ಲೋಕಸಭೆಗೆ ಈ ಚುನಾವಣೆ ದಿಕ್ಸೂಚಿ ಅಲ್ಲ: ಸದಾನಂದ ಗೌಡ
Team Udayavani, Oct 26, 2018, 6:30 AM IST
ರಾಮನಗರ: ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಗಳು ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪ್ರತಿಪಾದಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆಪರೇಷನ್ ಕಮಲದ ಅಗತ್ಯವಿಲ್ಲ. ಮೈತ್ರಿ ಪಕ್ಷಗಳೆರಡೂ ತಾವೇ ಖುದ್ದು ಆಪರೇಷನ್ ಮಾಡಿಕೊಳ್ತಾರೆ. ಬಳಿಕ, ಒಮ್ಮೇಲೆ ವಿಭಜನೆಯಾಗುತ್ತದೆ. ತನ್ಮೂಲಕ ಸರ್ಕಾರ ತಂತಾನೆ ಪತನವಾಗಲಿದೆ. ಉಪಚುನಾವಣೆ ನಂತರ ಮೈತ್ರಿ ಸರ್ಕಾರ ಪತನ ಖಚಿತ. ಮೈತ್ರಿ ಸರ್ಕಾರ ಪತನಗೊಂಡ ನಂತರ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ರಾಜಕೀಯದ ಹೊಸ ಅಧ್ಯಾಯ ಆರಂಭವಾಗಲಿದೆ ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಇಬ್ಬರೂ ಸಮಯಸಾಧಕರು. ಅವರಪ್ಪನ ಆಣೆಗೂ ಕುಮಾರಸ್ವಾಮಿ ಸಿಎಂ ಆಗೊಲ್ಲ ಎಂದಿದ್ದ ಸಿದ್ದರಾಮಯ್ಯ, ಅವರಪ್ಪನ (ದೇವೇಗೌಡರು) ಮೂಲಕ ತಬ್ಬಿಕೊಂಡಿದ್ದಾರೆ. ಈ ಎಲ್ಲಾ ನಾಟಕವನ್ನು ಜನರು ನೋಡುತ್ತಿದ್ಧಾರೆ. ಸೂಕ್ತ ಕಾಲದಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್