ರಂಗಭೂಮಿ ಕಲೆಗಿದೆ ಮಹತ್ತರ ಇತಿಹಾಸ

ಪೌರಾಣಿಕ ನಾಟಕಗಳ ಪಾತ್ರ ಅಭಿನಯಿಸುವ ಕಲಾವಿದರಿಗೆ ತರಬೇತಿ: ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ

Team Udayavani, Aug 18, 2019, 4:42 PM IST

rn-tdy-2

ಚನ್ನಪಟ್ಟಣದಲ್ಲಿ ನಡೆದ ನಾಟಕ ಪ್ರದರ್ಶನ ಸಮಾರಂಭದಲ್ಲಿ ರಂಗಭೂಮಿ ಕಲಾವಿದ ಎಂ.ಎನ್‌.ನವೀನ್‌ಕುಮಾರ್‌ ಅವರನ್ನು ಗೌರವಿಸಲಾಯಿತು.

ಚನ್ನಪಟ್ಟಣ: ರಂಗಭೂಮಿ ಕಲೆ ತನ್ನದೇ ಆದ ಮಹತ್ತರ ಇತಿಹಾಸ ಹೊಂದಿದೆ. ಇತ್ತೀಚಿನ ದೂರದರ್ಶನದಲ್ಲಿ ಪ್ರದರ್ಶನವಾಗುವ ಯಾವ ಕಾರ್ಯಕ್ರಮಗಳೂ ಇದಕ್ಕೆ ಸರಿಸಾಟಿಯಾಗಲಾರದು ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ.ಲಿಂಗಪ್ಪ ಹೇಳಿದರು.

ಪಟ್ಟಣದ ಕೊಲ್ಲಾಪುರದ ಮಹಾಲಕ್ಷ್ಮೀ ದೇವಾಲಯದ ಆವರಣದಲ್ಲಿ ಶ್ರೀಕೆಂಗಲ್ ಅಂಜನೇಯ ಕಲಾ ಸೇವಾ ಟ್ರಸ್ಟ್‌ ಆಯೋಜಿಸಿದ್ದ ಶ್ರೀಕೃಷ್ಣಸಂಧಾನ ಪೌರಾಣಿಕ ನಾಟಕ ಉದ್ಘಾಟಿಸಿದ ಅವರು ಮಾತನಾಡಿ, ನಾಟಕ ಕಲೆಗೆ ರಾಜ ಮಹಾರಾಜರ ಕಾಲದ ಪರಂಪರೆ ಹೊಂದಿದೆ. ಗ್ರಾಮೀಣ ಪ್ರತಿಭೆಗಳು ಕಲೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು, ಆ ಪಾತ್ರಗಳಿಗೆ ಜೀವ ತುಂಬುತ್ತಿದ್ದರು. ಇಂದಿನ ಸಿನಿಮಾ, ಧಾರಾವಾಹಿಗಳು ಕೇವಲ ಹಣ ಮಾಡುವ ಉದ್ದೇಶದಿಂದ ಮೂಡಿಬರುತ್ತಿವೆ ಎಂದರು.

ಪಾತ್ರಕ್ಕೆ ತಕ್ಕಂತೆ ಕಲಾವಿದರು ಸಜ್ಜು: ಪೌರಾಣಿಕ ನಾಟಕಗಳ ಪಾತ್ರಗಳನ್ನು ಅಭಿನಯಿಸುತ್ತಿದ್ದ ಕಲಾವಿದರು ಸಾಕಷ್ಟು ತರಬೇತಿ ಪಡೆದು, ಆ ಪಾತ್ರಕ್ಕೆ ತಕ್ಕಂತೆ ಸಜ್ಜುಗೊಳ್ಳುತ್ತಿದ್ದರು. ನಾಟಕ ವೀಕ್ಷಣೆಗೆ ಬರುವ ಪ್ರೇಕ್ಷಕರು ಆ ಪಾತ್ರಧಾರಿಯ ಮೂಲಕ ದೇವರನ್ನು ಕಾಣುತ್ತಿದ್ದರು. ಹಾಗೆಯೇ ಅಲ್ಲಿನ ಒಳ್ಳೆಯ ಸಂದೇಶಗಳನ್ನು ತಮ್ಮ ಬದುಕಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುತ್ತಿದ್ದರು. ಆ ಪ್ರದರ್ಶನಗಳು ನಾಟಕದಂತೆ ಕಾಣುತ್ತಿರಲಿಲ್ಲ. ನಿಜ ಜೀವನದಲ್ಲಿ ಇರುವಂತೆ ಭಾಸವಾಗುತ್ತಿತ್ತು ಎಂದು ಹೇಳಿದರು.

