ಪಟ್ಟಣದ ಕೊಳಚೆ ನೀರು ಶೆಟ್ಟಿಹಳ್ಳಿ ಕೆರೆಗ
Team Udayavani, Jul 31, 2018, 4:40 PM IST
ಚನ್ನಪಟ್ಟಣ: ಅದು ವಿಶಾಲವಾದ ಕೆರೆ, ಪಟ್ಟಣದ ಹೃದಯಭಾಗದಲ್ಲಿ ಸುಮಾರು 60 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ದಶಕಗಳ ಹಿಂದೆ ಪಟ್ಟಣ ವ್ಯಾಪ್ತಿಯ ನಾಗರಿಕರ ನೀರಿನ ದಾಹ ತಣಿಸಿದ್ದ ಈ ಕೆರೆಯ ಇಂದಿನ ಸ್ಥಿತಿ ಹೇಳತೀರದಾಗಿದೆ.
ಹೌದು, ಇದು ಪಟ್ಟಣದ ಶೆಟ್ಟಿಹಳ್ಳಿ ಕೆರೆಯ ದಯನೀಯ ಸ್ಥಿತಿ. ತನ್ನ ವ್ಯಾಪ್ತಿಯನ್ನು ದಿನೇ ದಿನೇ ಕಡಿಮೆ ಮಾಡಿಕೊಳ್ಳುತ್ತಾ, ನೀರಿನ ನೆಲೆಯೇ ಕಾಣದಂತೆ ತನ್ನೊಡಲಲ್ಲಿ ಜೊಂಡು ಬೆಳೆಸಿಕೊಂಡು, ನಗರದ ಕೊಳಚೆ ನೀರನ್ನೆಲ್ಲಾ ತನ್ನ ಗರ್ಭದಲ್ಲಿರಿಸಿಕೊಂಡು ನಲುಗುತ್ತಿರುವ ಈ ಕೆರೆ ಇಂದು “ಕೆರೆಯ ಥರ, ಆದರೆ ಕೆರೆ ಅಲ್ಲ’ ಎನ್ನುವ ಸ್ಥಿತಿಯಲ್ಲಿದೆ.
ಅನೈತಿಕ ಚಟುವಟಿಕೆಗಳ ತಾಣ: ಕೆರೆಯ ಆಸುಪಾಸಿನ ನಿವಾಸಿಗಳ ದುರ್ದೈವವೋ ಏನೋ, ಕೆರೆಯ ಪಕ್ಕದಲ್ಲಿ ವಾಸವಾಗಿರುವ ನಿವಾಸಿಗಳು ಇಂದು ದಿನನಿತ್ಯ ಚರಂಡಿ ನೀರಿನ ದುರ್ವಾಸನೆಯಿಂದಾಗಿ ನೆಮ್ಮದಿಯ ಜೀವನದಿಂದ
ವಂಚಿತರಾಗಿದ್ದಾರೆ. ಕೆರೆಯ ಸುತ್ತಲೂ ಇರುವ ಪೊದೆ ಕಳ್ಳಕಾಕರ, ಅನೈತಿಕ ಚಟುವಟಿಕೆಗಳಿಗೆ ಪ್ರಶಸ್ತ ತಾಣವಾಗಿ, ವಿಷಜಂತುಗಳ ವಾಸಸ್ಥಾನವಾಗಿ ಮಾರ್ಪಾಡಾಗಿರುವುದರಿಂದ ಇಲ್ಲಿನ ನಿವಾಸಿಗಳಿಗೆ ನೆಮ್ಮದಿಯ ಜೀವನ ಮರೀಚಿಕೆಯಾಗಿದೆ.
ನಗರ ಸಭೆಗೆ ಹಿಡಿಶಾಪ: ಒಂದಾನೊಂದು ಕಾಲದಲ್ಲಿ ಜನರ ನೀರಿನ ದಾಹ ತಣಿಸುತ್ತಾ, ತನ್ನ ನೆಲೆಯನ್ನೂ ಸುಸ್ಥಿತಿಯಲ್ಲಿಟ್ಟುಕೊಂಡಿದ್ದ ಶೆಟ್ಟಿಹಳ್ಳಿ ಕೆರೆಯನ್ನು ಇಂದು ಯಾಕಪ್ಪಾ ಈ ಕೆರೆ ಇಲ್ಲಿದೆ, ಇದನ್ನು ಮುಚ್ಚಬಾರದೆ ಎಂದು ಇಲ್ಲಿನ ನಿವಾಸಿಗಳು ಶಪಿಸುತ್ತಾ ದಿನದೂಡುವಂತಾಗಿದೆ.
