ತಿಮ್ಮಪ್ಪನ ಬೆಟ್ಟದಲ್ಲಿ ಅನೈತಿಕ ಚಟುವಟಿಕೆಗೆ ತಡೆ


Team Udayavani, Nov 8, 2021, 3:41 PM IST

ತಿಮ್ಮಪ್ಪನ ಬೆಟ್ಟದಲ್ಲಿ ಅನೈತಿಕ ಚಟುವಟಿಕೆಗೆ ತಡೆ

ರಾಮನಗರ: ಕೂಟಗಲ್‌ ಗ್ರಾಮದ ಬಳಿಯ ತಿಮ್ಮಪ್ಪನ ಬೆಟ್ಟದಲ್ಲಿ ರುವ ದೇವಾಲಯದ ನಿರ್ವಹಣೆಯನ್ನು ಶ್ರೀ ಬೆಟ್ಟದ ತಿಮ್ಮಪ್ಪಸ್ವಾಮಿ ದೇವಸ್ಥಾನ ಟ್ರಸ್ಟ್‌ ಆರಂಭಿಸಿದ ನಂತರವಷ್ಟೇ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ.

ಪರಿಸರ ಸ್ವತ್ಛತೆ ಕಾಪಾಡಿಕೊಳ್ಳಲಾಗು ತ್ತಿದೆ. ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಟ್ರಸ್ಟ್‌ನ ಪಾರ ದರ್ಶಕ ಚಟುವಟಿಕೆ ಗಮನಿಸಿ ಸಹಕರಿಸಬೇಕು ಎಂದು ಟ್ರಸ್ಟ್‌ನ ಅಧ್ಯಕ್ಷ ದೇವರಾಜು ಹೇಳಿದರು.

ದೇಗುಲದ ನಿರ್ವಹಣೆಗೆ ಪಾರ್ಕಿಂಗ್‌ ಶುಲ್ಕ: ತಿಮ್ಮಪ್ಪನ ಬೆಟ್ಟದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೂಟಗಲ್‌ ಗ್ರಾಮಸ್ಥರು 2018ರಲ್ಲಿ ಟ್ರಸ್ಟ್‌ ಸ್ಥಾಪಿಸಿಕೊಂಡ ನಂತರ ಪ್ರಕೃತಿದತ್ತವಾದ ತಿಮ್ಮಪ್ಪನ ಬೆಟ್ಟದಲ್ಲಿರುವ ದೇವಾಲಯ ನಿರ್ವಹಣೆ ಮಾಡುತ್ತಿದೆ. ದೇವಾಲಯ ನಿರ್ವಹಣೆಗೆಂದು ಇಲ್ಲಿಗೆ ಬರುವ ಭಕ್ತರು ಮತ್ತು ಚಾರ ಣಿಗರ ವಾಹನಗಳಿಗೆ ಇಂತಿಷ್ಟು ಶುಲ್ಕ ಪಡೆಯಲಾಗುತ್ತಿದೆ. ಈ ವಿಚಾರದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲಾಗಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಇದನ್ನು ದೊಡ್ಡ ಹಗರಣ ಎಂಬಂತೆ ಅಪಪ್ರಚಾರ ಮಾಡುತ್ತಿದ್ದಾರೆ.

ದೇವಾಲಯದ ಅಭಿವೃದ್ಧಿಗಾಗಲಿ, ಪರಿಸರ ಸ್ವತ್ಛತೆಗೆ ಆದ್ಯತೆ ಕೊಡದ ಅರಣ್ಯ ಇಲಾಖೆ ಅಧಿಕಾರಿಗಳು ಟ್ರಸ್ಟ್‌ನ ಚಟುವಟಿಕೆಗಳ ಬಗ್ಗೆ ಹೀಗೆ ಹೀಯಾಳಿಸುವುದು ಸರಿ ಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಟ್ರಸ್ಟ್‌ನಿಂದ ಅನೈತಿಕ ಚಟುವಟಿಕೆ ತಡೆ: ತಿಮಪ್ಪನ ಬೆಟ್ಟ ಪ್ರಕೃತಿದತ್ತವಾಗಿದೆ. ಸದಾ ಹಸಿರು ಪರಿಸರವಿರುತ್ತದೆ. ಇಲ್ಲಿ ತಿಮ್ಮಪ್ಪಸ್ವಾಮಿ ಹಾಗೂ ಲಕ್ಷ್ಮೀದೇವಿ ದೇವಾಲಯಗಳಿವೆ. ಪ್ರಕೃತಿ ಆಸ್ವಾದಿಸಲು ಬರುತ್ತಿದ್ದ ಕೆಲವು ಗುಂಪುಗಳು ಇಲ್ಲಿ ಮದ್ಯಪಾನ ಸೇವಿಸುವುದು ಸೇರಿದಂತೆ ಅನೈ ತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಅಲ್ಲದೆ ತ್ಯಾಜ್ಯವನ್ನು ಬೀಸಾಡಿ ಹೋಗುತ್ತಿದ್ದರು. ಕೂಟಗಲ್‌ ಗ್ರಾಮಸ್ಥರು ಟ್ರಸ್ಟ್‌ ಸ್ಥಾಪಿಸಿಕೊಂಡು ಇದಕ್ಕೆಲ್ಲ ಕಡಿವಾಣ ಹಾಕಿದ್ದಾರೆ ಎಂದರು.

