ಗಾರ್ಮೆಂಟ್ಸ್‌ ಫ್ಯಾಕ್ಟರಿ ಸ್ಥಾಪನೆಗೆ ಚಿಂತನೆ

ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಸೃಜಿಸುವುದೇ ಮುಖ್ಯ ಉದ್ದೇಶ: ಶಾಸಕಿ ಅನಿತಾ ಕುಮಾರಸ್ವಾಮಿ

Team Udayavani, Jun 25, 2019, 12:04 PM IST

RN-TDY-1..

ರಾಮನಗರದ ಬೀಡಿ ಕಾರ್ಮಿಕರ ಕಾಲೋನಿಯಲ್ಲಿ ಶಾಸಕಿ ಅನಿತಾ ಮೂಲ ಸೌಕರ್ಯಗಳನ್ನು ವೃದ್ಧಿಸುವ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರೆವೇರಿಸಿದರು.

ರಾಮನಗರ: ನಿರುದ್ಯೋಗಿ ಮಹಿಳೆಯರಿಗೆ ಉದ್ಯೋ ಗ ಸೃಜಿಸುವ ಸಲುವಾಗಿ ನಗರ ವ್ಯಾಪ್ತಿಯಲ್ಲೇ ಗಾರ್ಮೆಂಟ್ಸ್‌  ಫ್ಯಾಕ್ಟರಿ ಆರಂಭಕ್ಕೆ ತಾವು ಚಿಂತನೆ ನಡೆಸಿರುವುದಾಗಿ ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದರು.

ನಗರದ ಬೀಡಿ ಕಾಲೋನಿಯಲ್ಲಿ ಕೋಟಿ ರೂ. ವೆಚ್ಚದ ಮೂಲ ಸೌಕರ್ಯಗಳನ್ನು ವೃದ್ಧಿಸುವ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರೆವೇರಿಸಿದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಗಳಾಗುವುದರ ಜೊತೆಗೆ ಕುಟುಂಬ ಪೋಷಣೆಗೂ ಸಹಕಾರ ನೀಡಬೇಕಾಗಿದೆ. ಹೀಗಾಗಿ ನಗರ ವ್ಯಾಪ್ತಿಯಲ್ಲಿ ಗಾರ್ಮೆಂಟ್ಸ್‌, ಫ್ಯಾಕ್ಟರಿ ಸ್ಥಾಪನೆಗೆ ತಾವು ಉದ್ದೇಶಿಸಿರುವುದಾಗಿ ಹೇಳಿದರು. ಈಗಾಗಲೇ ತಾವು ಕಂಪನಿಯೊಂದರ ಜೊತೆ ಮಾತುಕತೆ ನಡೆಸಿದ್ದು, ನಗರ ವ್ಯಾಪ್ತಿಯಲ್ಲಿ ಸ್ಥಳದ ಹುಡುಕಾಟ ನಡೆದಿದೆ ಎಂದರು.

10 ಕೋಟಿ ರೂ.. ಅನುದಾನ ತಂದಿದ್ದೇನೆ: ಅಲ್ಪಸಂ ಖ್ಯಾತ ಸಮುದಾಯದವರೇ ಹೆಚ್ಚು ವಾಸಿಸುವ ವಾರ್ಡುಗಳಲ್ಲಿ ಮೂಲ ಸೌಕರ್ಯ ಒದಗಿಸಲು ತಾವು ಶಾಸಕರಾದ ನಂತರ 10 ಕೋಟಿ ರೂ. ಅನುದಾನ ತಂದಿರುವುದಾಗಿ ತಿಳಿಸಿ, ಅಲ್ಪಸಂಖ್ಯಾತರ ಇಲಾಖೆಯ ಮೂಲಕವೇ ಅನುದಾನ ಬಿಡುಗಡೆಯಾಗಿದೆ. ಲೋಕ ಸಭಾ ಚುನಾವಣೆ ಇದ್ದಿದ್ದರಿಂದ ಕಾಮಗಾರಿಗಳಿಗೆ ಚಾಲನೆ ಸಿಕ್ಕಿರಲಿಲ್ಲ. ಇದೀಗ ಅಗತ್ಯ ಕಾಮಗಾರಿಗಳಿಗೆ ಚಾಲನೆ ಸಿಗಲಿದೆ. 10 ಕೋಟಿ ರೂ. ಅನುದಾನದ ಪೈಕಿ 1 ಕೋಟಿ ರೂ. ಬೀಡಿ ಕಾರ್ಮಿಕರ ಕಾಲೋನಿಯ ಬಳಕೆಗೆ ಕೊಡಲಾಗಿದೆ ಎಂದು ತಿಳಿಸಿದರು.

3 ಸಾವಿರ ನಿವೇಶನ ವಿತರಣೆ ಗುರಿ: ಕ್ಷೇತ್ರ ವ್ಯಾಪ್ತಿ ಯಲ್ಲಿ ನಿವೇಶನ ರಹಿತ ಕುಟುಂಬಗಳಿಗೆ 3 ಸಾವಿರ ನಿವೇಶನಗಳನ್ನು ವಿತರಿಸುವ ಗುರಿ ಹೊಂದಿರುವುದಾಗಿ, 5 ಸಾವಿರ ಮನೆ ರಹಿತ ಕುಟುಂಬಗಳಿಗೆ ಮನೆ ಕಟ್ಟಿಸಿ ಕೊಡಲು ಸಹ ತಾವು ಉದ್ದೇಶಿರಿಸುವುದಾಗಿ ತಿಳಿಸಿದರು.

