ಕೆರೆ ಏರಿ ಒಡೆದು ಬೆಳೆ ಸಂಪೂರ್ಣ ನಾಶ


Team Udayavani, Aug 23, 2019, 5:41 PM IST

rn-tdy-2

ಕುದೂರಿನ ವೀರಸಾಗರ ಹೂಸಕೆರೆ ಏರಿ ಒಡೆದು ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ.

ಕುದೂರು: ಬಾರಿ ಮಳೆಯಿಂದ ಕೆರೆಯ ಏರಿ ಒಡೆದು ಸುಮಾರು 80 ಎಕರೆಯಲ್ಲಿ ರೈತರು ಬೆಳೆದ ರಾಗಿ, ಭತ್ತ, ಅಡಕೆ, ತೆಂಗು, ಬಾಳೆ ಹಾಗೂ ತೋಟಗಾರಿಕೆ ಬೆಳೆಗಳು ಸಂಪೂರ್ಣ ನಾಶವಾಗಿರುವ ಘಟನೆ ಕುದೂರು ಹೋಬಳಿಯ ವೀರಸಾಗರದಲ್ಲಿ ನಡೆದಿದೆ.

ವೀರಸಾಗರದ ಹೊಸಕೆರೆ ಸುಮಾರು 25 ಎಕರೆ ಇದ್ದು, ಬಾರಿ ಮಳೆಯಿಂದ ಕೆರೆಯ ಏರಿ ಒಡೆದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. 1935ರಲ್ಲಿ ಕೆರೆಯನ್ನು ಪೂರ್ವಿಕರು ನಿರ್ಮಾಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೆರೆಯು ಸುಮಾರು 25 ಎಕರೆಯಷ್ಟು ವಿಸ್ತಿರ್ಣ ಹೊಂದಿದ್ದು, ಕೆರೆ ಏರಿ ಒಡೆದಿರುವುದನ್ನು ನೋಡುವುದಕ್ಕೆ ಜನಸಾಗರವೇ ಸೇರಿತ್ತು.

ಕೆರೆಯ ಏರಿ ಶಿಥಿಲ: ಕೆರೆ ಏರಿ ಒಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಎ.ಮಂಜುನಾಥ್‌ ಮಾತನಾಡಿ, ವೀರಸಾಗರ ಹೊಸಕೆರೆ ಏರಿ ಶಿಥಿಲವಾಗಿರುವುದರಿಂದ ಕೆರೆ ಏರಿ ಒಡೆದಿದೆ. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಜಿಪಂ ಅಧ್ಯಕ್ಷರು, ತಾಪಂ ಸದಸ್ಯರು, ಕಾರ್ಯದರ್ಶಿಗಳು ಕ್ರಮ ಕೈಗೊಳುವಂತೆ ಸೂಚಿಸಿದ್ದೇವೆ. ಜಿಪಂ ವ್ಯಾಪ್ತಿಗೆ ಸೇರಿದ ಕೆರೆ ಏರಿ ಒಡೆದು ಹೋಗಿರುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕೆರೆ ಉಳಿಸುವುದು ನಮ್ಮ ಕರ್ತವ್ಯ: ಕೆರೆಯನ್ನು ಸುಮಾರು ವರ್ಷಗಳ ಹಿಂದೆ ನಮ್ಮ ಪೂರ್ವಜರು ನಿರ್ಮಾಣ ಮಾಡಿದ್ದಾರೆ. ಈ ಕೆರೆಯನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯ. ಇಂದು ಅತಿಯಾದ ನೀರು ಬಂದಿದ್ದರಿಂದ ಕೆರೆಯ ಏರಿ ಒಡೆದು ಹೋಗಿದೆ. ಒಡೆದಿರುವ ಕೆರೆ ಏರಿಯನ್ನು ಡೀಸಿ ಅನುದಾನ ಅಥವಾ ನರೇಗಾ ಯೋಜನೆ, ಜಿಪಂ ಅನುದಾನ ಬಳಸಿಕೊಂಡು ದುರಸ್ತಿ ಮಾಡಬಹುದು ಎಂಬ ವಿಚಾರವನ್ನು ಜಿಪಂ ಸದಸ್ಯರು, ತಾಪಂ ಸದಸ್ಯರು. ಗ್ರಾಪಂ ಸದಸ್ಯರೊಂದಿಗೆ ಚರ್ಚಿಸಿ, ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇವೆ ಎಂದು ಹೇಳಿದರು.

ಬಿಸ್ಕೂರು ಕೆರೆ ಏರಿ ದುರಸ್ತಿಪಡಿಸಿ: ತಾಲೂಕಿನಲ್ಲಿ ಅನೇಕ ಕೆರೆಗಳು ಶಿಥಿಲವಾಗಿವೆ. ಬಿಸ್ಕೂರು ಕೆರೆಯ ಏರಿಯನ್ನು ಕೊಡಲೇ ದುರಸ್ತಿಪಡಿಸಬೇಕು. ಜಿಪಂ ಸಿಇಒ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ಬೆಳೆ ಹಾನಿಯಾಗಿರುವ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ರಾಮನಗರ ಜಿ.ಪಂ.ಅಧ್ಯಕ್ಷ ನಾಗರಾಜು ಮಾತನಾಡಿ, ಕೆರೆಯ ಏರಿ ಶಿಥಿಲವಾಗಿ ಒಡೆದು ಹೋಗಿದೆ. ಕೆರೆಯನ್ನು ಉಳಿಸಲು ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ತಹಶೀಲ್ದಾರ್‌ ರಮೇಶ್‌, ಸೋಮಶೇಖರ್‌, ಉಪ ತಹಶೀಲ್ದಾರ್‌ ರೆಹಮಾನ್‌, ತಾಪಂ ಸದಸ್ಯ ಎಂ.ಜಿ.ನರಸಿಂಹಮೂರ್ತಿ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.