ರೈಲು ನಿಲ್ದಾಣದಲ್ಲಿ ಶೌಚಾಲಯವಿಲ್ಲದೇ ಪ್ರಯಾಣಿಕರ ಪರದಾಟ


Team Udayavani, Feb 25, 2019, 7:29 AM IST

railway.jpg

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದ ರೈಲು ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ. ಮೂಲ ಸೌಕರ್ಯಗಳ ಕೊರತೆಯಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಸ್ವಚ್ಛತೆ ಇಲ್ಲಿ ಮರಿಚಿಕೆ. ರೈಲು ನಿಲ್ದಾಣದಲ್ಲಿರುವ ಶೌಚಾಲಯ ಇದ್ದೂ ಇಲ್ಲದಂತಾಗಿದೆ. ಕಾರಣ ಮುಚ್ಚಿದ ಬಾಗಿಲು ತೆಗದೇ ಇಲ್ಲ! ದಿನೇ ದಿನೇ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಈ ನಿಲ್ದಾಣವನ್ನು ಆರೇಳು ವರ್ಷಗಳ ಹಿಂದೆ ನಿರ್ಮಿಸಲಾಗಿದೆ.

ಪ್ರಯಾಣಿಕ ಸೌಕರ್ಯಕ್ಕಾಗಿ ಇಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಆದರೆ, ಅದು ಬಾಗಿಲು ಜಡಿದುಕೊಂಡಿದೆ. ಹೀಗಾಗಿ ರಾಮನಗರ ರೈಲು ನಿಲ್ದಾಣದಲ್ಲಿ ಸ್ವಚ್ಛ ಭಾರತ, ಬಯಲು ಮುಕ್ತ ಶೌಚಾಲಯ ಕಾರ್ಯಕ್ರಮಗಳು ಅನ್ವಯಿಸುವುದಿಲ್ಲ. ಹಿರಿಯರು, ಮಹಿಳೆಯರ ಮೂತ್ರ ವಿಸರ್ಜನೆಗೆ ಪರದಾಡುವಂತಾಗಿದೆ. ಪುರುಷರ ನಿಲ್ದಾಣದ ಮೂಲೆಗೆ ಸಾಗಿ ನಿವಾರಿಸಿಕೊಳ್ಳುತ್ತಿದ್ದಾರೆ. 

ಶೌಚಾಲಯ ಮುಚ್ಚಿರುವುದೇಕೆ?: ಶೌಚಾಲಯದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಮುಚ್ಚಲಾಗಿದೆ ಎಂದು ರೈಲು ನಿಲ್ದಾಣದ ಸಿಬ್ಬಂದಿ ಹೇಳಿದ್ದಾರೆ. ಆದರೆ 2-3 ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲವೇ ಎಂದು ಪ್ರಯಾಣಿಕರು ಪ್ರಶ್ನಿಸಿದ್ದಾರೆ. ಶೌಚಾಲಯ ನಿರ್ವಹಣೆಗೆ ಗುತ್ತಿಗೆ ನೀಡಿದ್ದು. ಸದರಿ ಗುತ್ತಿಗೆ ಹೊಂದಿರುವ ವ್ಯಕ್ತಿಯ ನಿರ್ಲಕ್ಷ್ಯ ಕೂಡ ಶೌಚಾಲಯದ ಬಾಗಿಲು ಹಾಕಿರುವುದಕ್ಕೆ ಕಾರಣ ಎಂದು ಗೊತ್ತಾಗಿದೆ. ರೈಲು ನಿಲ್ದಾಣದ ಹೊರಗಡೆ ಇದ್ದ ಶೌಚಾಲಯವನ್ನು ಒಡೆದು ಹಾಕಲಾಗಿದೆ. ಹೀಗಾಗಿ ಪರಿಸ್ಥಿತಿ ಗಂಭೀರವಾಗಿದೆ. 

ಸ್ವಚ್ಛ ಭಾರತ – ಇಲ್ಲಿ ಅನ್ವಿಯಿಸೋಲ್ಲ: ಪ್ಲಾಟ್‌ಪಾರಂಗಳಲ್ಲಿ ಸ್ವಚ್ಛತೆ ಇಲ್ಲದೇ ಸೊರಗುತ್ತಿದೆ. ಪ್ಲಾಟ್‌ಪಾರಂಗಳನ್ನು ದಾಟಲು ಇರುವ ಸ್ಕೈವಾಕ್‌ ಮೇಲೆ ನಾಯಿಗಳು ಹೇಸಿಗೆ ಮಾಡುತ್ತಿವೆ. ಪ್ರಯಾಣಿಕರು ಸ್ಕೈವಾಕ್‌ ಮೇಲೆ ಓಡಾಡುವಾಗ ಮೂಗು ಮುಚ್ಚಿಕೊಂಡು ಸಂಚರಿಸುವ ಪರಿಸ್ಥಿತಿ ಇದೆ. ರಾಮನಗರದ ಬೀದಿ ಬೀದಿಗಳಲ್ಲಿ ಸುತ್ತಾಡುವ ನಾಯಿಗಳು ರೈಲು ನಿಲ್ದಾಣದಲ್ಲೂ ಸ್ವಚ್ಛಂದವಾಗಿ ಸಂಚಾರ ಮಾಡುತ್ತವೆ. ನಗರವಾಸಿಗಳಿಗೆ ಆಗುತ್ತಿರುವ ತೊಂದರೆಯೇ ರೈಲು ಪ್ರಯಾಣಿಕರಿಗೂ ಆಗುತ್ತಿದೆ.