ನಗರಸಭೆಯೇ ಕಾರಣ: ಎಲ್ಲಾ ಕೆರೆಗಳಂತೆಯೇ ಮಳೆಗಾಲದಲ್ಲಿ ನೀರು ತುಂಬಿಸಿಕೊಂಡು ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ನೀರುಣಿಸುತ್ತಿದ್ದ ಶೆಟ್ಟಿಹಳ್ಳಿ ಕೆರೆಗೆ ಈ ಸ್ಥಿತಿ ಬರೋಕೆ ಕಾರಣ ನಗರಸಭೆ. ಪಟ್ಟಣದ ಕೊಳಚೆ ನೀರನ್ನೆಲ್ಲಾ ಶೆಟ್ಟಿಹಳ್ಳಿ ಕೆರೆಗೆ ಹರಿಸಿದ ಪರಿಣಾಮವೇ ಇಂದು ಕೆರೆ ಗಬ್ಬೆದ್ದು ನಾರುತ್ತಾ, ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದೆ.
ಚರಂಡಿ ನೀರು ಕೆರೆಗೆ : ಒಳಚರಂಡಿ ನೀರು ಅಥವಾ ನಗರದ ಕೊಳಚೆ ನೀರನ್ನು ಶುದ್ಧೀಕರಿಸಿ ನಂತರ ಆ ನೀರನ್ನು ಕೆರೆಗೆ ಹರಿಸಬೇಕೆಂಬ ಪರಿಸರ ಇಲಾಖೆಯ ನಿಯಮಕ್ಕೆ ಇಲ್ಲಿ ಕಿಂಚಿತ್ತೂ ಬೆಲೆ ಸಿಕ್ಕಿಲ್ಲ. ಚರಂಡಿಯಲ್ಲಿ ಸಾಗಿ ಬಂದ ನೀರು ಸೀದಾ ಶೆಟ್ಟಿಹಳ್ಳಿ ಕೆರೆಯ ಗರ್ಭ ಸೇರಿಕೊಳ್ಳುವಂತೆ ಮಾಡಿ ತನ್ನ ಕೆಲಸ ಮುಗಿಯಿತೆಂದು ನಗರಸಭೆ ಕೈ ತೊಳೆದುಕೊಂಡಿದೆ. ನಗರ ಬೆಳೆದಂತೆಲ್ಲಾ ಈ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಾಗಿ ಇಂದು ಕೆರೆಯ ತುಂಬ ಕೊಳಚೆ, ಕಲುಷಿತ ನೀರು ತುಂಬಿಕೊಂಡು ಕೆರೆಯ ಹತ್ತಿರಕ್ಕೂ ಯಾರೊಬ್ಬರೂ ಸುಳಿಯದಂತಾಗಿದೆ.
ವಾಸ ಮಾಡಲಾಗದ ಸ್ಥಿತಿ: ಇದೆಲ್ಲದರ ಪರಿಣಾಮ ಇಂದು ಶೆಟ್ಟಿಹಳ್ಳಿ ಕೆರೆಯ ಆಸುಪಾಸಿ ನಲ್ಲಿರುವ ರಾಜಾ ಕೆಂಪೇಗೌಡ ಬಡಾವಣೆ, ಪೊಲೀಸ್ ಕ್ವಾರ್ಟಸ್, ಇಂದಿರಾ ಕಾಟೇಜ್, ಸಿಎಂಸಿ ಬಡಾವಣೆ, ರಾಘವೇಂದ್ರ ಬಡಾವಣೆಯ ಶೆಟ್ಟಿಹಳ್ಳಿ ನಿವಾಸಿಗಳು ತಮ್ಮ ಮನೆಯಲ್ಲಿ ವಾಸ ಮಾಡಲಾಗದ ಸ್ಥಿತಿ ಅನುಭವಿಸುತ್ತಿದ್ದಾರೆ.
