ಜೀತದಿಂದ ಮುಕ್ತವಾಯಿತು ಕುಟುಂಬ


Team Udayavani, Dec 4, 2019, 4:14 PM IST

rn-tdy-2

ಮಾಗಡಿ: ಇಟ್ಟಿಗೆ ಕಾರ್ಖಾನೆಯಲ್ಲಿ ಜೀತಕ್ಕಿದ್ದ ಪತಿ, ಪತ್ನಿ ಹಾಗೂ ಐವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಸದಸ್ಯರನ್ನು ಶಾಂತ ಜೀವನ ಜ್ಯೋತಿ ಸರ್ಕಾರೇತರ ಸಂಸ್ಥೆ ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ ಜೀತ ಕಾರ್ಮಿಕರನ್ನು ರಕ್ಷಣೆ ಮಾಡಿರುವ ಘಟನೆ ಮಾಡಬಾಳ್‌ ಹೋಬಳಿಯ ಅಜ್ಜನಹಳ್ಳಿ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ.

ಅಜ್ಜನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಟ್ಟಿಗೆ ತಯಾರಿಕಾ ಕಾರ್ಖಾನೆಯ ಮಾಲೀಕರಾದ ದೇವಮ್ಮ, ಗೋವಿಂದರಾಜು ವಿರುದ್ಧ ಮಾಗಡಿ ಪೊಲೀಸ್‌ ಠಾಣೆಯಲ್ಲಿ ಜೀತಕಾರ್ಮಿಕ ಪದ್ದತಿ ನಿರ್ಮೂಲನೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

9 ತಿಂಗಳಿನಿಂದ ಜೀತ: ಶೋಭಾ, ಕುಮಾರ್‌ ಈ ದಂಪತಿ ಹಾಗೂ ಇವರ ನಾಲ್ಕು ಮಂದಿ ಮಕ್ಕಳು ಜೀತದಿಂದ ಮುಕ್ತರಾಗಿದ್ದಾರೆ. ಹಾವೇರಿ ಜಿಲ್ಲೆಯ ಯಾತನಹಳ್ಳಿ ಗ್ರಾಮದವರಾಗಿದ್ದು, 9 ತಿಂಗಳ ಹಿಂದೆ ಇಟ್ಟಿಗೆ ತಯಾರಿಕೆ ಕಾರ್ಖಾನೆಯಲ್ಲಿ ಮಾಲೀಕರು ಜೀತಗಿಟ್ಟುಕೊಂಡಿದ್ದರು.

20 ಸಾವಿರ ನೀಡಿ ಜೀತಕ್ಕೆ ಪಡೆದುಕೊಂಡರು: ಪ್ರಾರಂಭದಲ್ಲಿ ರಾಮನಗರದ ಇಟ್ಟಿಗೆ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ ಕುಟುಂಬ ಅಲ್ಲಿ ಮುಂಗಾಡವಾಗಿ ಪಡೆದಿದ್ದ 20 ಸಾವಿರ ಹಣವನ್ನು ಮಾಲಿಕರಾದ ದೇವಮ್ಮ, ಗೋವಿಂದರಾಜು ಅವರು ಹಿಂದಿನ ಮಾಲೀಕರಿಗೆ ನೀಡಿ ಅಲ್ಲಿಂದ ಅಜ್ಜನಹಳ್ಳಿ ಬಳಿ ಇರುವ ಇಟ್ಟಿಗೆ ತಯಾರಿಕಾ ಕಾರ್ಖಾನೆಗೆ ಕರೆ ತಂದಿದ್ದರು ಎಂದು ಶಾಂತಿ ಜೀವನ ಜ್ಯೊತಿ ಸಂಸ್ಥೆ ತಿಳಿಸಿದೆ.

