ಅವನತಿಯತ್ತ ಸಾಗುತ್ತಿದೆ ತರಬೇತಿ ಕೇಂದ್ರ


Team Udayavani, Apr 20, 2019, 12:04 PM IST

11

ಚನ್ನಪಟ್ಟಣ: ಗ್ರಾಮೀಣ ಭಾಗದ ನಿರುದ್ಯೋಗಿಗಳನ್ನು ಸ್ವಾವಲಂಬಿಗಳನ್ನಾಗಿಸಲು ಶತಮಾನದ ಹಿಂದೆ ಆರಂಭಿಸಲಾದ ಇಲ್ಲಿನ ಕುಶಲಕರ್ಮಿ ತರಬೇತಿ ಸಂಸ್ಥೆಯು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ಲಕ್ಷ್ಯದಿಂದ ಅವನತಿಯ ಹಾದಿ ಹಿಡಿದಿದೆ.

ಮೈಸೂರು ಸಂಸ್ಥಾನದ ಕೃಷ್ಣರಾಜೇಂದ್ರ ಒಡೆಯರ್‌ ಅವರಿಂದ ಆರಂಭಗೊಂಡ ಈ ಸಂಸ್ಥೆಯು ಆಟಿಕೆ ತಯಾರಿಕೆ, ಆಟೋ ಮೊಬೈಲ್, ಮರಗೆಲಸ, ಕಮ್ಮಾರಿಕೆ, ಜನರಲ್ ಇಂಜಿನಿಯರಿಂಗ್‌ ಸೇರಿದಂತೆ ಹಲವು ವಿಭಾಗಗಳಲ್ಲಿ ತರಬೇತಿ ನೀಡಿ, ಸಾವಿರಾರು ನಿರುದ್ಯೋಗಿಗಳಿಗೆ ಬದುಕು ಕಟ್ಟಿಕೊಟ್ಟಿದ್ದು ಈಗ ಇತಿಹಾಸ.

ಅಧಿಕೃತ ಬಾಗಿಲು ಮುಚ್ಚುವುದು ಬಾಕಿ: ಸರ್ಕಾರದ ಸುಪರ್ದಿಯಲ್ಲಿದ್ದ ಸಂಸ್ಥೆಯನ್ನು 1987ರಲ್ಲಿ ಜಿಪಂ ವ್ಯಾಪ್ತಿಗೆ ಸೇರ್ಪಡೆ ಮಾಡಿದ್ದರಿಂದ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಸಿಗದೆ, ಇದೀಗ ಸಂಸ್ಥೆ ಮುಚ್ಚುವ ಹಂತಕ್ಕೆ ಬಂದು ತಲುಪಿದೆ. ಅಧಿಕೃತವಾಗಿ ಬಾಗಿಲು ಮುಚ್ಚುವುದೊಂದೇ ಬಾಕಿ ಉಳಿದುಕೊಂಡಿದೆ. ತರಬೇತಿ ಸಮಯದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ನೀಡಲಾಗುತ್ತಿದ್ದ ಶಿಷ್ಯವೇತನಕ್ಕೆ ಜಿಪಂ ಅನುದಾನ ನೀಡದಿರುವುದು, ಹಳೆಯ ಕಾಲದ ಶಿಷ್ಯವೇತನ ನಿಗದಿಗೊಳಿಸಿದ್ದು ಹಾಗೂ ಆಧುನೀಕತೆಗೆ ತಕ್ಕಂತೆ ಹೊಸ ತರಬೇತಿಗಳನ್ನು ನೀಡದಿರುವುದು ಪ್ರಶಿಕ್ಷಣಾರ್ಥಿಗಳು ಸಂಸ್ಥೆಯತ್ತ ಸುಳಿಯದಿರಲು ಪ್ರಮುಖ ಕಾರಣವಾಗಿದೆ. ತರಬೇತಿಯ ನಂತರ ಸ್ವ- ಉದ್ಯೋಗ ಕಲ್ಪಿಸಿಕೊಳ್ಳಲು ಬ್ಯಾಂಕ್‌ಗಳು ಹಾಗೂ ಸರ್ಕಾರಿ ಸಂಸ್ಥೆಗಳು ಹಣಕಾಸು ನೀಡಲು ಹಿಂದೇಟು ಹಾಕಿದ್ದು ಅವನತಿಗೆ ನಾಂದಿಹಾಡಿದೆ.

