ಯೋಧರ ತ್ಯಾಗ, ಬಲಿದಾನದಿಂದ ದೇಶದಲ್ಲಿ ನೆಮ್ಮದಿ


Team Udayavani, Feb 22, 2019, 7:25 AM IST

yodhara.jpg

ಕನಕಪುರ: ಸೈನಿಕರು ಚಳಿ, ಮಳೆ, ಗಾಳಿ, ಬಿಸಿಲನ್ನು ಲೆಕ್ಕಿಸದೇ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ದೇಶವನ್ನು ಸಂರಕ್ಷಣೆ ಮಾಡುತ್ತಿದ್ದಾರೆ. ಯೋಧರ ತ್ಯಾಗ, ಬಲಿದಾನದಿಂದ ದೇಶದಲ್ಲಿ ನೆಮ್ಮದಿ ಇದೆ. ಇವರ ಕುಟುಂಬದ ಜೊತೆ ನಾವಿರಬೇಕು ಎಂದು ಶಿಕ್ಷಕಿ ನಾಗರತ್ನ ತಿಳಿಸಿದರು.

ತಾಲೂಕಿನ ಹಾರೋಹಳ್ಳಿಯ ಬಸ್‌ ನಿಲ್ದಾಣದ ವೃತ್ತದ ಬಳಿ ಶ್ರೀನಿಜಶರಣ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಮತ್ತು ಹಾರೋಹಳ್ಳಿ ಗಂಗಾ ಮತಸ್ಥ ಸಂಘ, ಹಾರೋಹಳ್ಳಿ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ನಡೆದ ಹುತಾತ್ಮ ವೀರಯೋಧರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

ಯೋಧರ ಕುಟುಂಬಕ್ಕೆ ನೆರಳಾಗಬೇಕು: ನಮ್ಮ ದೇಶಕ್ಕೆ ಅಪಾಯವನ್ನು ತಂದೊಡ್ಡುತ್ತಿರುವ ನಮ್ಮ ಶತುೃಗಳ ವಿರುದ್ಧ ಹಗಲಿರುಳೆನ್ನದೇ ಹೋರಾಡಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವ ಯೋಧರ ಕುಟುಂಬಗಳಿಗೆ ನಾವು ನೆರಳಾಗಿ ನಿಲ್ಲಬೇಕು. ಇಂದಿನ ದಿನಗಳಲ್ಲಿ ನಮ್ಮ ಮಕ್ಕಳಿಗೆ ದೇಶಪ್ರೇಮದ ಶಿಕ್ಷಣವನ್ನು ನೀಡುವ ಅನಿವಾರ್ಯವಿದೆ. ದೇಶದ ಬಗ್ಗೆ ಗೌರವವನ್ನು ನೀಡುವ ಶಿಕ್ಷಣ ಸಿಗುವಂತಾದಾಗ ಮಾತ್ರ ಮುಂದಿನ ಪೀಳಿಗೆ ದೇಶದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸೈನಿಕರನ್ನು ಮೊದಲು ಗೌರವಿಸಿ: ಬಾಪು ಶಾಲೆಯ ಮುಖ್ಯ ಶಿಕ್ಷಕ ಮಹಮೊದ್‌ ಯಾಕೂಬ್‌ಪಾಶ ಮಾತನಾಡಿ, ನಾವು ದೇಶದಲ್ಲಿ ಸ್ವತಂತ್ರವಾಗಿ ಇರಲು ಹೋರಾಡುತ್ತಿರುವ ನಮ್ಮ ಸೈನಿಕರಿಗೆ ಮೊದಲು ಗೌರವವನ್ನು ಕೊಡಬೇಕು. ಆಗ ನಮ್ಮ ಜೀವನ ಸಾರ್ಥಕವಾಗುತ್ತದೆ. ದೇಶಕ್ಕಾಗಿ ವೀರ ಮರಣವನ್ನಪ್ಪಿದ ಸೇನಾನಿಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಹೇಳಿದರು.

ಯೋಧರ ಕುಟುಂಬಕ್ಕೆ ಬೆಂಬಲ: ಹಾರೋಹಳ್ಳಿ ಅರುಣಾಚಲೇಶ್ವರ ದೇವಾಲಯದ ಧರ್ಮದರ್ಶಿ ಎಂ.ಮಲ್ಲಪ್ಪ ಮಾತನಾಡಿ, ನಮ್ಮ ಸೈನಿಕರನ್ನು ಹತ್ಯೆ ಮಾಡಿದ ಪಾಪಿ ಪಾಕಿಸ್ಥಾನದವರು ಎಂದಿಗೂ ನಮ್ಮ ಶತುೃಗಳು. ಹತ್ಯಾಕಾಂಡದಲ್ಲಿ ಮಡಿದ ವೀರ ಯೋಧರ ಕುಟುಂಬದ ಹಿಂದೆ ನಾವಿದ್ದೇವೆ. ಅವರಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ ಎಂದು ಹೇಳಿದರು.

ಉಗ್ರವಾದ ಅಳಿಯಲಿ: ಹಾರೋಹಳ್ಳಿ ನಾಗರಿಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜ್ಞಾನೇಶ್‌ ಮಾತನಾಡಿ, ಪುಲ್ವಾಮ ಜಿಲ್ಲೆಯ ಅವಂತಿಪೊರ ದಾಳಿಯಿಂದ ನಮ್ಮ ನೆತ್ತರು ಕುದಿಯುತ್ತಿದ್ದು, ವೀರ ಯೋಧರ ಜೀವ ಕಳೆದ ಆ ರಣಹೇಡಿಗಳ ಕೃತ್ಯವು ಅಕ್ಷಮ್ಯವಾಗಿದೆ. ಇಂತಹ ಅಮಾನವೀಯ ಮತ್ತು ಹೇಯ ಕೃತ್ಯವನ್ನು ಖಂಡಿಸುತ್ತಿದ್ದು ಉಗ್ರವಾದ ಅಳಿಯಬೇಕು ಎಂದು ಹೇಳಿದರು.

ಮುಖಂಡರಾದ ಚಂದ್ರು, ಮಹಮದ್‌ಏಜಾಸ್‌, ಮೋಹನಹೊಳ್ಳ, ಬಾಲಾಜಿಸಿಂಗ್‌, ನಾಗರಾಜು, ದೊಡ್ಡಣ್ಣ, ಹಾರೋಹಳ್ಳಿಯ ಎಲ್ಲಾ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿ ಮೇಣದಬತ್ತಿಯನ್ನು ಹಚ್ಚಿ ಹೂ ಹಾಕಿ ಸಂತಾಪವನ್ನು ಸೂಚಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.