ಮಾರ್ಚ್‌ನಿಂದ ಖರೀದಿ ಹಾಲಿನ ದರ 1 ರೂ. ಹೆಚ್ಚಳ


Team Udayavani, Feb 5, 2019, 7:10 AM IST

mar-nina.jpg

ಚನ್ನಪಟ್ಟಣ: ಮುಂದಿನ ತಿಂಗಳಿನಿಂದ ಲೀಟರ್‌ ಹಾಲಿನ 1 ರೂ. ಹೆಚ್ಚಿಗೆ ನೀಡಲಾಗುವುದು. ತಾಲೂಕಿನ ರೈತರು ಹೈನೋದ್ಯಮದಲ್ಲಿ ಹೆಚ್ಚು ತೊಡಗಿಸಿಕೊಂಡು, ಡೇರಿಗೆ ಗುಣಮಟ್ಟದ ಹಾಲು ಪೂರೈಸುವಂತೆ ಬಮೂಲ್‌ ನಿರ್ದೇಶಕ ಎಸ್‌.ಲಿಂಗೇಶ್‌ಕುಮಾರ್‌ ತಿಳಿಸಿದರು.

ತಾಲೂಕಿನ ಕನ್ನಿದೊಡ್ಡಿ ಗ್ರಾಮದಲ್ಲಿ 15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ತಾನು ಮೊದಲು ನಿರ್ದೇಶಕನಾಗಿದ್ದಾಗ ತಾಲೂಕಿನಲ್ಲಿ 68 ಡೇರಿಗಳಿದ್ದವು.

ಈಗ 161 ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ 85ಕ್ಕೂ ಹೆಚ್ಚು ಸಂಘಗಳು ಸ್ವಂತ ಕಟ್ಟಡ ಹೊಂದಿವೆ. ಹೈನೋದ್ಯಮ ರೈತರನ್ನು ಕೈಹಿಡಿದಿದ್ದು, ಬಮೂಲ್‌ನಿಂದ ತಾಲೂಕಿನ ರೈತರಿಗೆ ತಿಂಗಳಿಗೆ 15 ಕೋಟಿ ರೂ.ಗೂ ಹೆಚ್ಚು ಹಣ ಬಟವಾಡೆಯಾಗುತ್ತಿದೆ ಎಂದು ಹೇಳಿದರು.

ವಿಮೆ ಹಣ: ಸ್ವಂತ ಕಟ್ಟಡಕ್ಕಾಗಿ ಬಮೂಲ್‌ ಮತ್ತು ಇತರೆ ಮೂಲಗಳಿಂದ 8.5 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. ರಾಸುಗಳ ಮೇವಿಗಾಗಿ ಮತ್ತು ಸದಸ್ಯರ ಜೀವ ವಿಮೆಗಾಗಿ ಬಮೂಲ್‌ ಶೇ.75 ಭಾಗದ ಹಣವನ್ನು ಭರಿಸುತ್ತಿದೆ. ಮೃತಪಟ್ಟ ಸಂಘದ ಸದಸ್ಯರ ಕುಟುಂಬಕ್ಕೆ 2 ಲಕ್ಷ ರೂ. ವಿಮಾ ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದರು.