ಖಾಸಗಿ ತರಬೇತಿ ಸಂಸ್ಥೆಗಳು ತರಬೇತಿಯ ನಂತರ ತಮ್ಮ ಸಂಸ್ಥೆಯಲ್ಲಿಯೇ ಕೆಲಸ ನೀಡುತ್ತಿರುವುದು ಹಾಗೂ ಬಹುರಾಷ್ಟ್ರೀಯ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು, ಅಲ್ಲಿ ಉದ್ಯೋಗ ಕಲ್ಪಿಸುತ್ತಿರುವುದು ನಿರುದ್ಯೋಗಿಗಳನ್ನು ಸೆಳೆಯುತ್ತಿರುವ ಪರಿಣಾಮ ಸರ್ಕಾರಿ ಸ್ವಾಮ್ಯದ ಕುಶಲಕರ್ಮಿ ತರಬೇತಿ ಸಂಸ್ಥೆಗಳು ಮುಚ್ಚುವ ಹಂತ ತಲುಪಿವೆ.

ಕೇಂದ್ರದ ಯೋಜನೆಗಳೂ ಸ್ಥಗಿತ: ಕೇಂದ್ರ ಸರ್ಕಾರ ಪ್ರಾಯೋಜಿತ ಪ್ರಧಾನಮಂತ್ರಿ ರೋಜ್‌ಗಾರ್‌ ಯೋಜನೆಯಡಿ ವಾರ್ಷಿಕ 1000 ಮಂದಿಗೆ ತರಬೇತಿ ನೀಡಿ ಸಹಾಯಧನ ನೀಡಲು ಈ ಹಿಂದೆ ಅವಕಾಶ ಇತ್ತು. ಆದರೂ ಯೋಜನೆಯನ್ನು ಪಿಎಂಎಜಿ ಎಂದು ಬದಲಾವಣೆ ಮಾಡಿ, ಒಂದು ವಿಭಾಗಕ್ಕೆ ಕೇವಲ 4-5 ಮಂದಿಗೆ ಮಾತ್ರ ಸಹಾಯಧನ ನಿಗದಿಗೊಳಿಸಿದ್ದರಿಂದ ಸಂಸ್ಥೆಗೆ ಮತ್ತಷ್ಟು ಹಿನ್ನಡೆಯಾಯಿತು.

