ಕುರುಬ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ
Team Udayavani, Aug 25, 2020, 2:47 PM IST
ಕನಕಪುರ: ಕುರುಬ ಸಮುದಾಯದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಸಂಘದ ನೂತನ ಅಧ್ಯಕ್ಷ ಎಂ.ಎಸ್.ಚಂದ್ರಪ್ಪ ತಿಳಿಸಿದರು. ತಾಲೂಕಿನ ಸಾತನೂರು ಹೋಬಳಿ ದೊಡ್ಡಾಆಲಹಳ್ಳಿ ಗ್ರಾಮದ ಗೆಜ್ಜೆ ಕಲ್ಲು ಬೀರೇಶ್ವರ ದೇವಾಲಯದಲ್ಲಿ ನಡೆದ ಸಂಘದ ಪದಾಧಿಕಾರಿಗಳ ಆಯ್ಕೆಯಲ್ಲಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಸಂಘದ ಹಿರಿಯ ಮುಖಂಡರು ತನ್ನ ಮೇಲೆ ನಂಬಿಕೆ ಇಟ್ಟು ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕುರುಬ ಸಮುದಾಯವನ್ನು ಸಮಾಜದಲ್ಲಿ ಮೇಲೆತ್ತಲು ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು ಸಹಕರಿಸಬೇಕೆಂದರು. ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಗೌರವ ಅಧ್ಯಕ್ಷ ಸಂದರೇಶ್ ಪೂಜಾರಿ, ಕುರುಬರ ಸಂಘದ ಅಭಿವೃದ್ಧಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಹಿರಿಯ ಮುಖಂಡರು, ಸದಸ್ಯರ ಸಲಹೆ ಪಡೆದು ಸಮುದಾಯದ ಕ್ಷೇಮಾಭಿವೃದ್ಧಿಗೆ ಶ್ರಮಿ ಸುತ್ತೇನೆಂದರು. ಸಂಘದ ಹಿರಿಯ ಮುಖಂಡರಾದ ಮಹದೇವಯ್ಯ, ಮುನಿಹುಚ್ಚೇಗೌಡ, ರವಿ, ನಟರಾಜ್, ಬೋಜೇಗೌಡ, ಚಿಕ್ಕಣ್ಣ, ಪ್ರದೆಶ ಕುರುಬರ ಸಂಘದ ನಿರ್ದೇಶಕರಾದ ಚಿಕ್ಕಮ್ಮ, ಕೃಷ್ಣಕಾಂತ್, ಸತೀಶ್ ಮತ್ತಿತರರಿದ್ದರು.
ಪದಾಧಿಕಾರಿಗಳು: ಅನೇಕ ಸಂಘದ ಮುಖಂಡರ ಸಮ್ಮುಖದಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಸ್. ಚಂದ್ರಪ್ಪ, ಗೌರವ ಅಧ್ಯಕ್ಷ ಸುಂದರೇಶ್ಪೂಜಾರಿ, ಕಾರ್ಯಾಧ್ಯಕ್ಷ ಆನಂದ್, ಪ್ರಧಾನ ಕಾರ್ಯದರ್ಶಿ ಮಹೇಶ್, ಖಜಾಂಚಿಯಾಗಿ ಡಿ.ರುದ್ರೇಶ್ ಅವರನ್ನು ಆಯ್ಕೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್ಡಿಕೆ ಸ್ಪರ್ಧೆ ಸುಳಿವು
Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ ಕಬ್ಬಿಣದ ಕಡಲೆ
Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್