ರೈಲು ನಿಲ್ದಾಣದ ಅಂದ ಹೆಚ್ಚಿಸಲು ನಿಲ್ದಾಣದ ಮುಂಭಾಗ ವಿಶಾಲವಾದ ಉದ್ಯಾನವನ ನಿರ್ಮಿಸಲಾಗಿದೆ. ಆದರೆ, ನಿರ್ವಹಣೆ ಇಲ್ಲದೇ ಹಾಳಾಗುತ್ತಿದೆ. ರಾತ್ರಿ ವೇಳೆ ಪುಂಡರಿಗೆ ಈ ಉದ್ಯಾನವನ ತಕ್ಕ ತಾಣವಾಗುತ್ತಿದೆ. ಹೀಗಾಗಿ ಅಧಿಕಾರಿಗಳು ರೈಲು ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯನ್ನು ನೇಮಿಸಿ ರೈಲ್ವೆ ಆಸ್ತಿಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ. 

ಭದ್ರತೆಯೂ ಇಲ್ಲ: ದಿನನಿತ್ಯ ರಾಮನಗರ ನಿಲ್ದಾಣವನ್ನು ಸಾವಿರಾರು ಮಂದಿ ಅವಲಂಭಿಸಿದ್ದರೂ ಸಹ ಇಲ್ಲೊಂದು ಪೊಲೀಸ್‌ ಔಟ್‌ ಪೋಸ್ಟ್‌ ಇಲ್ಲ. ಪ್ರಯಾಣಿಕರ ಭದ್ರತೆಗೆ ರೈಲು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇದು ಕೈಗನ್ನಡಿ. ಪಾರ್ಕಿಂಗ್‌ ವ್ಯವಸ್ಥೆ ಇದೆಯಾದರೂ ಅದು ಸಮರ್ಪಕವಾಗಿಲ್ಲ. ಸುಸಜ್ಜಿತ, ಅಧುನಿಕ ಪಾರ್ಕಿಂಗ್‌ ವ್ಯವಸ್ಥೆಗೆ ಪ್ರಯಾಣಿಕರು ಪದೇ ಪದೇ ಒತ್ತಾಯಿಸಿದರು ಏನೂ ಉಪಯೋಗವಾಗಿಲ್ಲ. 

ಸಿ ದರ್ಜೆ ನಿಲ್ದಾಣ: ದಿನ ನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸಿದರು ಜಿಲ್ಲಾ ಕೇಂದ್ರ ರಾಮನಗರದ ರೈಲು ನಿಲ್ದಾಣ ಸಿ ದರ್ಜೆಗೆ ಸೇರಿದೆ. ಎ ಮತ್ತು ಬಿ ದರ್ಜೆ ರೈಲು ನಿಲ್ದಾಣಗಳಿಗೆ ಸಿಗುವ ಸವಲತ್ತುಗಳು ಈ ರೈಲು ನಿಲ್ದಾಣಕ್ಕೆ ಅನ್ವಯಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಂಗೇರಿ ನಿಲ್ದಾಣ ರಾಮನಗರ ನಿಲ್ದಾಣಕ್ಕಿಂತ ಹೆಚ್ಚು ವಹಿವಾಟು, ಹೆಚ್ಚು ಪ್ರಯಾಣಿಕರನ್ನು ಹೊಂದಿದೆ. ಹೀಗಾಗಿ ಅಲ್ಲಿನ ಸವಲತ್ತುಗಳು ಆಧುನಿಕವಾಗಿದೆ ಎಂದು ಉದಾಹರಣೆ ನೀಡಿದ್ದಾರೆ. 

ಎಲ್ಲಾ ರೈಲುಗಳು ನಿಲ್ಲುವುದಿಲ್ಲ: ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ರೈಲುಗಳು ನಿಲ್ಲುವುದಿಲ್ಲ. ದೂರ ಪ್ರಯಾಣಿಸುವ ಅನೇಕ ರೈಲುಗಳು ಇಲ್ಲಿ ನಿಲುಗಡೆ ಕೊಡುತ್ತಿಲ್ಲ. ಮಂಡ್ಯ ಮತ್ತು ಕೆಂಗೇರಿಯಲ್ಲಿ ನಿಲ್ಲುವ ಈ ರೈಲುಗಳು ರಾಮನಗರದಲ್ಲೂ ನಿಂತರೆ ಈ ನಿಲ್ದಾಣದ ವಹಿವಾಟು ಕೂಡ ಹೆಚ್ಚಳವಾಗಲಿದೆ. ಆದರೆ, ಇದ್ಯಾವುದನ್ನು ಮಾಡದೆ ಸಿ.ದರ್ಜೆ ನಿಲ್ದಾಣ ಎಂದು ಅಧಿಕಾರಿಗಳು ನಿರ್ಲಕ್ಷಿéಸುವುದು ಸರಿಯಲ್ಲ ಎಂಬುದು ಇಲ್ಲಿನ ನಾಗರಿಕರ ಅಭಿಪ್ರಾಯ.

* ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.