ಕಲಾವಿದರನ್ನು ಪ್ರೋತ್ಸಾಹಿಸಿ: ಗ್ರಾಮೀಣ ಪ್ರದೇಶದಲ್ಲಿ ಎಲೆಮರೆ ಕಾಯಿಯಂತೆ ಇರುವ ಪ್ರತಿಭೆಗಳು ಅದರಲ್ಲೂ ರಂಗಭೂಮಿ ಕಲಾ ಪ್ರವೀಣರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅವರನ್ನು ಪ್ರೋತ್ಸಾಹಿಸಬೇಕಾದ ಜಾವಬ್ದಾರಿ ಸರ್ಕಾರ ಹಾಗೂ ಸಂಸ್ಥೆಗಳದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮು ಖರಾಗಬೇಕು ಎಂದು ಸಲಹೆ ನೀಡಿದರು.

ಚನ್ನಪಟ್ಟಣ ಕಲಾವಿದರ ಸ್ವರ್ಗ: ಹಿರಿಯ ರಂಗಭೂಮಿ ಕಲಾವಿದ ಗೋಪಾಲ್ಗೌಡ ಮಾತನಾಡಿ, ಚನ್ನಪಟ್ಟಣ ಕಲಾವಿದರ ಸ್ವರ್ಗ. ಇಲ್ಲಿ ಇರುವ ಕಲಾವಿದರು ನಿಜಕ್ಕೂ ಇಡೀ ರಾಜ್ಯದಲ್ಲಿ ಎಲ್ಲಿಯೂ ಇಲ್ಲ. ಕಾಲಕಾಲಕ್ಕೆ ಸಂಸ್ಥೆಗಳ ಮೂಲಕ ಅಥವಾ ಗ್ರಾಮಗಳಲ್ಲಿ ನಾಟಕ ಪ್ರದರ್ಶನಗಳು ಹೇರಳವಾಗಿ ಆಗುತ್ತಿವೆ. ನಿಜಕ್ಕೂ ಇದು ನಾಟಕ ಕಲೆಗಳ ತವರು ಎಂದರೆ ತಪ್ಪಾಗಲಾರದು ಎಂದರು.

ಈ ವೇಳೆ ರಂಗಭೂಮಿ ಕಲಾವಿದ ಎಂ.ಎನ್‌.ನವೀನ್‌ಕುಮಾರ್‌ ಅವರಿಗೆ ಬೆಳ್ಳಿ ಕಿರೀಟಧಾರಣೆ ಮಾಡಿ, ಗೌರವಿಸಲಾಯಿತು. ರಂಗಭೂಮಿ ನಿರ್ದೇಶಕ ಮಂಗಳವಾರಪೇಟೆ ಧರ್ಮೇಂದ್ರ ಕುಮಾರ್‌, ಕೊಲ್ಲೂರು ಶ್ರೀನಿವಾಸ್‌, ಕೃಷ್ಣರಾಜು, ಶಿವಾನಂದ ಮೂರ್ತಿ, ಪಿ.ವಿಜೇಂದ್ರ, ಪಿ.ಗುರುಮಾದಯ್ಯ, ತೇಜಸ್‌ ಬಿ.ಕೆ. ಹಾಜರಿದ್ದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.