ಒಳಾಂಗಣ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ


Team Udayavani, Mar 3, 2019, 7:47 AM IST

olangana.jpg

ರಾಮನಗರ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ಸುಸಜ್ಜಿತ ಒಳಾಂಗಣ ಸ್ಟೇಡಿಯಂ ನಿರ್ಮಾಣಕ್ಕೆ ಚಿಂತನೆ ನಡೆದಿದೆ ಎಂದು ಶಾಸಕಿ ಅನಿತಾ ಭರವಸೆ ನೀಡಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಯೋಜನೆಯಡಿ ಸೌಲಭ್ಯಗಳ ವಿತರಣಾ ಸಮಾರಂಭ,

ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಶಹರಿ ಸಮೃದ್ಧಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯ ಅರ್ಕಾವತಿ ನದಿ ಪಾತ್ರದ ಅಭಿವೃದ್ಧಿಗೆ ಈಗಾಗಲೇ ನಿರ್ಧರಿಸಲಾಗಿದೆ. ಇದೇ ಯೋಜನೆಯಲ್ಲಿ ವ್ಯಾಯಾಮ ಶಾಲೆ, ವಾಕಿಂಗ್‌ ಪಾಥ್‌ ನಿರ್ಮಾಣಕ್ಕೂ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಗೆ 380ಕೋಟಿ ರೂ. ಅನುದಾನ: ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ವೃದ್ಧಿಗೆ ಸರ್ಕಾರ 380 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಎಸ್‌ಎಸ್‌ಸಿ ಅನುದಾನದಡಿಯಲ್ಲಿ ನಗರದಲ್ಲಿ ಕುಡಿಯುವ ನೀರು ಹಾಗೂ ಚರಂಡಿ ನಿರ್ಮಾಣಕ್ಕೆ ಕಾಮಗಾರಿಗಾಗಿ 10 ಕೋಟಿ ರೂ. ಅನುದಾನ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 10 ಕೋಟಿ ರೂ. ಹಣ ಮಂಜೂರಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿವಿಧೆಡೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿಗೆ ಬದ್ಧರಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲೇ ಶಾಸಕಿಯಾಗಿ ಜನರ ಸೇವೆ ಮಾಡುವುದಾಗಿ ತಿಳಿಸಿದರು. 

ಇಸ್ರೇಲ್‌ ಮಾದರಿ ಕೃಷಿ ಸಿಎಂ ಕನಸು: ರಾಜ್ಯದಲ್ಲಿ ಇಸ್ರೇಲ್‌ ಮಾದರಿ ಕೃಷಿ ಕೈಗೊಳ್ಳವುದು ಸಿಎಂ ಅವರ ಕನಸಾಗಿದೆ. ರೈತರ ಬಗ್ಗೆ ಅವರಿಗೆ ಅತೀವ ಕಾಳಜಿ ಇರುವುದರಿಂದಲೇ 48 ಸಾವಿರ ಕೋಟಿ ರೂ. ಸಾಲ ಮನ್ನ ಮಾಡಿದ್ದಾರೆ. ರೈತರಿಗೆ ಋಣ ಮುಕ್ತ ಪತ್ರ ಸದ್ಯದಲ್ಲೇ ದೊರೆಯಲಿದೆ. ಸಿಎಂ ಕುಮಾರಸ್ವಾಮಿಗೆ ಬಡವರ ಬಗ್ಗೆಯೂ ಕಾಳಜಿ ಹೆಚ್ಚಿದೆ. ರಸ್ತೆ ಬದಿಯ ವ್ಯಾಪಾರಿಗಳು ಅನಧಿಕೃತ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿದರಕ್ಕೆ ಸಾಲ ಪಡೆಯುವದನ್ನು ತಪ್ಪಿಸಲು ಬ್ಯಾಂಕುಗಳ ಮೂಲಕವೇ ಬಡ್ಡಿರಹಿತ ಸಾಲ ಪಡೆಯಲು ಬಡವರ ಬಂಧು ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದು ಹೇಳಿದರು.

