ಜಯಂತಿ ಆಚರಣೆಗೆ ಅನುದಾನ ನೀಡದ ಸರ್ಕಾರ

ಸಮುದಾಯದ ಕೆಂಗಣ್ಣಿಗೆ ಗುರಿಯಾಗುತ್ತಿರುವ ಅಧಿಕಾರಿಗಳು | ಅನುದಾನಕ್ಕಾಗಿ ಸಂಘಗಳ ಪರದಾಟ

Team Udayavani, Aug 13, 2019, 4:52 PM IST

rn-ydy-1

ಮಾಗಡಿ: ದೇಶಕ್ಕಾಗಿ ಹಗಲಿರುಳು ದುಡಿದು ಮಡಿದ ಸಂತರು, ಗುರುಗಳ, ಮಹಾನೀಯರ ಸ್ಮರಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಜಯಂತಿ ಆಚರಣೆ ಘೋಷಣೆ ಮಾಡುತ್ತದೆ. ಕೆಲವು ಜಯಂತಿಗಳನ್ನು ಅದ್ಧೂರಿಯಾಗಿಯೂ ಆಚರಿಸುತ್ತದೆ. ಆದರೆ ಜಯಂತಿಗೆ ಸಂಬಂಧಿಸಿದ ಬಿಡುಗಡೆ ಮಾಡದೆ ವಿಳಂಬ ನೀತಿ ಅನುಸರಿಸುತ್ತದೆ ಎಂಬ ದೂರುಗಳು ಸಮುದಾಯಗಳಿಂದ ಕೇಳಿ ಬರುತ್ತಿವೆ.

ಅಧಿಕಾರಿಗಳು ಕೆಂಗಣ್ಣಿಗೆ ಗುರಿ: 2019 ರ ಫೆಬ್ರವರಿಯಿಂದ ಜುಲೈವರೆಗೆ ಆಚರಿಸಿದ ಮಹನೀಯರ ಜಯಂತಿಗಳಿಗೆ ಸರ್ಕಾರ ಇನ್ನೂ ಅನುದಾನ ಬಿಡುಗಡೆ ಮಾಡಿಲ್ಲ. ಸರ್ಕಾರ ಅನುದಾನ ಬಿಡುಗಡೆಗೊಳಿಸುವವರೆಗೆ ಅಧಿಕಾರಿಗಳು ನಿಸ್ಸಹಾಯಕರು. ಆದರೆ ಅನುದಾನಕ್ಕೆಂದು ಬರುವ ಸಮುದಾಯದ ಕೆಂಗಣ್ಣಿಗೆ ಅಧಿಕಾರಿಗಳು ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಧಿಕಾರಿಗಳು ಅನುದಾನ ಬಿಡುಗಡೆಗೊಳಿಸುತ್ತಿಲ್ಲ ಎಂಬ ದೂರು ಸಮುದಾಯಗಳಿಂದ ಕೇಳಿ ಬರುತ್ತಿವೆ.

ಪ್ರತಿವರ್ಷದಂತೆ ಈ ವರ್ಷವೂ ಮಡಿವಾಳ ಮಾಚೀದೇವ, ದೇವರ ದಾಸಿಮಯ್ಯ, ಬಸವ, ಶಂಕರ, ಕೆಂಪೇಗೌಡ, ಹೇಮರಡ್ಡಿ ಮಲ್ಲಮ್ಮ, ಭಗೀರಥ, ಅಡಪದ ಅಪ್ಪಣ್ಣ, ಸವಿತಾ ಮಹರ್ಷಿ, ಸರ್ವಜ್ಞ, ಸಂತ ಸೇವಾಲಾಲ್, ಕನಕದಾಸ, ಪುರಂದರದಾಸ, ತ್ಯಾಗರಾಜ, ಶಿವಾಜಿ ಜಯಂತಿ ಹೀಗೆ ಅನೇಕ ಸಂತರ, ಗುರುಗಳ, ಮಹಾನೀಯರ ಜಯಂತಿಗಳನ್ನು ಆಚರಿಸಿಕೊಂಡು ಬರಲಾಗಿದೆ. ಮುಂದೆಯೂ ಜಯಂತಿಗಳನ್ನು ಆಚರಿಸಲಾಗುತ್ತದೆ.

