ಜಿಲ್ಲೆಗೆ ವಿಧಾನಪರಿಷತ್‌ ಸ್ಥಾನ ಸಾಧ್ಯತೆ!


Team Udayavani, Jun 13, 2020, 6:30 AM IST

dcm parishat

ರಾಮನಗರ: ರಾಮನಗರ ಜಿಲ್ಲೆಗೆ ವಿಧಾನ ಪರಿಷತ್‌ ಸ್ಥಾನ ಶೇ.100 ಸಿಗುವ ಭರವಸೆಯಿದೆ. ಅಲ್ಲದೆ ಎಲ್ಲರಿಗೂ ಒಪ್ಪಿಗೆಯಾಗುವಂತಹ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದೆ ಎಂದು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.  ತಾಲೂಕಿನ ಬಿಡದಿ ಹೋಬಳಿ ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯಿತಿಯ ತಾಳಗುಪ್ಪ ಗ್ರಾಮದಲ್ಲಿ ನ್ಯಾಷ ನಲ್‌ ರೂರಲ್‌ ವುಮನ್‌ ಲೈವ್ಲಿ ಹುಡ್‌ ಕಾರ್ಯಕ್ರಮದಡಿಯ  ಸ್ವಸಹಾಯ ಗುಂಪುಗಳ ಫ‌ಲಾನುಭವಿ ಸದಸ್ಯರ ಬಳಿ ಸಂವಾದ ನಡೆಸಲುಭೇಟಿ ಕೊಟ್ಟಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಧಾನ ಪರಿಷತ್‌ಗೆ ಟಿಕೆಟ್‌ ವಿಚಾರದಲ್ಲಿ ತಮ್ಮ ಪಕ್ಷದಲ್ಲಿ ಯಾವ ಗೊಂದಲವಿಲ್ಲ. ಪಕ್ಷ ಕಟ್ಟಿದವರು, ವಲಸೆ  ಬಂದಿರುವವರು ಎಲ್ಲರಿಗೂ ಒಪ್ಪಿಗೆ ಯಾಗುವಂತಹ ಸ್ಪರ್ಧಿಗಳ ಪಟ್ಟಿ ಸಿದ್ಧವಾಗಲಿದೆ ಎಂದರು. ಲಾಕ್‌ಡೌನ್‌ ನಂತರ ರಾಜ್ಯದಲ್ಲಿ ಕೋವಿಡ್‌-19 ಸೋಂಕಿತರ ಹೆಚ್ಚಳವಾಗುತ್ತಿದೆ ಎಂಬುದನ್ನು ಒಪ್ಪಿಕೊಂಡ ಸಚಿವರು, ಲಾಕ್‌ಡೌನ್‌  ನಂತರ ಜನರ ಓಡಾಟ, ರಾಜ್ಯ ಮತ್ತು ಜಿಲ್ಲೆಗಳ ನಡುವೆ ಹೆಚ್ಚಾಗಿದೆ. ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಆದರೆ ಈಗ ಕೋವಿಡ್‌ -19 ಸೋಂಕಿತರ ಚಿಕಿತ್ಸೆಗೆ ರಾಜ್ಯದ ಆಸ್ಪತ್ರೆಗಳು ಸಿದ್ಧವಾ ಗಿವೆ. ಸಿದ್ಧತೆ ಮಾಡಿಕೊಳ್ಳುವ  ಸಲುವಾಗಿ ಲಾಕ್‌ಡೌನ್‌ ಅನಿ ವಾರ್ಯವಾಗಿತ್ತು ಎಂದರು.

ಇಟಲಿ ದೇಶದಲ್ಲಿ ಸಿದ್ಧತೆ ಮಾಡಿಕೊಳ್ಳದೆ ಇದ್ದುದರಿಂದ ಭಾರೀ ಅನಾಹುತವಾಗಿದೆ ಎಂದು ಆಗಿರುವ ಪ್ರಮಾದದ ಬಗ್ಗೆ ಸಚಿವರು ಉದಾಹರಣೆ ನೀಡಿದರು. ಜಿಲ್ಲೆಯಲ್ಲಿ ಜನರ ಓಡಾಟ ಹೆಚ್ಚಾಗುತ್ತಿದ್ದರೂ ಸೋಂಕುನಿಯಂತ್ರಣದಲ್ಲಿದೆ. ತಾಲೂಕು ಮತ್ತು ಜಿಲ್ಲಾಸ್ಪತ್ರೆ,  ಕೋವಿಡ್‌-19 ಆಸ್ಪತ್ರೆಯಲ್ಲಿ ಪರಿಣಾಮಕಾರಿ ಚಿಕಿತ್ಸೆ ನೀಡಲು ಉತ್ತಮ ಅವಕಾಶವಿದೆ. ಇನ್ನೊಂದು ವಾರದಲ್ಲಿ ಕೋವಿಡ್‌-19 ಸೋಂಕು ಪತ್ತೆ  ಯೋಗಾಲಯ ಸಿದ್ಧವಾ  ಗಲಿದೆ. ಆದರೂ ಜನರು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿ ಎಚ್ಚರಿಕೆಯಿಂದಿರಬೇಕು ಎಂದರು.

ಅನುಭವ ತಿಳಿಯಲು ಭೇಟಿ: ನ್ಯಾಷನಲ್‌ ರೂರಲ್‌ ವುಮನ್‌ ಲೈವ್ಲಿ ಹುಡ್‌ ಎಂಬ ಯೋಜನೆಯಡಿಯಲ್ಲಿ ಗ್ರಾಮೀಣ ಮಹಿಳೆಯರು ಸ್ವಸಹಾಯ ಸಂಘದ ಮೂಲಕ ಸ್ವ ಉದ್ಯೋಗ ಕೈಗೊಂಡಿದ್ದಾರೆ. ಯೋಜನೆಯನ್ನು ಹೇಗೆ ಬಳಸಿಕೊಂಡಿದ್ದಾರೆ, ಎಷ್ಟು ಉಪಯುಕ್ತವಾಗಿದೆ ಎಂಬ ಮೌಲ್ಯ ಮಾಪನ ನಡೆಯುತ್ತಿದೆ. ಈ ಮಹಿಳೆಯರ ಉತ್ಪನ್ನಗಳು ಮತ್ತು ಮಾದರಿಯಾಗಿ ಮಾಡುತ್ತಿರುವ ಕೆಲಸಗಳನ್ನು ಖುದ್ದು ಕಂಡು ಅವರ ಅನುಭವ ತಿಳಿದುಕೊಳ್ಳುವ ಸಲುವಾಗಿ ಭೇಟಿ  ಕೊಟ್ಟಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.