ಕುದೂರು ಹೋಬಳಿಯಾದ್ಯಂತ ರಾರಾಜಿಸಿದ ದೇಶಪ್ರೇಮ


Team Udayavani, Aug 16, 2017, 4:02 PM IST

21_13.jpg

ಕುದೂರು: ಹೋಬಳಿಯಾದ್ಯಂತ 71ನೇ ಸ್ವಾತಂತ್ರ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಿದರು. ದ್ವಿಚಕ್ರ ವಾಹನ, ಆಟೋ, ಬಸ್‌, ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳ ಮೇಲೆ ಎಲ್ಲಿ ನೋಡಿದರಲ್ಲಿ ತ್ರಿವರ್ಣ ಧ್ವಜ ಹಾರಾಡಿ ರಾಷ್ಟ್ರೀಯತೆಯ ಮೆರಗಿನ ಚಿತ್ತಾರ ಮೂಡಿಸಿದರೆ ಎಲ್ಲೆಲ್ಲಿಯೂ ದೇಶ ಭಕ್ತಿ ಚಿಮ್ಮಿಸುವ ಗೀತೆಗಳು ಮೊಳಗಿದವು.

ಗ್ರಾಮದ ರಾಮಲೀಲಾ ಕ್ರೀಡಾಂಗಣದಲ್ಲಿ ಗ್ರಾಪಂ ವತಿಯಿಂದ ಏರ್ಪಡಿಸಿದ್ದ  ಸ್ವಾಂತಂತ್ರ್ಯದಿನದ ಸಮಾರಂಭದಲ್ಲಿ ಭಾಗವಹಿಸಿದ್ದ ಜಿಪಂ ಸದಸ್ಯ ಎ.ಮಂಜು ಧ್ವಜಾರೋಹಣ ನೇರವೇರಿಸಿ ಗೌರವ ವಂದನೆ ಸ್ವೀಕರಿಸಿ ಬಳಿಕ ಮಾತನಾಡಿದರು. ಸ್ವಾತಂತ್ರಕ್ಕಾಗಿ ದುಡಿವರನ್ನು ಮತ್ತು ಮಡಿದವರನ್ನು ಗೌರವಯುತವಾಗಿ ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಮಹಾತ್ಮ ಗಾಂಧಿಜೀ, ಭಗತ್‌ಸಿಂಗ್‌, ಡಾ.ಬಿ.ಆರ್‌.ಅಂಬೇಡ್ಕರ್‌ ಸೇರಿದಂತೆ ಸಹಸ್ರಾರು ಐತಿಹಾಸಿಕ ಪುರುಷರ ತ್ಯಾಗಮಯವಾದ ಹೋರಾಟದಿಂದ ನಮಗೆ ಸ್ವಾತಂತ್ರ ಲಭಿಸಿದೆ. ಅಂಥ ಮಹಾನ್‌ ತ್ಯಾಗಿಗಳು ನೀಡಿದ ಸ್ವಾಂತಂತ್ರ ರಕ್ಷಿಸುತ್ತಾ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನೆಡೆಸುವ ಮಹತ್ವದ ಕರ್ತವ್ಯ ನಾವು ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಗ್ರಾಪಂ ಅಧ್ಯಕ್ಷ ಕೆ.ಎಂ.ರಾಘವೇಂದ್ರ ಮಾತನಾಡಿ, ಪ್ರತಿಯೊಬ್ಬ ಯುವಕರು ರಾಷ್ಟ್ರಪ್ರೇಮವನ್ನು ರಕ್ತಗತವಾಗಿ ಬೆಳೆಸಿಕೊಳ್ಳುವ ಸ್ವಾಭಿಮಾನಿಗಳಾಗಬೇಕು ಎಂದರು. ಮುಖ್ಯಅತಿಥಿಯಾಗಿ ಆಗಮಿಸಿದ್ದ ಗ್ರಾಪಂ ಮಾಜಿ ಅಧ್ಯಕ್ಷ ಕೆ.ಬಿ.ಬಾಲರಾಜು, ಸ್ವಾಂತಂತ್ರ ದಿನಾಚರಣೆ ದೇಶ ಪ್ರೇಮ, ಭಕ್ತಿಗಳನ್ನು ಪ್ರದರ್ಶಿಸುವ ವಾರ್ಷಿಕ ಆಚರಣೆಯಾಗಬಾರದು. ಅದು ನಮ್ಮ ಮನಸ್ಸಿನಲ್ಲಿ ಬದುಕಿನುದ್ದಕ್ಕೂ ಜಾಗೃತವಾಗಿರಬೇಕು ಎಂದು ತಿಳಿಸಿದರು.

