ಸಮಸ್ಯೆ ಬಗೆಹರಿಸದೆ ಕಾಲ ಕಳೆಯುತ್ತಿರುವ ಬಿಜೆಪಿ: ಆರೋಪ


Team Udayavani, Nov 29, 2020, 11:34 AM IST

ಸಮಸ್ಯೆ ಬಗೆಹರಿಸದೆ ಕಾಲ ಕಳೆಯುತ್ತಿರುವ ಬಿಜೆಪಿ: ಆರೋಪ

ರಾಮನಗರ: 20 ದಿನಗಳಿಂದ 3 ಸಾವಿರಕ್ಕೂ ಅಧಿಕ ಕಾರ್ಮಿಕರು ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಸರ್ಕಾರ ಸಂಪುಟ ವಿಸ್ತರಣೆ, ಜಾತಿ ಆಧಾರದಲ್ಲಿ ನಿಗಮ, ಮಂಡಳಿ ಸ್ಥಾಪನೆಯಲ್ಲೇ ಮುಳುಗಿದೆ ಎಂದು ಮಂಡ್ಯ ಜಿಲ್ಲೆ ನಾಗಮಂಗಲ ಶಾಸಕ ಸುರೇಶ್‌ ಗೌಡ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.

ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಟೊಯೋಟ ಕಿರ್ಲೋಸ್ಕರ್ ‌ಮೋಟಾರ್‌ ಕಂಪನಿಯ ನೌಕರರು ನಡೆಸುತ್ತಿರುವ ಬೆಂಬಲ ವ್ಯಕ್ತಪ ಡಿಸಿ ಅವರು ಮುಷ್ಕರ ಸ್ಥಳಕ್ಕೆ ಭೇಟಿ ಕೊಟ್ಟು ಮಾತನಾಡಿದರು. ಬಿಜೆಪಿ ಸರ್ಕಾರ ಕಾರ್ಮಿಕರ ಹಿತ ಕಾಪಾಡುವಲ್ಲಿ ವಿಫ‌ಲವಾಗಿದೆ ಎಂದರು.

ರಾಜ್ಯ ಕಾರ್ಮಿಕ ಮತ್ತು ಕೈಗಾರಿಕಾ ಸಚಿವರು ಮೌನಕ್ಕೆ ಜಾರಿದ್ದಾರೆ. ಡಿಸಿಎಂ ಅಶ್ವಥ್‌ನಾರಾಯಣ ಅವರು ಕಾಟಾಚಾರಕ್ಕೆ ಸಂಧಾನ ಸಭೆ ನಡೆಸಿ ಕೈತೊಳೆದುಕೊಂಡಿದ್ದಾರೆ. ಕಾರ್ಮಿಕರು ಮತ್ತು ಕಂಪೆನಿಯ ಆಡಳಿತ ವರ್ಗದ ನಡುವೆ ಸಾಮರಸ್ಯ ಮೂಡುತ್ತಿಲ್ಲ. ತಾವು ಸಚಿವರಾಗಲು ಬಿಜೆಪಿ ಶಾಸಕರು ದುಂಬಾಲು ಬಿದ್ದು ಲಾಬಿ ನಡೆಸುತ್ತಿರುವುದರಿಂದ ಬಿಎಸ್‌ವೈ ಸರ್ಕಾರ ಗೊಂದಲದಲ್ಲಿ ಮುಳು ಗಿದೆ. ಇನ್ನು ಕಾರ್ಮಿಕರು ಇವರಿಗೆ ನೆನೆಪು ಹೇಗೆ ಬರಬೇಕು ಎಂದರು.

