶೀಲ್ದಾರರ ಬಳಿ ನಿವೇದಿಸಿಕೊಂಡರು. ಅರ್ಚಕರು ತಸ್ತಿಕ್‌ ಬಿಡುಗಡೆ, ಪಿಂಚಣಿ ಸಮಸ್ಯೆ ಬಗೆಹರಿಸಿಕೊಡಿ, ಪಿಂಚಣಿ ಸಕಾಲಕ್ಕೆ ಕೊಡಿಸಿ, ಹೊಸ ಪಿಂಚಣಿ ಮಂಜೂರು ಮಾಡಿಕೊಡಿ ಎಂಬ ಅರ್ಜಿ ಗಳು ಸಲ್ಲಿಕೆಯಾದವು. ಎಲ್ಲ ಅಹವಾಲು, ದೂರುಗಳನ್ನು ಸಮಾಧಾನ ಚಿತ್ತದಿಂದ‌ಲೇ ಆಲಿಸಿದ ತಹಶೀಲ್ದಾರರು, ಕೆಲವು ಅರ್ಜಿಗಳನ್ನು ಸ್ಥಳದಲ್ಲೇ ವಿಲೇ ಮಾಡಿದರು. ಇದೇ ವೇಳೆ ಅಧಿಕಾರಿಗಳು ಸರ್ಕಾರದ ಯೋಜನೆಗಳ ಬಗ್ಗೆಯೂ ಗ್ರಾಮ ಸ್ಥರ ಗಮನ ಸೆಳೆದರು. ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಫ‌ಲಾನುಭವಿಗಳಿಗೆ ‌ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು.

ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ತಾಪಂ ಇಒ ಶಿವಕುಮಾರ್‌, ಭೂದಾಖಲೆಗಳ ಸಹಾಯಕ ನಿರ್ದೇಶಕ ಕೆ. ರಮೇಶ್‌, ಉಪ ತಹಶೀಲ್ದಾರ್‌ ವಿಲಿಯಂ, ಹಕ್ಕುದಾಖಲೆ ಶಿರಸ್ತೇದಾರ್‌ ಕೃಷಿ, ‌ ಪಿಡಿಒ ಜಯಶಂಕರ್‌, ಮುಖ್ಯಶಿಕ್ಷಕಿ ರೇಖಾ, ಗ್ರಾಪಂ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷ ಚಂದ್ರಗಿರಿ, ಸದಸ್ಯರಾದ ಚಲುವರಾಜ್‌, ನವೀನ ನಾಗರಾಜು, ಆರ್‌.ಮೂರ್ತಿನಾಯಕ್‌, ಶೋಭಾ, ಶಿವಮ್ಮ ಆಹಾರ ಇಲಾಖೆ ಶಿರಸ್ತೇದಾರ್‌ ಜಯಪ್ಪ, ರಾಜಸ್ವನಿರೀಕ್ಷಕ ಪುಟ್ಟರಾಜು, ಸರ್ವೆ ಮೇಲ್ವಿಚಾರಕ ಮಹದೇವಯ್ಯ, ಸರ್ವೇಯರ್‌ ಪ್ರಭಾಕರ್‌, ಗ್ರಾಮಲೆಕ್ಕಿಗರಾದ ಉಷಾ, ಸುಷ್ಮಾ, ಕುಮುದ, ಸುಖನ್ಯ, ಮಂಜುನಾಥ್‌, ಗಿರೀಶ್‌, ಚನ್ನಮ್ಮ, ಸುಷ್ಮಾ, ಶಿಕ್ಷಕರಾದ ಪಾಪಣ್ಣ, ಗ್ರಾಪಂ ಮಾಜಿ ಸದಸ್ಯ ನಾಗರಾಜು, ನಾಗೇಶ್‌, ಎಲ್‌.ಎಂ.ಸಂತೋಷ್‌, ಪುಟ್ಟಸಿದ್ದಯ್ಯ ಮತ್ತಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.