ವಿದ್ಯುತ್‌ ಪೂರೈಕೆಗೆ ರೈತರಿಂದ ಬೆಸ್ಕಾಂಗೆ ಗಡುವು


Team Udayavani, Mar 26, 2021, 12:53 PM IST

ವಿದ್ಯುತ್‌ ಪೂರೈಕೆಗೆ ರೈತರಿಂದ ಬೆಸ್ಕಾಂಗೆ ಗಡುವು

ಮಾಗಡಿ: ಏಪ್ರಿಲ್‌ 1ರೊಳಗೆ ಬೆಸ್ಕಾಂ ಎಂಜಿನಿಯರ್‌ ಗಳು ಸಮಸ್ಯೆ ಬಗೆಹರಿಸದಿದ್ದರೆ ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ನೇತೃತ್ವದಲ್ಲಿ ಉಗ್ರ ಹೋರಾಟನಡೆಸಲಾಗುವುದು ಎಂದು ಜಿಪಂ ಮಾಜಿ ಸದಸ್ಯಎಂ.ಕೆ.ಧನಂಜಯ್ಯ ಎಚ್ಚರಿಕೆ ನೀಡಿದರು.

ತಾಲೂಕಿನ ಹೊಸಪಾಳ್ಯದಲ್ಲಿ ಬೆಸ್ಕಾಂ ಅಧಿಕಾರಿಗಳುಮತ್ತು ಶಾಸಕ ಎ.ಮಂಜುನಾಥ್‌ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಉಗ್ರ ಹೋರಾಟ: ತಾಲೂಕಿನ ಶಿವನಸಂದ್ರ ಗ್ರಾಮದಬಳಿ ವಿದ್ಯುತ್‌ ಸರಬರಾಜು ಕೇಂದ್ರದ ಕಾಮಗಾರಿ ಶೇ.95 ಪೂರ್ಣಗೊಂಡಿದೆ. ಆದರೆ, ದೊಡ್ಡ ಸೋಮನಹಳ್ಳಿಗ್ರಾಮದ ವ್ಯಕ್ತಿಯೊಬ್ಬರ ಜಮೀನಲ್ಲಿದ್ದ ಮರ ಕಡಿಯಬೇಕಿದ್ದು, ಅವರಿಗೆ 2 ವರ್ಷವಾದರೂ ಪರಿಹಾರನೀಡಿಲ್ಲ, ಈ ಸಂಬಂಧ ರೈತ ಶಾಸಕರ ಗಮನಕ್ಕೆತಂದರೂ ಪ್ರಯೋಜನ ವಾಗಿಲ್ಲ, ಇದರಿಂದ ಕಾಮಗಾರಿ ಸ್ಥಗಿತವಾಗಿದ್ದು, ಹೊಸಪಾಳ್ಯ, ಚಿಕ್ಕಮುದಿಗೆರೆ ಭಾಗದ ರೈತರಿಗೆ ಸಮರ್ಪಕವಾಗಿ ವಿದ್ಯುತ್‌ ಸರಬರಾಜು ಆಗದೇ ತೊಂದರೆಯಾಗುತ್ತಿದೆ. ಇನ್ನೊಂದು ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ ನಿಶ್ಚಿತ ಎಂದು ತಿಳಿಸಿದರು.

ಅಧಿಕಾರಿಗಳೇ ಹೊಣೆ: ತಾಪಂ ಸದಸ್ಯ ಎಂ.ಎಚ್‌.ಸುರೇಶ್‌ ಮಾತನಾಡಿ, ಸಾಲ ಮಾಡಿ ರೈತರು ಕೊಳವೆಬಾವಿ ಕೊರೆಸಿದ್ದಾರೆ. ಅವರ ಪಂಪ್‌ಸೆಟ್‌ಗಳಿಗೆಸಮರ್ಪಕವಾಗಿ ವಿದ್ಯುತ್‌ ಸರಬರಾಜು ಆಗದೇತುಂಬ ತೊಂದರೆ ಅನುಭವಿಸುತ್ತಿದ್ದಾರೆ. ಇತ್ತಬಡ್ಡಿಯೂ ಕಟ್ಟಲಾಗದ ಪರಿಸ್ಥಿತಿ ಎದುರಿಸುತ್ತಿದ್ದಾರೆ.ಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲ,ಬೆಸ್ಕಾಂ ಎಂಜಿನಿಯರ್‌ ನೀಡುವ 3 ಗಂಟೆ ವಿದ್ಯುತ್‌ ನಲ್ಲಿ 40 ರಿಂದ 50 ಬಾರಿ ವಿದ್ಯುತ್‌ ಕಡಿತಗೊಳ್ಳುತ್ತಿರುತ್ತದೆ. ಪಂಪ್‌ ಮೋಟಾರ್‌ಗಳು ಸುಟ್ಟು ಹೋಗುತ್ತಿವೆ. ತಾಲೂಕಿನ ಆಡಳಿತದ ಜವಾಬ್ದಾರಿ ಹೊತ್ತವರುವಿದ್ಯುತ್‌ ಸಮಸ್ಯೆ ಕುರಿತು ವಿಧಾನಸಭೆಯಲ್ಲಿಚರ್ಚಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರೈತರವಿದ್ಯುತ್‌ ಸಮಸ್ಯೆಗಳನ್ನು ಕೂಡಲೇ ಎಂಜಿನಿಯರ್‌ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಾಗುವಅನಾಹುತ ಗಳಿಗೆ ಅಧಿಕಾರಿಗಳೇ ನೇರ ಹೊಣೆ ಹೊರಬೇಕಾಗುತ್ತದೆ ಎಂದರು.