ಒತ್ತುವರಿ ಭೂತ: ಸರ್ಕಾರಿ ಭೂಮಿಯನ್ನು ಕಾಡುವ ಒತ್ತುವರಿ ಭೂತ ಶೆಟ್ಟಿಹಳ್ಳಿ ಕೆರೆಯನ್ನೂ ಸಹ ಬಿಟ್ಟಿಲ್ಲ. ಸುಮಾರು 60 ಎಕರೆ ಪ್ರದೇಶದಲ್ಲಿ ವ್ಯಾಪಿಸಿದ್ದ ಕೆರೆ ಇಂದು ಬರೋಬ್ಬರಿ 15 ಎಕರೆ ಪ್ರದೇಶ ಕಳೆದುಕೊಂಡಿದೆ. ಸರ್ಕಾರಿ ಇಲಾಖೆಗಳೂ ಸೇರಿದಂತೆ ಇಂದಿರಾ ಕಾಟೇಜ್ನ ಕೆಲವರು ಶೆಟ್ಟಿಹಳ್ಳಿ ಕೆರೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪವಿದೆ.
ಪುನಶ್ಚೇತನಕ್ಕೆ ಆಗ್ರಹ: ಪಟ್ಟಣದ ಹೊರವಲಯದ ಕುಡಿನೀರು ಕಟ್ಟೆಯನ್ನು ರಾಮನಗರ ಚನ್ನಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪುನಶ್ಚೇತನಗೊಳಿಸುತ್ತಿರುವಂತೆ ಶೆಟ್ಟಿಹಳ್ಳಿ ಕೆರೆಗೂ ಕಾಯಕಲ್ಪ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಒತ್ತುವರಿ ಆಗಿರುವ ಕೆರೆಯ ಜಾಗವನ್ನು ವಶಕ್ಕೆ ಪಡೆದು ಕೆರೆಯ ಸುತ್ತಲೂ ಉದ್ಯಾನ ನಿರ್ಮಿಸಿದರೆ ನಗರದ ಜನತೆಗೆ ಅನುಕೂಲವಾಗಲಿದೆ. ಜತೆಗೆ ಸ್ವತ್ಛತೆಯಿಂದಿರಲು ಸಾಧ್ಯವಾಗುತ್ತದೆ. ಈ ಸಂಬಂಧ ಅಧಿಕಾರಿಗಳು ಗಮನ ಹರಿಸಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.
ನಗರಸಭೆ, ಪಟ್ಟಣದ ಕೊಳಚೆ ನೀರ ನ್ನೆಲ್ಲಾ ಶೆಟ್ಟಿಹಳ್ಳಿ ಕೆರೆಗೆ ಹರಿಸುತ್ತಿದೆ, ನೀರು ಸಂಸ್ಕರಣೆ ಮಾಡದೆ ಹಾಗೆಯೇ ಬಿಡುತ್ತಿ ರುವುದರಿಂದ ದುರ್ವಾಸನೆ ಬೀರುತ್ತಿದು, ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ಕೆರೆಯನ್ನು ಪುನಶ್ಚೇತನಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
ನಾಗರಾಜು, ಮಹಾಲಕ್ಷ್ಮೀ ಬಡಾವಣೆ ನಿವಾಸಿ, ಚನ್ನಪಟ್ಟಣ
ಶೆಟ್ಟಿಹಳ್ಳಿ ಕೆರೆಗೆ ಪಟ್ಟಣದ ತ್ಯಾಜ್ಯ ನೀರು ಹರಿಸುತ್ತಿಲ್ಲ, ಪಕ್ಕದ ಬಡಾವಣೆಯ ಚರಂಡಿ ನೀರು ಸ್ವಾಭಾವಿಕವಾಗಿ ಕೆರೆಗೆ ಹರಿಯುತ್ತಿದೆ. ಒಳಚರಂಡಿ ಕಾಮಗಾರಿ ಪೂರ್ಣವಾದರೆ ಅದು ಸಂಪೂರ್ಣ ನಿಯಂತ್ರಣವಾಗಲಿದೆ. ಒಳಚರಂಡಿ ಕಾಮಗಾರಿ ವಿಳಂಬವಾಗಿರುವುದರಿಂದ ಸಮಸ್ಯೆಯಾಗಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು.
ಡಾ.ಆನಂದ್, ಪೌರಾಯುಕ್ತ, ನಗರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