ಸರ್ಕಾರಿ ಇಲಾಖೆ ನಿರ್ಲಕ್ಷ್ಯ: ಎರಡು ಸಚಿವಾಲಯ ಹೊಂದಿರುವ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ತನ್ನದೇ ಕೂಸಾದ ತರಬೇತಿ ಸಂಸ್ಥೆಯ ಬೆಳವಣಿಗೆಗೆ ನಿರ್ಲಕ್ಷ್ಯ ತೋರಿದ್ದು, ತರಬೇತಿ ಸಂಸ್ಥೆಗೆ ಪ್ರತ್ಯೇಕ ಅನುದಾನ ಮೀಸಲು ಇಟ್ಟಿಲ್ಲ. ಜಿಲ್ಲಾ ಪಂಚಾಯ್ತಿ ವ್ಯಾಪ್ತಿಗೆ ಸೇರ್ಪಡೆ ಮಾಡಿ ಕೈ ತೊಳೆದುಕೊಂಡಿದೆ. ಹೊಸ ಕೌಶಲ್ಯಗಳ ಬಗ್ಗೆ ತರಬೇತಿ ನೀಡುವುದು, ಸ್ವ- ಉದ್ಯೋಗ ಕಲ್ಪಿಸಿಕೊಳ್ಳಲು ಸಹಾಯಧನ ನೀಡುವುದು ಹಾಗೂ ಶಿಷ್ಯವೇತನವನ್ನು ಪರಿಷ್ಕರಿಸುವ ಗೋಜಿಗೆ ಹೋಗದ ಇಲಾಖೆ, ಬಹುರಾಷ್ಟ್ರೀಯ ಕಂಪನಿಗಳು, ಕೈಗಾರಿಕೆಗಳಿಗೆ ಮಣೆ ಹಾಕುತ್ತಾ, ತರಬೇತಿ ಸಂಸ್ಥೆಯಿಂದ ತನಗೇನು ಪ್ರಯೋಜನ ಎಂಬಂತೆ ಸಂಸ್ಥೆಯನ್ನೇ ಮುಚ್ಚುವ ನಿರ್ಧಾರ ಮಾಡಿದೆ. ತರಬೇತಿ ಸಂಸ್ಥೆ ಮುಚ್ಚಿ ಜಾಗವನ್ನು ಐಟಿಐ ಕಾಲೇಜಿಗೆ ನೀಡಲು ಇಲಾಖೆ ಉತ್ಸಾಹ ತೋರುತ್ತಿದೆ. ಸಿಬ್ಬಂದಿಯನ್ನು ಸಹ ಕಾಲೇಜಿಗೆ ನಿಯೋಜನೆ ಮಾಡಿ, ತರಬೇತಿ ಪರಿಕರಗಳು, ಯಂತ್ರಗಳನ್ನು ಹರಾಜು ಹಾಕುವ ಮಹತ್ಕಾರ್ಯಕ್ಕೆ ವೇದಿಕೆ ಸಿದ್ಧಮಾಡುತ್ತಿದೆ. ಈಗಾಗಲೇ ಪಾಳು ಬಂಗಲೆಯಂತಾಗಿರುವ ಸಂಸ್ಥೆ ಮುಂದಿನ ದಿನಗಳಲ್ಲಿ ಪಳೆಯುಳಿಕೆಯಾಗುವುದು ನಿಶ್ಚಿತವಾಗಿದೆ.

ಮುಚ್ಚುವ ಮುನ್ನ ಯೋಚಿಸಿ: ಶತಮಾನದ ಕಾಲ ಸಹಸ್ರಾರು ನಿರುದ್ಯೋಗಿಗಳಿಗೆ ಬದುಕು ಕಲ್ಪಿಸಿದ್ದ ತರಬೇತಿ ಸಂಸ್ಥೆಯನ್ನು ಮುಚ್ಚುವ ಮುನ್ನ ಇಲಾಖೆ ಮತ್ತೂಮ್ಮೆ ಪರಿಶೀಲನೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸಂಸ್ಥೆಯನ್ನೊಮ್ಮೆ ಮುಚ್ಚಿದರೆ ಅದನ್ನು ಪುನಃ ಆರಂಭಿಸಲು ಅಸಾಧ್ಯ. ಈ ಬಗ್ಗೆ ಇಲಾಖೆ ಗಮನಹರಿಸಿ ಪುನಶ್ಚೇತನಗೊಳಿಸಲು ಮುಂದಾಗಲಿ ಎಂಬುದು ಪ್ರಜ್ಞಾವಂತರ ಆಶಯವಾಗಿದೆ.

ಟಾಪ್ ನ್ಯೂಸ್

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Getting good response from people in constituency: D.K. Suresh

Ramanagar; ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Channapatna ಉಪಚುನಾವಣೆಗೆ ಅಭ್ಯರ್ಥಿ ಯಾರು? ಮಂಡ್ಯದಿಂದ ಎಚ್‌ಡಿಕೆ ಸ್ಪರ್ಧೆ ಸುಳಿವು

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Lok Sabha elections: ಕೈಗೆ ಚನ್ನಪಟ್ಟಣ, ಮೈತ್ರಿಗೆ ಕನಕಪುರ‌ ಕಬ್ಬಿಣದ ಕಡಲೆ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

Ramanagara ದೇವೇಗೌಡ ಕುಟುಂಬದ ವಿರುದ್ಧ ಡಿ.ಕೆ. ಸುರೇಶ್‌ ವಾಗ್ಧಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.