ಟ್ರಸ್ಟ್‌ ಬಗ್ಗೆ ಅಪಪ್ರಚಾರ ಸಲ್ಲದು: ಜನಪ್ರತಿನಿಧಿಗಳ ಸಹಕಾರದಲ್ಲಿ ಜಿಲ್ಲಾಡಳಿತದಿಂದ ಬೆಟ್ಟಕ್ಕೆ ರಸ್ತೆ ನಿರ್ಮಾಣವಾಗಿದೆ. ಕುಡಿಯುವ ನೀರಿನ ವ್ಯವಸ್ಥೆಯಾಗಿದೆ. ಟ್ರಸ್ಟ್‌ ಮೂಲಕ ದೇವಾಲಯದ ಅರ್ಚಕರಿಗೆ ವೇತನ ಕೊಡಲಾಗುತ್ತಿದೆ. ಬೆಟ್ಟದ ಮೇಲೊಂದು ಛತ್ರವಿದೆ. ಇದೀಗ ಊಟದ ಹಾಲ್‌ ನಿರ್ಮಿಸಲಾಗುತ್ತಿದೆ. ಬಡ ಕುಟುಂಬಗಳು ಇಲ್ಲಿ ಮದುವೆ ಮುಂತಾದ ಶುಭಕಾರ್ಯಗಳನ್ನು ನೆರೆವೇರಿಸಿಕೊಂಡು ಬರುತ್ತಿದ್ದಾರೆ. ಆದರೆ ಟ್ರಸ್ಟ್‌ ಬಗ್ಗೆ ಕೆಲವರು ಇಲ್ಲ ಸಲ್ಲದ ಆರೋಪ ಹೊರೆಸುತ್ತಿದ್ದಾರೆ. ವಾಹನ ಶುಲ್ಕ ಪಡೆಯುವುದು ಮಹಾ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಕ್ರಮ ಗಣಿಗಾರಿಕೆ ತಡೆದಿಲ್ಲವೇಕೆ?: ಟ್ರಸ್ಟ್‌ನ ಜಂಟಿ ಕಾರ್ಯದರ್ಶಿ ಎಂ.ಮಹೇಶ್‌ ಮಾತನಾಡಿ, ತಿಮ್ಮಪ್ಪನ ಬೆಟ್ಟ ಅರಣ್ಯ ಇಲಾಖೆ ಸುಪರ್ದಿನಲ್ಲಿದೆ. ಬೆಟ್ಟಕ್ಕೆ ಬರುವ ಪ್ರವಾಸಿಗರಿಂದ ಪಾರ್ಕಿಂಗ್‌ ಶುಲ್ಕ ಪಡೆಯಬಾರದು ಎಂದು ಆದೇಶ ಕೊಡುವ ಅಧಿಕಾರಿಗಳು ಬೆಟ್ಟದ ಸುತ್ತ ಮುತ್ತಲು ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆಯುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು? ಅರಣ್ಯ ಭೂಮಿ ಒತ್ತುವರಿಯಾಗಿದ್ದರೂ ಈ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಗ್ರಾಮಸ್ಥರ ನಿರಂತರ ಶ್ರಮದಿಂದ ಬೆಟಕ್ಕೆ ರಸ್ತೆ ಸೇರಿದಂತೆ ಒಂದಿಷ್ಟು ಅಭಿವೃದ್ದಿಯಾಗಿದೆ. ರಸ್ತೆ ಪಕ್ಕ ಸಸಿ ನೆಟ್ಟಿರುವು ದೊಂದೆ ಅರಣ್ಯ ಇಲಾಖೆಯ ಸಾಧನೆ. ಅಕ್ರಮ ಚಟುವಟಿಕೆಗಳ ತಡೆಗೆ ಟ್ರಸ್ಟ್‌ವತಿಯಿಂದಲೇ ಸಿಸಿ ಕ್ಯಾಮರ ಅಳವಡಿಸಲಾಗಿದೆ. ಬೆಟ್ಟದ ಮೇಲೆ ಪರಿಸರ ಸ್ವತ್ಛತೆ ಕಾಪಾಡಿಕೊಂಡು ಬರಲಾಗುತ್ತಿದೆ. ಟ್ರಸ್ಟ್‌ ಕೈಗೊಂಡಿರುವ ನಿರ್ವಹಣೆ ಮತ್ತು ಅಭಿವೃದ್ಧಿಗೆ ಅರಣ್ಯ ಇಲಾಖೆ ಸಹ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಗೋಷ್ಠಿಯಲ್ಲಿ ಟ್ರಸ್ಟ್‌ ಕಾರ್ಯದರ್ಶಿ ಕೆ.ವಿ.ದೇವರಾಜು, ಖಜಾಂಚಿ ಕಾಂತರಾಜು, ಗೌರವಾಧ್ಯಕ್ಷ ಕೆ.ಪುಟ್ಟಸ್ವಾಮಿ, ಉಪಾಧ್ಯಕ್ಷ ಕೆ.ವಿ.ಅಶೋಕ್‌, ನಿರ್ದೇಶಕರುಗಳಾದ ಜಗದೀಶ್‌ ಕುಮಾರ್‌.ಸಿ, ಎಂ.ಪರಮಶಿವಯ್ಯ, ಹನುಮರಾಜು, ಶಿವರಾಮು, ಶಿವಣ್ಣ, ಕೃಷ್ಣಪ್ಪ, ಸಿದ್ದರಾಜು, ಅರ್ಚಕರುಗಳಾದ ದಿವಾಕರ್‌ ಮತ್ತು ನರಸಿಂಹಮೂರ್ತಿಯವರು ಹಾಜರಿದ್ದರು.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.