ನಗರದ ಮಿನಿ ವಿಧಾನಸೌಧ ಇಂದಿನಿಂದ ಕಾರ್ಯಾರಂಭ
Team Udayavani, May 20, 2019, 3:49 PM IST
ಕನಕಪುರ: ನಗರದ ಹೃದಯಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಿನಿ ವಿಧಾನಸೌಧದಲ್ಲಿ ಭಾನುವಾರ ಕಾರ್ಯಾರಂಭ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಿನಿ ವಿಧಾನಸೌಧ ಕಟ್ಟಡವನ್ನುಉದ್ಘಾಟನೆ ಮಾಡಲಾಗಿತ್ತು. ಕಟ್ಟಡ ನಿರ್ಮಾಣ ವಾಗಿ ಬರೋಬ್ಬರಿ ಒಂದು ವರ್ಷ 5 ತಿಂಗಳು ಬಳಿಕ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ. ಕಳೆದ ವಿಧಾನ ಸಭೆ ಚುನಾವಣೆಗೂ ಮುನ್ನಾ ಮಿನಿವಿಧಾನ ಸೌಧವನ್ನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಮಗಾರಿ ಅಪೂರ್ಣಗೊಂಡಿದ್ದರೂ ಉದ್ಘಾಟನೆ ಮಾಡಿದ್ದರು. ಉದ್ಘಾಟನೆ ನಾಮಫಲಕದಲ್ಲಿ ಹೆಸರು ಬರಬೇಕೆಂಬ ಉದ್ದೇಶ ವನ್ನಿಟ್ಟುಕೊಂಡು ಕಾಮಗಾರಿ ಅಪೂರ್ಣಗೊಂಡಿದ್ದರೂ ಉದ್ಘಾಟನೆಮಾಡಾಯಿತು ಎಂಬ ಮಾತುಗಳು ಕೇಳಿದವು.
ವಿಶೇಷವೆಂದರೆ ಕಟ್ಟಡದ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ತಳಮಹಡಿಯಲ್ಲಿ ತಾಲೂಕು ಕಚೇರಿ, ಉಪ ಖಜಾನೆ, ಸರ್ವೇ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆ ಇರಲಿವೆ. ಮೊದಲನೆ ಮಹಡಿಯಲ್ಲಿ ತಾಲೂಕು ಪಂಚಾಯ್ತಿ ಸೇರಿದಂತೆ ಇನ್ನಿತರೆ ಕಚೇರಿಗಳು ಒಂದೇ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ. ಸೋಮವಾರ ದಿಂದಲೇ ಮಿನಿವಿಧಾನಸೌಧದಲ್ಲಿ ಕಾರ್ಯರಂಭ ಮಾಡುವ ಇಂಗಿತವನ್ನು ತಹಸೀಲ್ದಾರ್ ಕುನಾಲ್ ವ್ಯಕ್ತಪಡಿಸಿದ್ದಾರೆ.ಭಾನುವಾರ ನಡೆದ ಪೂಜೆ ಮತ್ತು ಹೋಮಹವನದ ಮೂಲಕ ಕಚೇರಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣೆ ಅಧಿಕಾರಿ ಶಿವ ರಾಮು ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…