ಟೊಮೆಟೋ ಬೆಲೆ ದಿಢೀರ್‌ ಕುಸಿತ: ರೈತರು ಕಂಗಾಲು


Team Udayavani, Feb 1, 2018, 5:49 PM IST

565248.jpg

ಮಾಗಡಿ: ಟೊಮೆಟೋ ಸೇರಿದಂತೆ ಇತರೆ ತರಕಾರಿ ಬೆಲೆ ದಿಢೀರ್‌ ಕುಸಿತದಿಂದ ಟೊಮೆಟೋ ಬೆಳೆಗಾರರು ಕಂಗಾಲಾಗಿದ್ದಾರೆ. ತಾಲೂಕಿನ ಬಹುತೇಕ ರೈತರು ತರಕಾರಿ ಬೆಳೆ ಬೆಳೆದು ಬದುಕಿನ ಬಂಡಿ ಸಾಗಿಸುತ್ತಿದ್ದು, ತೋಟಗಾರಿಕೆ ಬೆಳೆ ಬೆಳೆದು ಮಾರುಕಟ್ಟೆ ತಂದರೆ ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.

10 ಕೆ.ಜಿ ಟೊಮೆಟೋ ಬ್ಯಾಗ್‌ ಕೇವಲ 10ರಿಂದ 20 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಖರೀದಿಸಿದ ವ್ಯಾಪಾರಿಗಳು
10 ರೂ.ಗೆ ಮೂರು ಕೆಜಿ ಎಂದು ಕೂಗಿ ಮಾರಾಟ ಮಾಡುತ್ತಿದ್ದಾರೆ. ಹುರುಳಿಕಾಯಿ ಕೆಜಿಯೊಂದಕ್ಕೆ 20 ರೂ., ಅಲೂಗಡ್ಡೆ, ಬದನೆಕಾಯಿ ಕೆ.ಜಿಗೆ 10 ರೂ., ಮೂಲಂಗಿ ಕಟ್ಟು 10 ರೂ., ದಂಟಿನ ಸೊಪ್ಪು, ಕೊತ್ತಂಬರಿ, ಸಬ್ಬಕ್ಕಿ ಸೊಪ್ಪು ಕಟ್ಟು 10 ರೂ.ಗೆ ಮಾರಾಟ ಮಾಡಲಾಗುತ್ತಿದೆ.

 ರೈತರು ಭೂಮಿ ಹದ ಮಾಡಿಕೊಂಡು ವಿವಿಧ ತರಕಾರಿ ಬೆಳೆ, ಟೊಮೆಟೋ ಸಸಿ ನೆಟ್ಟು ಮೂರು ತಿಂಗಳುಗಳ ಕಾಲ ಪೋಷಣೆ ಮಾಡಿ ಟೊಮೆಟೋ ಬೆಳೆದರೆ ಖರೀದಿಸುವವರಿಲ್ಲದೆ ತೋಟದಲ್ಲೇ ಬಿಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರಣ ದಿನಕ್ಕೆ 500 ರೂ. ಕೂಲಿ ಕೊಟ್ಟು ಟೊಮೆಟೋ ಹಣ್ಣನ್ನು ಬಿಡಿಸಿ ಮಾರುಕಟ್ಟೆಗೆ ತಂದು ಮಾರಾಟ ಮಾಡಿದರೆ ಕನಿಷ್ಠ ಟೊಮೆಟೋ ಬಿಡಿಸಿದ ಕೂಲಿ ಸಿಗುತ್ತಿಲ್ಲ. ಹುರುಳಿಕಾಯಿ ಇತರೆ ತರಕಾರಿಯ ಬೆಲೆಯ ಗತಿಯೂ ಇದಕ್ಕೆ ಹೊರತಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. 

 ಇದರಿಂದ ರೈತರು ಕಂಗಾಲಾಗಿದ್ದು, ಬ್ಯಾಂಕ್‌ ಗಳಲ್ಲಿ ಸಾಲ ಮಾಡಿ ತೋಟಗಾರಿಕೆ ಬೆಳೆದು ಜೀವನ ನಡೆಸಲು ಆಗದ ಪರಿಸ್ಥಿತಿ ರೈತರದಾಗಿದೆ. ಹೀಗಾದರೆ ಜೀವನವೂ ಕಷ್ಟ, ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಇನ್ನೂ ಕಷ್ಟ. ಪಡೆದ ಸಾಲ ತೀರಿಸಲಾಗುತ್ತಿಲ್ಲ. ತುಂಬ ಕಷ್ಟ ಹೀಗಾದರೆ ರೈತರ ಬದುಕಿನ ಬಂಡಿ ಅಧೋಗತಿ ತಲುಪಿದೆ. 