ಬೇಡಿಕೆ ಹೆಚ್ಚಳ: ರಾಜ್ಯದಲ್ಲಿ 13 ಹಾಲು ಒಕ್ಕೂಟಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲಾ ಒಕ್ಕೂಟಗಳಿಗಿಂತ ಹೆಚ್ಚಾಗಿ ಬಮೂಲ್‌ 1 ಲೀಟರ್‌ ಹಾಲಿಗೆ 24 ರೂ. ಹಾಗೂ ಸರ್ಕಾರದ ಪ್ರೋತ್ಸಾಹ ಧನ ಸೇರಿ ಒಟ್ಟು 29 ರೂ. ಕೊಡಲಾಗುತ್ತಿದೆ. ಪಕ್ಕದ ಮಂಡ್ಯದಲ್ಲಿ 1 ಲೀಟರ್‌ ಹಾಲಿಗೆ 19 ರೂ. ಕೊಡುತ್ತಿದೆ. ಕನಕಪುರದ ಬಳಿಯ ಶಿವನಹಳ್ಳಿಯಲ್ಲಿ ಮೆಗಾ ಡೇರಿ ಪ್ರಾರಂಭಗೊಂಡು ಹಾಲಿನ ಪೌಡರ್‌, ಇತರೆ ಉತ್ಪನ್ನ ತಯಾರಿ ಮಾಡುತ್ತಿರುವುದರಿಂದ ನಮ್ಮ ಹಾಲಿಗೆ ಹೆಚ್ಚಿನ ಬೇಡಿಕೆ ಬಂದಿದೆ ಎಂದು ಹೇಳಿದರು.

ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ: ಶಿಬಿರದ ಉಪವ್ಯವಸ್ಥಾಪಕ ಡಾ.ಕೆ.ಸಿ.ಶ್ರೀಧರ್‌ ಮಾತನಾಡಿ, ರಾಸುಗಳಿಗೆ ಆರೋಗ್ಯ ಸಮಸ್ಯೆ ಎದುರಾದಾಗಿ ಚಿಕಿತ್ಸೆ ಕೊಡಿಸಿದಾಗ ಒಂದೆರಡು ದಿನ ಡೇರಿಗೆ ಹಾಲು ಹಾಕಬೇಡಿ. ಮನೆಯಲ್ಲೇ ಗಿಡಮೂಲಿಕೆ ಔಷಧಿ ನೀಡಿ ಗುಣಪಡಿಸಿದರೆ ಉತ್ತಮ. ಬಮೂಲ್‌ನಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ರೈತರು ಗುಣಮಟ್ಟದ ಹಾಲು ಪೂರೈಕೆ ಮಾಡಿ ಆರ್ಥಿಕವಾಗಿ ಸಬಲರಾಗಿ ಗ್ರಾಹಕರ ನಂಬಿಕೆ ಉಳಿಸಿಕೊಳ್ಳಬೇಕು ಎಂದರು.

ಸನ್ಮಾನ: ಬಮೂಲ್‌ ನಿರ್ದೇಶಕ ಎಸ್‌.ಲಿಂಗೇಶ್‌ಕುಮಾರ್‌, ಉಪ ವ್ಯವಸ್ಥಾಪಕ ಡಾ.ಕೆ.ಸಿ.ಶ್ರೀಧರ್‌ ಅವರನ್ನು ಸನ್ಮಾನಿಸಲಾಯಿತು. ಕನ್ನಿದೊಡ್ಡಿ ಡೇರಿ ಅಧ್ಯಕ್ಷ ವಿಷಕಂಠಯ್ಯ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಪ್ರಸನ್ನಕುಮಾರ್‌, ವಿಸ್ತರಣಾಧಿಕಾರಿ ರಾಜು, ಪರ್ಹಾ ಜಬೀನ್‌, ಕನ್ನಿದೊಡ್ಡಿ ಎಂಪಿಸಿಎಸ್‌ ಉಪಾಧ್ಯಕ್ಷ ನಾಗರಾಜು, ನಿರ್ದೇಶಕರಾದ ಚಿಕ್ಕತಮ್ಮಯ್ಯ, ನಂಜಯ್ಯ, ಕಾಡಯ್ಯ, ವಿಷಕಂಠಯ್ಯ, ಗುಣಮ್ಮ, ಜಯಮ್ಮ, ಪುಟ್ಟಸ್ವಾಮಿ ಉಪಸ್ಥಿತರಿದ್ದರು. ಹೊಂಗನೂರು ಸಂಘದ ಕಾರ್ಯದರ್ಶಿ ಪುಟ್ಟರಾಜು ಸ್ವಾಗತಿಸಿದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.