ಸಂವಿಧಾನ ಬದಲಾಯಿಸುವ ಉದ್ದೇಶ ಬಿಜೆಪಿಗಿಲ್ಲಾ


Team Udayavani, Apr 9, 2019, 5:39 PM IST

ram
ಚನ್ನಪಟ್ಟಣ: ವಿಶ್ವದ ಗಮನ ಸೆಳೆದಿರುವ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಉದ್ದೇಶ ಭಾರತೀಯ ಜನತಾ ಪಕ್ಷಕ್ಕೆ ಇಲ್ಲ. ಮತ ತಮ್ಮತ್ತ ಸೆಳೆಯಲು ವಿರೋಧಪಕ್ಷಗಳು ಮಾಡುತ್ತಿರುವ ಹುನ್ನಾರ ಎಂದು ಮಾಜಿ ಸಚಿವ, ಶಾಸಕ ಸುರೇಶ್‌ಕುಮಾರ್‌ ಹೇಳಿದರು.
ನಗರದ ವಕೀಲರ ಸಂಘದ ಕಚೇರಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅಶ್ವತ್ಥನಾರಾಯಣಗೌಡ ಅವರ ಪರ ಮತ ಪ್ರಚಾರ ನಡೆಸಿದ ಅವರು ಮಾತನಾಡಿ, ಭಾರತದ ಮಹಾನ್‌ ಗ್ರಂಥವಾದ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಾಧ್ಯವೇ ಇಲ್ಲ. ಮತದಾರರನ್ನು ದಿಕ್ಕು ತಪ್ಪಿಸಲು ಅದರಲ್ಲೂ ಹಿಂದುಳಿದ ಸಮುದಾಯದ ಮತಗಳನ್ನು ಕೇಂದ್ರಿಕರಿಸಿಕೊಳ್ಳಲು ಅನ್ಯಪಕ್ಷಗಳು ಮಾಡಿರುವ ತಂತ್ರಗಾರಿಕೆಯಾಗಿದೆ. ಸಂವಿಧಾನ ದುರ್ಬಲ ಗ್ರಂಥವಲ್ಲ. ಮಹಾನ್‌ ಮೇಧಾವಿಗಳು ರಚನೆ ಮಾಡಿರುವ ಮಹಾನ್‌ ಗ್ರಂಥವಾಗಿದೆ. ಭಾರತ ರತ್ನ, ಡಾ. ಬಿ.ಆರ್‌.ಅಂಬೇಡ್ಕರ್‌ಗೆ ಗೌರವ ನೀಡುವ ಪಕ್ಷವಿದ್ದರೆ ಅದು ಭಾರತೀಯ ಜನತಾ ಪಕ್ಷ ಎಂದರು.
ಪಾರದರ್ಶಕ ಆಡಳಿತಕ್ಕೆ ಮತ್ತೂಮ್ಮೆ ಅವಕಾಶ ನೀಡಿ: ದೇಶದ ಸುರಕ್ಷತೆಗಾಗಿ ಹಾಗೂ ಅಭಿವೃದ್ಧಿಗಾಗಿ ಭಾರತೀಯ ಜನತಾ ಪಕ್ಷವನ್ನು ಕಾನೂನು ಪಂಡಿತರಾಗಿರುವ ವಕೀಲರು ಬೆಂಬಲಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಪಾರದರ್ಶಕ ಆಡಳಿತಕ್ಕೆ ಮತ್ತೂಮ್ಮೆ ಅವಕಾಶ ನೀಡಬೇಕು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಗೆ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.
ಭರವಸೆ ಕಾರ್ಯಗತವಾಗಲಿ: ನ್ಯಾಯಾಲಯದಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಸೆಳೆದಾಗ ಸಭೆಯಲ್ಲಿ ಹಾಜರಿದ್ದ ಹಿರಿಯ ವಕೀಲೆ ಅಂಬಿಕಾ ಅವರು ಚುನಾವಣಾ ಸಂದರ್ಭಗಳಲ್ಲಿ ಭರವಸೆಗಳನ್ನು ನೀಡುತ್ತೀರಿ, ಇದೇ ಮಾತನ್ನು ಕೇಳಲು ಮತ್ತೂಂದು ಚುನಾವಣೆಯನ್ನು ಎದುರು ನೋಡಬೇಕಾಗುತ್ತದೆ ಎಂದು ನಯವಾಗಿಯೇ ತರಾಟೆಗೆ ತಗೆದುಕೊಂಡರು.
ನ್ಯಾಯಾಲಯದಲ್ಲಿ ಕಿರಿಯ ವಕೀಲರಿಗೆ ಕ್ಯಾಂಟಿನ್‌ ವ್ಯವಸ್ಥೆಯಿಲ್ಲ. ದೂರದ ಗ್ರಾಮಗಳಿಂದ ಬಂದು ನ್ಯಾಯಾಲಯದಲ್ಲಿ ತರಬೇತಿ ಪಡೆಯುತ್ತಾರೆ. ಅವರಿಗೆ ಒಂದು ಕ್ಯಾಂಟಿನ್‌ ವ್ಯವಸ್ಥೆಯನ್ನು ಮಾಡಿಕೊಡಬೇಕು. ಇದು ಕೇವಲ ಭರವಸೆಗಳು ಆಗಬಾರದು, ಕಾರ್ಯಗತವಾಗಬೇಕು ಎಂದು ಮನವಿ ಮಾಡಿದರು.
ವಕೀಲರ ಬೇಡಿಕೆಗಳನ್ನು ಸ್ವೀಕರಿಸಿದ ಸುರೇಶ್‌ ಕುಮಾರ್‌ ಮುಂದಿನ ದಿನಗಳಲ್ಲಿ ನ್ಯಾಯಾಲಯದ ಎಲ್ಲಾ ಸಮಸ್ಯೆಗಳನ್ನು ಬಗೆ ಹರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಎಂ.ಕೆ. ನಿಂಗಪ್ಪ, ಖಜಾಂಚಿ ಹೇಮಂತ್‌, ತಾಲೂಕು ಬಿಜೆಪಿ ಅಧ್ಯಕ್ಷ ಎಂ.ಎನ್‌.ಆನಂದಸ್ವಾಮಿ, ನಗರ ಘಟಕದ ಅಧ್ಯಕ್ಷ ವಿಷಕಂಠು, ಪಕ್ಷದ ಮುಖಂಡರಾದ ಜಯರಾಮು, ರಾಂಪುರ ಮಲವೇಗೌಡ, ಹುಲುವಾಡಿ ದೇವರಾಜು, ನೇರಳೂರು ನಾಗರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.