ಲೈನ್‌ಮೆನ್‌ಗಳು ಬರಲ್ಲ: ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್‌ ಮಾತನಾಡಿ, ರೈತರಜಮೀನುಗಳಲ್ಲಿ ಸುಟ್ಟು ಹೋಗಿರುವ ಟೀಸಿಗಳನ್ನುಬದಲಾವಣೆ ಮಾಡಿ ಎಂದು ತಿಳಿಸಿದ್ದರೂ ಬೆಸ್ಕಾಂಅಧಿಕಾರಿಗಳು ಟೀಸಿ ಬದಲಾವಣೆ ಮಾಡದೇ ಬೆಳೆಗಳು ನಾಶವಾಗುತ್ತಿವೆ. ವಿದ್ಯುತ್‌ ಸಂಪರ್ಕ ಕಡಿತವಾಗಿ2-3 ದಿನವಾದರೂ ಲೈನ್‌ಮೆನ್‌ಗಳು ಬರುವುದಿಲ್ಲ ಎಂದು ಅಧಿಕಾರಿಗಳ ವಿರುದ್ಧ ಲೇವಡಿ ಮಾಡಿದರು ಬೆಸ್ಕಾಂ ಇ.ಇ.ಮಂಜುನಾಥ್‌ ಮಾತನಾಡಿ,ವಿದ್ಯುತ್‌ ಲೈನ್‌ ಕಾಮಗಾರಿ ಕೊರೊನಾದಿಂದಸ್ಥಗಿತಗೊಂಡಿತ್ತು. ರೈತರ ಜಮೀನಿನಲ್ಲಿ ಕಾಮಗಾರಿಸಮಸ್ಯೆಯಾಗಿದೆ. ಸರಿಪಡಿಸಲಾಗುವುದು, ಬೇಸಿಗೆಆಗಿರುವುದರಿಂದ ವಿದ್ಯುತ್‌ ಸರಬರಾಜಿನ ಲೋಡ್‌ನಲ್ಲಿ ಸಮಸ್ಯೆ ಇತ್ತು. ಬೇರೆಡೆ ಲೈನ್‌ ಮೂಲಕ ತರಲುಪ್ರಯತ್ನಿಸಿದ್ದೇವೆ. 3 ದಿನಗಳಲ್ಲಿ ಇಲ್ಲಿನ ವಿದ್ಯುತ್‌ ಸಮಸ್ಯೆಬಗೆಹರಿಸುವ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆ ಸ್ಥಗಿತಗೊಳಿಸಿದರು.

ತಾಪಂ ಸದಸ್ಯ ಕೆ.ಎಚ್‌.ಶಿವರಾಜು, ಟಿಎಪಿಸಿಎಂ ಎಸ್‌ ನಿರ್ದೇಶಕ ಸಿ.ಬಿ.ರವೀಂದ್ರ, ಗ್ರಾಪಂ ಅಧ್ಯಕ್ಷ ರವಿಕುಮಾರ್‌, ಗಂಗರಾಜು,ಮಾಜಿ ಸದಸ್ಯರಾದ ಜಾನಿಗೆರೆ ರವೀಶ್‌, ಪಾಪಣ್ಣಗೌಡ, ಕುಲುಮೆಪಾಳ್ಯದ ವಿಶ್ವನಾಥ್‌, ಸಿ.ವಿ. ರಾಜಣ್ಣ,ಸುರೇಶ್‌, ಗಂಗಾಧರ್‌, ಯತೀಶ್‌, ಕಿರಣ್‌, ಗಂಗರಾಜು, ಬಿಳಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

ಅಧಿಕಾರಿಗಳ ವಿರುದ್ಧ ಆಕ್ರೋಶ :

ಶಾಸಕರು ರೈತರ ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಬೆಸ್ಕಾಂ ಎಂಜಿನಿಯರ್‌ಗಳು ರೈತರಿಂದ 28ಸಾವಿರ ಹಣ ಕಟ್ಟಿಸಿಕೊಂಡು 2 ವರ್ಷವಾದರೂ ಇದುವರೆಗೂ ರೈತರ ಪಂಪ್‌ಸೆಟ್‌ಗಳಿಗೆ ಟೀಸಿ ಅಳವಡಿಸಿಲ್ಲ, ಇದರಿಂದ ಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ತುಂಬ ತೊಂದರೆಯಾಗಿದೆ. ಜತೆಗೆ ಕಷ್ಟಪಟ್ಟುಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿ ರೈತರು ತೀರಾ ಕಷ್ಟದಲ್ಲಿದ್ದು, ಆರ್ಥಿಕವಾಗಿ ಸಂಕಷ್ಟಅನುಭವಿಸುವಂತಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಜಿಪಂ ಮಾಜಿ ಸದಸ್ಯ ಎಂ.ಕೆ.ಧನಂಜಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.