ಶಾದಿ ಮಹಲ್ ಕಾಮಗಾರಿ ಪೂರ್ಣಗೊಳಿಸಲು ಸಹಕಾರ: ಬೀಡಿ ಕಾರ್ಮಿಕರ ಕಾಲೋನಿಯಲ್ಲಿ ನಿರ್ಮಾಣ ಪೂರ್ಣ ಹಂತದಲ್ಲಿರುವ ಶಾದಿ ಮಹಲ್ ಕಟ್ಟಡ ಪೂರ್ಣಗೊಳಿಸಲು ನೆರವು ಬೇಕು ಎಂದು ಆ ಭಾಗದ ಜನತೆ ಬೇಡಿಕೆ ಇಟ್ಟಾಗ ಪ್ರತಿಕ್ರಿಯಿಸಿದ ಶಾಸಕರು ಅಗತ್ಯ ಸಹಕಾರವನ್ನು ಕೊಡುವುದಾಗಿ ಭರವಸೆ ನೀಡಿದರು.

ಹಕ್ಕು ಪತ್ರ ಕೊಡಿಸಲು ಮನವಿ: 2005ರಲ್ಲಿ ಎಚ್.ಡಿ. ಕುಮಾರಸ್ವಾಮಿ ಮತ್ತು ಧರಂಸಿಂಗ್‌ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಬೀಡಿ ಕಾಲೋನಿ ನಿರ್ಮಾ ಣಕ್ಕೆ ಅನುಮತಿ ಸಿಕ್ಕಿದೆ. ಕಾಲೋನಿಯಲ್ಲಿ ಸದ್ಯ 489 ಮನೆ ನಿರ್ಮಾಣವಾಗಿದೆ. ರಾಜೀವ್‌ ಗಾಂಧಿ ಹೌಸಿಂಗ್‌ ಕಾರ್ಪೊರೇಷನ್‌ ಆಶ್ರಯದಲ್ಲಿ ಮನೆಗಳು ನಿರ್ಮಾಣವಾಗಿವೆ. ಇಷ್ಟು ವರ್ಷಗಳಾದರೂ ಸದರಿ ಮನೆಗಳು ಕಾರ್ಪೊರೇಷನ್‌ನ ಎಂ.ಡಿ. ಅವರ ಹೆಸರಿ ನಲ್ಲೇ ಇದೆ. ಮನೆಗಳಲ್ಲಿ ವಾಸಿಸುವ ಕುಟುಂಗಳಿಗೆ ಮನೆ ಒಡೆತನದ ಹಕ್ಕು ಪತ್ರಗಳು ಸಿಕ್ಕೇ ಇಲ್ಲ ಎಂದ ಅವರು ಬೇಸರ ವ್ಯಕ್ತಪಡಿಸಿದರು. ನಗರಸಭೆಯ ಮೂಲಕ ಹಕ್ಕು ಪತ್ರಗಳನ್ನು ಬಡ ಕುಟುಂಬಗಳಿಗೆ ಕೊಡಿಸಿ ಎಂದು ಶಾಸಕರಿಗೆ ಮನವಿ ಮಾಡಿದರು.

ಬೀಡಿ ಕಾರ್ಮಿಕರಿಂದ ಬೇಡಿಕೆ: ಬೀಡಿ ಕಾಲೋನಿ ಯಲ್ಲಿ 489 ಬೀಡಿ ಕಾರ್ಮಿಕರಿಗೆ ಮನೆ ಸಿಕ್ಕಿದೆ. ಆದರೆ ಇನ್ನು 1693 ಕುಟುಂಬಗಳಿಗೆ ಸೂರಿಲ್ಲದೆ ನರಳುತ್ತಿ ದ್ದಾರೆ. ಈ ಕುಟುಂಬಗಳಿಗೆ ನಿವೇಶನಗಳನ್ನು ವಿತರಿ ಸಲು ಕನಿಷ್ಠ 25 ಎಕರೆ ಭೂಮಿ ಬೇಕಾಗಿದೆ. ಭೂಮಿ ಕೊಡಿಸಿ, ಮನೆ ನಿರ್ಮಿಸಿಕೊಳ್ಳಲು ಸಹಕಾರಕ್ಕೆ ಜಿಯಾ ವುಲ್ಲ ಬೀಡಿ ಕಾರ್ಮಿಕರ ಪರ ಬೇಡಿಕೆ ಇಟ್ಟರು. ಬೀಡಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ಕೊಟ್ಟ ಶಾಸಕರು ಸ್ಥಳೀಯರಿಂದ ಅಭಿನಂದನೆ ಸ್ವೀಕರಿಸಿದರು.

ಜೆಡಿಎಸ್‌ ಪ್ರಮುಖರಾದ ರಾಜಶೇಖರ್‌, ಬಿ.ಉಮೇಶ್‌, ಗೇಬ್ರಿಯಲ್, ಫ‌ರ್ವಿಜ್‌ ಪಾಷಾ ಜಯಕುಮಾರ್‌ ಇತರರು ಇದ್ದರು.

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.