ಅನುದಾನಕ್ಕಾಗಿ ಸಮುದಾಯದವರ ಪರದಾಟ: ಸರ್ಕಾರ ಜಯಂತಿಗಳಿಗಾಗಿಯೇ ಅನುದಾನ ಮೀಸಲಿರಿಸಿ, ಘೋಷಣೆ ಮಾಡಿದೆ. ಆದರೆ ಪ್ರಸಕ್ತ ಸಾಲಿನ ಜಯಂತಿ ಆಚರಣೆಯಾಗಿರುವ ಜಯಂತಿಗಳ ಅನುದಾನ ಮಾತ್ರ ಬಿಡುಗಡೆಯೇ ಆಗಿಲ್ಲ. ಆಚರಣೆ ನಿರ್ವಹಣೆ ವಹಿಸಿಕೊಂಡಿರುವ ಇಲಾಖೆ ಅಧಿಕಾರಿಗಳ ಜೇಬಿಗೆ ಅಕ್ಷರಶಃ ಕತ್ತರಿ ಬಿದ್ದಿದೆ. ಆದರೂ ಸಂಬಂಧಪಟ್ಟ ಅನುದಾನ ನೀಡುವಂತೆ ವಿವಿಧ ಸಮಾಜದವರು ರಾಮನಗರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಎಡತಾಕುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ ಅನುದಾನಕ್ಕಾಗಿ ಸಂಬಂಧಪಟ್ಟ ಆರ್ಥಿಕ ಇಲಾಖೆಗೆ ರಾಮನಗರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕರು ಪತ್ರ ಬರೆದಿದ್ದರೂ ಪ್ರಯೋಜನವಾಗಿಲ್ಲ ಎಂಬ ಮಾತು ಕೇಳಿ ಬರುತ್ತಿದೆ. ಸರ್ಕಾರ ಅನುದಾನ ಬಿಡುಗಡೆಯಾದರೆ ಮಾತ್ರ ಸಂಬಂಧಪಟ್ಟ ಸಮುದಾಯಗಳಿಗೆ ಅನುದಾನ ನೀಡಲು ಸಾಧ್ಯ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ಕಾರದ ವಿಳಂಬ ನೀತಿಗೆ ಆಕ್ರೋಶ: ತಾಲೂಕು ಮಟ್ಟದಲ್ಲಿ ವಿವಿಧ ಸಮುದಾಯದವರು ಅದ್ಧೂರಿಯಾಗಿ ಮಹನೀಯರ ಜಯಂತಿ ಆಚರಿಸಿದ್ದಾರೆ. ವಿವಿಧ ಸಮಾಜದ ಸಂಘ, ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಪದಾಧಿಕಾರಿಗಳು ಜೇಬು ಖಾಲಿ ಮಾಡಿಕೊಂಡು ಸರ್ಕಾರದ ಅನುದಾನಕ್ಕಾಗಿ ರಾಮನಗರ ಜಿಲ್ಲಾಧಿಕಾರಿ ಕಚೇರಿಗೆ ಅಲೆದು ಅಲೆದು ಬೆಂಡಾಗಿ ಹೋಗಿರುವುದಂತೂ ಅಕ್ಷರಶಃ ಸತ್ಯ. ಸರ್ಕಾರದ ಈ ವಿಳಂಬ ನೀತಿಯ ವಿರುದ್ಧ ವಿವಿಧ ಸಮುದಾಯದವರಿಂದ ಆಕ್ರೋಶ ಮಾತುಗಳು ಸಹ ಕೇಳಿಬರುತ್ತಿವೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.