ಸರ್ಕಾರ ಬೆಂಬಲ ಬೆಲೆ ನೀಡದಿರುವುದೇ ಕಾರಣ: ತಮ್ಮನ್ನಾಳುವ ಸರ್ಕಾರಗಳು ರೈತರಿಗೆ ಅನುಕೂಲವಾಗುವಂತ ಯಾವುದೇ ಬೆಂಬಲ ಬೆಲೆ ನಿಗದಿಯ ಯೋಜನೆಗಳನ್ನು ರೂಪಿಸದಿರುವುದೇ ರೈತರ ನಷ್ಟಕ್ಕೆ ಕಾರಣವಾಗಿದೆ ಎಂದು ರೈತ ಕಲ್ಲೂರು ರಂಗನಾಥ್‌ ಅಳಲನ್ನು ತೋಡಿಕೊಂಡಿದ್ದಾರೆ. ಎರಡು ಎಕರೆಯಲ್ಲಿ ಟೊಮೆಟೋ ಬೆಳೆ ಇಟ್ಟಿದ್ದೇನೆ. ಪ್ರತಿದಿನ ಎರಡು ಟ್ರ್ಯಾಕ್ಟರ್‌ ಟೊಮೆಟೋ ಬಿಡಿಸಿ ಮಾರುಕಟ್ಟೆಗೆ ತಂದು ಮಾರಾಟ ಮಾಡಿದರೆ ಕನಿಷ್ಠ ಟ್ರ್ಯಾಕ್ಟರ್‌ ಡಿಸೇಲ್‌ಗೆ ಹಣ ಸಿಗುತ್ತಿಲ್ಲ ಎಂದ ಮೇಲೆ ಟೊಮೆಟೋ ಎಲ್ಲಿಗೆ ಕೊಂಡೊಯ್ಯಬೇಕು. ಕೂಲಿಯನ್ನು ಸಹ ಸಾಲ ಮಾಡಿ ಕೊಟ್ಟಿದ್ದೇವೆ ಎಂದ ಮೇಲೆ ಟೊಮೆಟೋ ಏಕೆ ಬಿಡಿಸಬೇಕೆಂದು ಪ್ರಶ್ನಿಸಿದರು. 

ಕೂಲಿಯಾದರೂ ಸಿಗುತ್ತಿಲ್ಲ: ಟೊಮೆಟೋ ಹಣ್ಣನ್ನು ಗಿಡದಿಂದ ಬಿಡಿಸುವುದನ್ನೇ ನಿಲ್ಲಿಸಿದ್ದೇವೆ. ಕನಿಷ್ಠ ಹಣ್ಣು ಕೀಳುವ
ಕೂಲಿಯಾದರೂ ಉಳಿಯುತ್ತದೆ ದಾನ, ಧರ್ಮ ಮಾಡಿದರೆ ಒಳ್ಳೆಯದಾದರೂ ಆಗುತ್ತದೆ ಎಂದು ಯಾರದರೂ ತೋಟಕ್ಕೆ
ಬಂದು ಎಷ್ಟು ಬೇಕಾದರೂ ಟೊಮೆಟೋ ಕಿತ್ತು ಕೊಂಡು ಹೋಗಿ ತಿನ್ನಲಿ ಎಂದು ಸುಮ್ಮನಾಗಿದ್ದೇನೆ ಎಂದು ಬೇಸರ
ವ್ಯಕ್ತಪಡಿಸಿದರು. 

ಸರ್ಕಾರ ಇನ್ನಾದರೂ ಎಚ್ಚೆತ್ತು ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿಪಡಿಸದಿದ್ದರೆ ರೈತರ ಬದುಕು ನಶಿಸಿ ಹೋಗಲಿದೆ ಎಂಬ ಆತಂಕವನ್ನು ಕಲ್ಲೂರು ರಂಗನಾಥ್‌ ವ್ಯಕ್ತಪಡಿಸಿದರು ತಮ್ಮಂತೆ ತಮ್ಮ ಮಕ್ಕಳು ಕಷ್ಟ ಅನುಭವಿಸುವುದು ಬೇಡ. ಎಲ್ಲಾದರೂ ನಗರ ಪ್ರದೇಶಕ್ಕೆ ಹೋಗಿ ಕೂಲಿನಾಲಿ ಮಾಡಿ ಬದುಕು ಕಟ್ಟಿಕೊಳ್ಳಲಿ ಎಂದು ಯಾವ ರೈತನೂ ತೋಟಗಾರಿಕೆ ಬೆಳೆ ಬೆಳೆಯಲು ಮುಂದಾಗುತ್ತಿಲ್ಲ. ತನ್ನಂತೆ ಅನೇಕ ರೈತರು ಬೆಳೆದ ಹಣ್ಣು, ತರಕಾರಿ, ಇತರೆ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿಪಡಿಸದೆ ಇರುವುದೇ ರೈತರು ನಷ್ಟಕ್ಕೊಳಗಾಗುತ್ತಿರುವುದು, ಆತ್ಮಹತ್ಯೆಗೆ ದಾರಿ ಹಿಡಿಯುತ್ತಿರುವುದು. ಕನಿಷ್ಠ ಜೀವನದ ಆಧಾರಕ್ಕಾದರೂ ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದ ಮೇಲೆ ಬೆಳೆ ಏಕೆ ಬೆಳೆಯಬೇಕು. 
ರಂಗನಾಥ್‌, ರೈತ, ಕಲ್ಲೂರು

ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.