![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಅಸಮಾಧಾನ
Team Udayavani, May 26, 2020, 7:32 AM IST
![grama asama](https://www.udayavani.com/wp-content/uploads/2020/05/grama-asama-620x286.jpg)
ಕುದೂರು: ಚೆನ್ನೈನಿಂದ ಬಂದಿದ್ದ ದಂಪತಿಯ ಎರಡೂವರೆ ವರ್ಷದ ಮಗುವಿಗೆ ಸೋಂಕು ಧೃಢ ಪಟ್ಟಿದ್ದು, ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುಟುಂಬ ಮೇ. 9ರಂದು ತಮಿಳುನಾಡಿನ ಚೆನ್ನೈ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಮಾರಸಂದ್ರಕ್ಕೆ ಕುಟುಂಬ ಬಂದಿತ್ತು. ಕುಟುಂಬವನ್ನು ಕ್ವಾರಂಟೈನ್ನಲ್ಲಿರಿಸದೇ ಹೋಂ ಕ್ವಾರಂಟೈನ್ ಮಾಡಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ ಗ್ರಾಮದಲ್ಲಿ ಕೋವಿಡ್ 19 ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆರೋಗ್ಯಧಿಕಾರಿಗಳ ತಂಡ ಪಿಎಸ್ಐ ಮಂಜುನಾಥ್ ನೇತೃತ್ವದಲ್ಲಿ ಭಾನುವಾರ ತಡರಾತ್ರಿ ಮಾರಸಂದ್ರ ಮನೆಯಲ್ಲಿ ಕ್ವಾರಂಟರ್ನಲ್ಲಿದ್ದ ಮಗು ಮತ್ತು ತಂದೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಗುವಿನ ತಂದೆ ಕಳೆದ 13 ವರ್ಷಗಳಿಂದ ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಚೆನ್ನೈನಲ್ಲಿ ಕೋವಿಡ್ 19 ಹೆಚ್ಚಾಗುತ್ತಿದ್ದಂತೆ ರಾಮನಗರ ಜಿಲ್ಲಾ ಕೇಂದ್ರದಲ್ಲಿ ಆನ್ಲೈನ್ನಲ್ಲಿ ಪಾಸ್ ಅನುಮತಿ ಪಡೆದು ಕುಟುಂಬಸ್ಥರು ಮೇ 9ರಂದು ಕುದೂರು ಹೋಬಳಿಯ ಮಾರಸಂದ್ರ ಗ್ರಾಮದ ತಂದೆ ಮನೆಗೆ ಮರಳಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಸುಗ್ಗನಹಳ್ಳಿ ಆರೋಗ್ಯಾಧಿಕಾರಿಗಳ ತಂಡ ಭೇಟಿ ನೀಡಿ, ಕುಟುಂಬಸ್ಥರನ್ನು ತಪಾಸಣೆ ನೆಡೆಸಿ ಹೋಂ ಕ್ವಾರಂಟೈನ್ ಮಾಡಲಾಗಿತ್ತು.
ಮಗುವಿನ ಚಿಕ್ಕಪ್ಪನ ಓಡಾಟ: ಸೋಂಕಿರುವ ಮಗುವಿನ ಚಿಕ್ಕಪ್ಪ, ಅಗತ್ಯ ವಸ್ತುಗಳ ಖರೀದಿಗೆ ಕುದೂರು ಮತ್ತು ಹುಲಿಕಲ್ ಗ್ರಾಮದೆಲ್ಲೆಡೆ ಓಡಾಡಿದ್ದಾನೆ. ಭಾನುವಾರ ತಡರಾತ್ರಿ ಆರೋಗ್ಯಧಿಕಾರಿಗಳು ಮಗುವನ್ನು ವಶಕ್ಕೆ ಪಡೆದ ನಂತರ ಸೋಂಕಿತ ಮಗುವಿನ ಚಿಕ್ಕಮ್ಮ ಹುಲಿಕಲ್ ಗ್ರಾಮದ ಸಂಬಂಧಿಕರ ಮನೆಗೆ ತೆರಳಿದ್ದಾರೆ.
ಶಾಸಕ ಎ.ಮಂಜುಗೆ ಕೋವಿಡ್ 19 ಆತಂಕ: ಗ್ರಾಮದ ಹಿರಿಯ ರಂಗನಾಥ್ರಾವ್, ಮೇ .20ರಂದು ನಿಧನರಾಗಿದ್ದ ಹಿನ್ನಲೆ ಅಂತಿಮ ದರ್ಶನಕ್ಕೆ ತೆರಳಿದ್ದ ಶಾಸಕ ಎ.ಮಂಜುನಾಥ್, ಅರ್ಧ ಗಂಟೆ ಇದ್ದರು. 25ರಂದು ಮಾರಸಂದ್ರ ಗ್ರಾಮದ ಮಗುವಿಗೆ ಕೋವಿಡ್ 19 ಸೋಂಕು ಧೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಎ.ಮಂಜುರವರಿಗೂ ಕೋವಿಡ್ 19 ಭೀತಿ ಎದುರಾಗಿದೆ. ಜಿಲ್ಲೆಯ ಉನ್ನತಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮದ ಸುತ್ತ 1 ಕಿ.ಮೀ. ಪ್ರದೇಶ ಸೀಲ್ಡೌನ್ ಮಾಡಿ, ಗ್ರಾಮಕ್ಕೆ ನಿರ್ಬಂಧ ಹೇರಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Magadi; Mother-son passed away due to gas leak from geyser](https://www.udayavani.com/wp-content/uploads/2024/07/magadu-150x83.jpg)
Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ
![Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ](https://www.udayavani.com/wp-content/uploads/2024/07/karad-150x83.jpg)
Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ
![Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ](https://www.udayavani.com/wp-content/uploads/2024/07/loka-150x84.jpg)
Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
![1-train](https://www.udayavani.com/wp-content/uploads/2024/07/1-train-150x96.jpg)
Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ
![HD-Kumaraswamy](https://www.udayavani.com/wp-content/uploads/2024/07/HD-Kumaraswamy-3-150x90.jpg)
Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.