ಸನ್ಮಾನ: ಈ ಸಂದರ್ಭದಲ್ಲಿ ಪೊಲೀಸ್‌ ಇಲಾಖೆ ಎಎಸ್‌ಐ ನಾರಾಯಣಪ್ಪ, ರೇಷ್ಮೆ ಇಲಾಖೆ ಶಿವಣ್ಣ, ಅಂಗನವಾಡಿ ಶಿಕ್ಷಕಿ ಹೇಮಲತಾ, ವಿದ್ಯುತ್‌ ಇಲಾಖೆ ಶಶಿಧರ್‌, ಶಿಕ್ಷಣ ಇಲಾಖೆ ನರಸಿಂಹರಾಜು, ಶಿವಣ್ಣ, ಬಸವರಾಜು, ಗ್ರಾಪಂ ಕನ್ನಮ್ಮ, ಹವ್ಯಾಸಿ ಕಲಾವಿದ ರಾಜಶೇಖರ್‌, ಮಾಜಿ ಸೈನಿಕ ಯತಿರಾಜು, ಕೃಷಿ ಇಲಾಖೆ ನಾಗಭೂಷಣ್‌, ಬಿಎಸ್‌ಎನ್‌ಎಲ್‌ ಚಿದಾನಂದ ಅವರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು.

ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪೇರೆಡ್‌, ದೇಶ ಭಕ್ತಿ ಗೀತೆಗಳಿಗೆ ಮಕ್ಕಳಿಂದ ನೃತ್ಯ, ರೂಪಕ ಜರುಗಿತು. ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆ ಮಕ್ಕಳಿಂದ 101 ಅಡಿ ಉದ್ದದ್ದ ಭಾವುಟ ಎಲ್ಲರ ಗಮನ ಸೆಳೆಯಿತು. ಗುರುಕುಲ ವಿದ್ಯಾಮಂದಿರ, ಮಹಾಂತೇಶ್ವರ ಶಾಲಾ ಹಾಗೂ ಕೋಟೆಶಾಲೆ, ಎಸ್‌ಎಂಎಸ್‌, ವಿವೇಕಾನಂದ ಸರ್ಕಾರಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ತಾಪಂ ಸದಸ್ಯೆ ದಿವ್ಯಾರಾಣಿ, ಗ್ರಾಪಂ ಉಪಾಧ್ಯಕ್ಷೆ ಲಲಿತಮ್ಮ, ಸದಸ್ಯರಾದ ಯತೀಶ್‌, ಹೋನ್ನರಾಜು, ಶಂಕರ್‌, ಬಾಲಕೃಷ್ಣ, ಮಹೇಶ್‌, ಮಂಗಳಮ್ಮ ಈರಮಯ್ಯ, ಮುಖ್ಯಶಿಕ್ಷಕ ಎಂ.ಎಸ್‌.ನಾಗರಾಜು, ಪಿಡಿಒ ವೆಂಕಟೇಶ್‌, ಕುತ್ತಿನಗೆರೆ ಗಂಗರಾಜು, ಪದ್ಮನಾಭ್‌, ಕಣ್ಣನೂರು ಜಯಶಂಕರ್‌, ರಮೇಶ್‌, ಜಯಚಂದ್ರಬಾಬು ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.