ಜಿಲ್ಲಾದ್ಯಂತ ಮಹಾಶಿವರಾತ್ರಿಗೆ ಭಕ್ತಿಯ ಮಹಾಪೂರ
Team Udayavani, Mar 5, 2019, 7:45 AM IST
ರಾಮನಗರ: ಜಿಲ್ಲಾದ್ಯಂತ ಸೋಮವಾರ ಮಹಾಶಿವರಾತ್ರಿ ಹಬ್ಬವನ್ನು ಅತ್ಯಂತ ಭಕ್ತಿ ಮತ್ತು ಶ್ರದ್ದೆಯಿಂದ ಆಚರಿಸಲಾಯಿತು. ಜಿಲ್ಲೆಯ ಪ್ರಮುಖ ಶಿವನ ದೇವಾಲಯಗಳಿಗೆ ಬೆಳ್ಳಂಬೆಳಿಗ್ಗೆಯಿಂದಲೇ ಭೇಟಿ ಕೊಟ್ಟ ಭಕ್ತರು ವಿಶೇಷ ಪೂಜಾ ಕೈಂಕರ್ಯಗಳಲ್ಲಿ ತೊಡಗಿಸಿಕೊಂಡರು.
ಶಿವರಾತ್ರಿ ಉಪವಾಸ ಮತ್ತು ಜಾಗರಣೆಯ ದಿನ. ಹೀಗಾಗಿ ಶಿವ ದೇವಾಲಯಗಳು ಸೇರಿದಂತೆ ಶಿವನನ್ನು ಪ್ರತಿಷ್ಠಾಪಿಸಿರುವ ದೇವಾಲಯಗಳಲಿ ಸೋಮವಾರ ರಾತ್ರಿ ಅಭಿಷೇಕ, ಪೂಜೆ ಮುಂತಾದ ಧಾರ್ಮಿಕ ವಿಧಿವಿಧಾನಗಳನ್ನು ಹಮ್ಮಿಕೊಂಡಿವೆ.
ರಾಮನಗರ ಪಟ್ಟಣದಲ್ಲಿ ಶ್ರೀ ಅರ್ಕೇಶ್ವರ ಸ್ವಾಮಿ ದೇವಾಲಯ, ಚನ್ನಪಟ್ಟಣದಲ್ಲಿ ಕೋಟೆ ಕಾಶಿವಿಶ್ವೇಶ್ವರ ದೇವಾಲಯ, ಮಾಗಡಿಯ ಗವಿ ಗಂಗಾಧೇಶ್ವರ ಸ್ವಾಮಿ, ಕನಕಪುರ ತಾಲೂಕು ಹಿರೇಮಡಿವಾಳ ಕ್ಷೇತ್ರದ ಶಿವನಾಂಕರೇಶ್ವರ ದೇವಾಲಯ, ಶಿವಗಿರಿ ಕ್ಷೇತ್ರದ ಈಶ್ವರ ದೇವಾಲಯಗಳಿಗೆ ಭಕ್ತ ಸಮೂಹ ನೂರಾರು ಸಂಖ್ಯೆಯಲ್ಲಿ ಭೇಟಿ ಕೊಟ್ಟು ತಮ್ಮ ಭಕ್ತಿ ಸಮರ್ಪಿಸಿಕೊಂಡರು.
ರಾಮನಗರದಲ್ಲಿ ಜಿಲ್ಲಾ ಕೇಂದ್ರ ರಾಮನಗರದಲ್ಲಿ ಪಶ್ಚಿಮಾಭಿಮುಖೀಯಾಗಿ ಅರ್ಕಾವತಿ ನದಿ ದಂಡೆಯ ಮೇಲೆ ನೆಲೆಸಿರುವ ಶ್ರೀ ಅರ್ಕೇಶ್ವರ ಸ್ವಾಮಿಯ ಸನ್ನಿದಿಯನ್ನು ಕಾಶಿಯಲ್ಲಿ ವಿಶ್ವೇಶ್ವರನಾಥನನ್ನು ದರ್ಶಿಸಿದಷ್ಟೇ ಭಾಗ್ಯ ದೊರೆಯುತ್ತದೆ ಎಂಬ ಪ್ರತೀತಿ ಇದೆ. ಬೆಳಿಗ್ಗೆಯಿಂದಲೇ ಭಕ್ತರು ಸರದಿ ಸಾಲಿನಲ್ಲಿ ನಿಂತು ಈಶ್ವರನ ದರ್ಶನ ಪಡೆದು ಕೃತಾರ್ಥರಾದರು.
ನಗರದ ಅರಳೇಪೇಟೆಯಲ್ಲಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯ, ಎಂ.ಜಿ.ರಸ್ತೆಯ ಶ್ರೀ ಬಸವೇಶ್ವರ ದೇವಾಲಯ, ಐಜೂರಿನ ಶ್ರೀ ಮಲ್ಲೇಶ್ವರಸ್ವಾಮಿ ದೇವಾಲಯಗಳು ಸೇರಿದಂತೆ ತಾಲೂಕಿನ ವಿವಿದೆಡೆ ಇರುವ ಶಿವ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ತಾಲೂಕಿನ ಅವ್ವೆàರಹಳ್ಳಿಯ ಎಸ್ ಆರ್ ಎಸ್ ಬೆಟ್ಟದಲ್ಲಿಯೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಭಕ್ತರಿಂದಲೇ ಶಿವನಿಗೆ ಬಿಲ್ವಾರ್ಚನೆ: ಇಲ್ಲಿನ ಎಂ.ಜಿ.ರಸ್ತೆಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವಾಲಯದಲ್ಲಿ ರುವ ಶ್ರೀ ಜಲಕಂಠೇಶ್ವರ ಸ್ವಾಮಿಗೆ ಭಕ್ತರೇ ಸ್ವಯಂ ಬಿಲ್ವಾರ್ಚನೆ ನೆರೆವೇರಿಸುವ ಅವಕಾಶವನ್ನು ಶ್ರೀ ವಾಸವಿ ಮಹಿಳಾ ಸಂಘ ಕಲ್ಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