ಇದನ್ನೂ ಓದಿ : ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

ಟೊಯೋಟಾ ತನ್ನ ಕಾರ್ಮಿಕರನ್ನು ಅಮಾನತ್ತಿಲ್ಲಿಟ್ಟಿರುವುದು ಸರಿಯಲ್ಲ. ಕಾರ್ಮಿಕ ಸಂಘದಒಗ್ಗಟ್ಟನ್ನುಮುರಿಯಲುಆಡಳಿತ ಮಂಡಳಿಗೆ ಸಾಧ್ಯವಾಗಿಲ್ಲ. ಟೊಯೋಟಾಗೆ ಕಾರ್ಮಿಕರ ಶಕ್ತಿ ಏನೆಂದು ಅರಿವಾಗಿದೆ ಎಂದರು. ಇನ್ನಾದರೂ ಆಡಳಿತ ವರ್ಗ ಹಠಮಾರಿ ಧೋರಣೆಯನ್ನು ಬಿಟ್ಟು ಕಾರ್ಮಿಕರ ಕನಿಷ್ಠಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ಮಂಡ್ಯ ಕಾರ್ಮಿಕರೂ ಇದ್ದಾರೆ: ಕಾರ್ಮಿಕರ ಹೋರಾಟದ ಬಗ್ಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆ ನಡೆದಿದೆ. ಮುಂದಿನ ದಿನಗಳಲ್ಲಿ ಕಾರ್ಮಿಕರ ಹೋರಾಟಕ್ಕೆ ನಮ್ಮ ಪಕ್ಷ ಕೈಜೋಡಿಸಲಿದೆ. ಕಾರ್ಖಾನೆಯಲ್ಲಿ ಮಂಡ್ಯ ಜಿಲ್ಲೆಯ ಕಾರ್ಮಿಕರು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಅವರಿಗೆ ಅನ್ಯಾಯವಾದರೆ ಮಂಡ್ಯದ ಜನ ಕ್ಷಮಿಸುವುದಿಲ್ಲ. ಕಾರ್ಮಿಕರ ಕುಟುಂಬಗಳ ಜತೆಗೆ ಜನರು ಬೀದಿಗಿಳಿದರೆ ಮುಂದಾಗುವ ಸಮಸ್ಯೆಗೆ ಆಡಳಿತ ಮಂಡಳಿ ಹೊಣೆಯಾಗಲಿದೆ ಎಂದು ಎಚ್ಚರಿಸಿದರು. ಟಿಕೆಎಂ ಕಾರ್ಮಿಕ ಸಂಘದ ಅಧ್ಯಕ್ಷ

ಪ್ರಸನ್ನ ಕುಮಾರ್‌ ಚಕ್ಕೆರೆ ಮಾತನಾಡಿ, ನವ ಜೀವನ ಎಂಬ ಸ್ವಯಂ ನಿವೃತ್ತಿ ಯೋಜನೆಯನ್ನು ಜಾರಿಗೆತಂದಿರುವ ಕಂಪೆನಿ ಈಗಾಗಲೇ 1 ಸಾವಿರಕ್ಕೂ ಅಧಿಕನೌಕರರನ್ನು ಮನೆಗೆ ಕಳುಹಿಸಿದೆ. ಕಾರ್ಮಿಕರನ್ನು ಹಿಂಡಿ ಹಿಪ್ಪೆ ಮಾಡಿ ನಂತರ ಬೀದಿಗೆ ತಳ್ಳುವ ಹೊಸ ಪದ್ದತಿಯನ್ನು ಹುಟ್ಟುಹಾಕಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ರಾಜ್ಯೋತ್ಸವ ಆಚರಣೆ: ಮುಷ್ಕರ ನಿರತ ಕಾರ್ಮಿಕರು ಕನ್ನಡ ರಾಜ್ಯೋತ್ಸವ ಆಚರಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಸುರೇಶ್‌ಗೌಡ ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಎಚ್‌ ಎಎಲ್‌ ಕಾರ್ಮಿಕ ಸಂಘದ ಪದಾಧಿಕಾರಿಗಳು, ಕರವೇ ಪದಾಧಿಕಾರಿಗಳು ಹಾಗೂ ಕಾರ್ಮಿಕರು ಇದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

ಮೊದಲಿನಿಂದಲೂ ಗೌಡರ ಕುಟುಂಬ ಡಿಕೆಶಿ ಮೇಲೆ ಹಗೆ ಸಾಧಿಸುತ್ತಿದೆ: ಸುರೇಶ್‌

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

Channapatana : ಬೆಳಗ್ಗೆ ಸತ್ತವನು ಮಧ್ಯಾಹ್ನ ಎದ್ದು ಕುಳಿತು ಸಂಜೆ ಕಣ್ಮುಚ್ಚಿದ!

ramangar

Ramanagara: ಬೈಕ್ ಅಪಘಾತ, ಕೆಎಸ್ಆರ್ ಟಿಸಿ ಕಂಡಕ್ಟರ್ ಸಾವು

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

Karnataka; ನೀರಿಲ್ಲ, ಬಿಸಿಲಿನ ಝಳ: ಎರಡು ಕಾಡಾನೆ ಸಾವು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.