2 ವರ್ಷದಿಂದ ಊರಿನ ಮುಖ ನೋಡದ ಕುಟುಂಬ: ಈ ಕುಟುಂಬಸ್ಥರು ಕಳೆದ 2 ವರ್ಷದಿಂದ ತಮ್ಮ ಊರಾದ ಹಾವೇರಿ ಜಿಲ್ಲೆ ಯಾತನಹಳ್ಳಿ ಗ್ರಾಮಕ್ಕೆ ಹೋಗಲು ಸಾಧ್ಯವಾಗಿಲ್ಲ. ಈ ದಂಪತಿ ಪ್ರತಿದಿನ ಎಡಬಿಡದೆ 14 ಗಂಟೆಗಳ ಕಾಲ ದುಡಿಯುತ್ತಿದ್ದರು. ಪ್ರತಿ ದಿನ 1 ಸಾವಿರ ಇಟ್ಟಿಗೆ ತಯಾರಿಸುತ್ತಿದ್ದರು. ಜೊತೆಗೆ ಅವರ ನಾಲ್ಕು ಮಕ್ಕಳು ಸಹ ಇಟ್ಟಿಗೆ ಕಾರ್ಖಾನೆಯಲ್ಲಿ ಇಟ್ಟಿಗೆ ಒಣಗಿಸಿ ಸುಡುವುದು, ಜೋಡಿಸುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

20 ಸಾವಿರಕ್ಕೆ 51 ಸಾವಿರ ಬಡ್ಡಿ: ಮೂಲಸೌಕರ್ಯವಿಲ್ಲದ ಸಣ್ಣ ಕೊಠಡಿಯೊಂದರಲ್ಲಿ ರಾತ್ರಿ ಕಳೆಯುತ್ತಿದ್ದ ಕುಟುಂಬ ವಾರಕ್ಕೊಮ್ಮೆ ಇಂತಿಷ್ಟು ಎಂದು ಹಣ ಪಡೆದು ಧವಸ ಧಾನ್ಯ ತಂದು ಅಡುಗೆ ಮಾಡಿಕೊಂಡು ಊಟ ಮಾಡುತ್ತಿದ್ದರು. ಧವಸ ಧಾನ್ಯ ಖರೀದಿಸಲು ದಂಪತಿ ಹೊರ ಹೋಗಬೇಕಾದರೆ, ಮಕ್ಕಳನ್ನು ಕಾರ್ಖಾನೆಯಲ್ಲಿಯೇ ಬಿಟ್ಟು ಹೋಗಬೇಕಿತ್ತು.

ದಂಪತಿ ಊರಿಗೆ ಹೋಗಿ ಬರುವುದಾಗಿ ಕೇಳಿದಾಗ, ನಾವು ಕೊಟ್ಟಿರುವ ಮುಂಗಡ ಹಣ ಹಾಗೂ ಬಡ್ಡಿ ಸೇರಿ 71 ಸಾವಿರ ರೂ. ಆಗಿದೆ. ಕೊಟ್ಟು ಹೋಗುವಂತೆ ಹೇಳಿದ್ದರು ಎನ್ನಲಾಗಿದೆ. ಈ ಸಂಬಂಧ ಜಿಲ್ಲಾಢಾಳಿತ ಜೀತಮುಕ್ತ ಪ್ರಮಾಣ ಪತ್ರ ವಿತರಿಸಲಿದ್ದು, 2016 ಜೀತ ಮುಕ್ತ ಕಾರ್ಮಿಕರ ಪುನರ್ವಸತಿ ಕೇಂದ್ರ 20 ಸಾವಿರ ರೂ. ಪ್ರಾರಂಭಿಕ ಪರಿಹಾರ ನೀಡಲಿದ್ದು, ಕಾರ್ಮಿಕರನ್ನು ಶೀಘ್ರದಲ್ಲೇ ಕುಟುಂಬದ ಸ್ವಂತ ಊರಾದ ಹಾವೇರಿ ಜಿಲ್ಲೆಯ ಯಾತನಹಳ್ಳಿ ಗ್ರಾಮಕ್ಕೆ ಕಳಿಸಿಕೊಡಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.