ಅರ್ಹರಿಗೆ ಶೀಘ್ರ ಮಂಜೂರಾತಿ ಪತ್ರ ವಿತರಣೆ: ತಾಲೂಕಿನಲ್ಲಿ ವಸತಿ ರಹಿತರಿಗೆ ನಿವೇಶನ ಮತ್ತು ಮನೆ ನಿರ್ಮಿಸಿಕೊಳ್ಳಲು ತಾವು ಬದ್ಧರಾಗಿದ್ದೇವೆ. ಶೀಘ್ರದಲ್ಲೇ ಫ‌ಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಣೆ ಮಾಡಲಾಗುವುದು. ಲೋಕಸಭಾ ಚುನಾವಣೆಗೆ ಏ.5ರೊಳಗೆ ನೀತಿ ಸಂಹಿತಿ ಜಾರಿಗೆ ಬರಲಿದೆಎಂದು ಹೇಳಲಾಗುತ್ತಿದೆ. ಹೀಗಾಗಿ ತಾಲೂಕು ಅಭಿವೃದ್ಧಿ ಕಾಮಗಾರಿಗಳನ್ನು ತರಾತುರಿಯಲ್ಲೇ ಆರಂಭಿಸಲಾಗುತ್ತಿದೆ ಎಂದರು. 

ರಾಮನಗರ ಅಭಿವೃದ್ಧಿಗೆ ಶ್ರಮ: ಉಪಚುನಾವಣೆಯ ವೇಳೆ ಹಲವು ಭಾಗಗಳಲ್ಲಿ ಮಹಿಳೆಯರು ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆ ಕುರಿತು ತಮ್ಮ ಗಮನ ಸೆಳೆದಿದ್ದರು. ಈ ಸಮಸ್ಯೆ ನಿವಾರಣೆಗಾಗಿ ಶ್ರಮಿಸುತ್ತಿರುವುದಾಗಿ ಹೇಳಿದರು. ತಾವು ಶಾಸಕಿಯಾಗಿ ಆಯ್ಕೆಯಾಗಿ 100 ದಿನ ಕಳೆದಿದೆ, ರಾಮನಗರ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು.

ಈ ವೇಳೆಯಲ್ಲಿ ನಗರಸಭೆ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಮಂಗಳಾ, ಸದಸ್ಯರಾದ ಚೇತನ್‌ ಕುಮಾರ್‌, ಲೋಹಿತ್‌ ಬಾಬು, ರವಿ, ಮಂಜುನಾಥ್‌, ತಾಲೂಕು ಜೆಡಿಎಸ್‌ ಘಟಕದ ಅಧ್ಯಕ್ಷ ರಾಜಶೇಖರ್‌, ಜೆಡಿಎಸ್‌ ರಾಜ್ಯ ವಕ್ತಾರ ಬಿ.ಉಮೇಶ್‌, ತಹಶೀಲ್ದಾರ್‌ ರಾಜು, ನಗರಸಭೆ ಪೌರಾಯುಕ್ತೆ ಶುಭಾ ಭಾಗವಹಿಸಿದ್ದರು. 
 
ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ: ರಾಮನಗರ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ, ಕಟ್ಟಡ ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅನಿತಾ ಶನಿವಾರ ಭೂಮಿ ಪೂಜೆ ನೆರವೇರಿಸಿದರು. ತಾಲೂಕಿನ ಕೆಂಪನಹಳ್ಳಿ ಗೇಟ್‌ ಬಳಿ 2.30 ಕೋಟಿ ರೂ. ವೆಚ್ಚದ ಕೆಂಜಿಗನಹಳ್ಳಿ ಕಾಲೋನಿ ಮೂಲಕ ಕೆಂಪನಹಳ್ಳಿ ಬಿಎಂ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕರು,

ಬಾಲಕರ ಸರ್ಕಾರ ಪದವಿ ಪೂರ್ವ ಕಾಲೇಜು ಎ ಮತ್ತು ಬಿ ಬ್ಲಾಕ್‌ಗಳ ಕಟ್ಟಡ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 9 ಕೋಟಿ 90 ಲಕ್ಷ ರೂ. ವೆಚ್ಚದಲ್ಲಿ ಎ ಮತ್ತು ಬಿ ಬ್ಲಾಕ್‌ಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಮಹಿಳಾ ಸರ್ಕಾರಿ ಪಾಲಿಟೆಕ್ನಿಕ್‌ನ 3 ಮತ್ತು 4ನೇ ಮಹಡಿ ಹಾಗೂ ವಸತಿ ನಿಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರೆವೇರಿಸಿದರು. 

ಜಾನಪದ ಲೋಕದಲ್ಲಿ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ ಲೈಬ್ರರಿ ಹಾಗೂ ಕಾರ್ಯಾಗಾರ ಉದ್ಘಾಟಿಸಿದರು. ನಗರಸಭೆಯ 31ನೇ ವಾರ್ಡ್‌ನ ಮಾರಮ್ಮನ ದೇವಾಲಯದ ಬಳಿ ವಾಟರ್‌ ಟ್ಯಾಂಕ್‌, ರಾಯರದೊಡ್ಡಿ ಬಸ್‌ ನಿಲ್ದಾಣ ಸೇರಿದಂತೆ ಕೆಲ ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.