ಟೊಯೊಟಾ ಕಾರ್ಖಾನೆಯಲ್ಲಿ 45 ಕಾರ್ಮಿಕರ ವಜಾ

66 ಮಂದಿ ಅಮಾ ನ ತಾಗಿದ್ದ ಕಾರ್ಮಿಕರ ಪೈಕಿ 45 ಜನ ವಜಾ

Team Udayavani, Oct 3, 2021, 4:03 PM IST

ಟೊಯೊಟಾ ಕಾರ್ಖಾನೆಯಲ್ಲಿ 45 ಕಾರ್ಮಿಕರ ವಜಾ

ರಾಮನಗರ: 2020ರ ನವೆಂಬರ್‌ನಲ್ಲಿ ತಾಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್‌ ಮೋಟಾರ್‌ ಕಂಪನಿಯ (ಟಿಕೆಎಂ) ಕಾರ್ಮಿಕರ ಮುಷ್ಕರ ಮತ್ತು ಲಾಕೌಟ್‌ ನಡೆದಿತ್ತು.

ಕಾನೂನು ಬಾಹಿರ ಮುಷ್ಕರ ಆರೋಪ:  ಕಾನೂನು ಬಾಹಿರವಾಗಿ ಮುಷ್ಕರ ನಡೆಸಿದ್ದ ಆರೋಪದ ಮೇರೆಗೆ ಟೊಯೊಟಾದ ಆಡಳಿತ ಮಂಡಳಿ ಒಟ್ಟು 66 ಮಂದಿಯನ್ನು ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತಿನಲ್ಲಿರಿಸಲಾಗಿತ್ತು.

ಇದೀಗ ಈ ಪೈಕಿ 45 ಕಾರ್ಮಿಕರನ್ನು ಆಡಳಿತ ಮಂಡಳಿ ಸೇವೆಯಿಂದ ವಜಾಗೊಳಿಸಿದೆ. ಉಳಿದವರಿಗೆ ಸಣ್ಣ, ಪುಟ್ಟ ಶಿಕ್ಷೆ ವಿಧಿಸಿ ಪುನಃ ಕೆಲಸಕ್ಕೆ ಬರಮಾಡಿಕೊಳ್ಳಲು ಅವಕಾಶ ನೀಡಿದೆ. ಪಾರದರ್ಶಕ ವಿಚಾರಣೆ ನಡೆಸಿದ್ರಾ..? ತೃತೀಯ ವ್ಯಕ್ತಿಗಳಿಂದ ಪಾರದರ್ಶಕ ರೀತಿಯಲ್ಲಿ ವಿಚಾರಣಾಧಿಕಾರಿಗಳು ಅಮಾನತ್ತಿನಲ್ಲಿದ್ದ ಕಾರ್ಮಿಕರ ವಿಚಾರಣೆ ನಡೆಸಿ ಸಲ್ಲಿಸಿದ ಅಂತಿಮ ವರದಿಯನ್ನು ಆಧರಿಸಿ 45 ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಉಳಿದ ಕಾರ್ಮಿಕರ ವಿರುದ್ಧ ಶಿಸ್ತು ಕ್ರಮಕೈಗೊಂಡು ಕಾನೂನಾತ್ಮಕ ಕ್ರಮಗಳನ್ನು ಪಾಲಿಸಲಾಗಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ;- ಚಾರಣಿಗರ ಸ್ವರ್ಗ ಎತ್ತಿನಭುಜ

ಏನಾಗಿತ್ತು?: 2020ರ ನ.9ರಂದು ಟಿಕೆಎಂ ನೌಕರರ ಸಂಘವು ಕಂಪೆನಿ ಆವರಣದಲ್ಲಿ ಮುಷ್ಕರ ಆರಂಭಿಸಿತ್ತು. ಮುಷ್ಕರವನ್ನು ಕಾನೂನು ಬಾಹೀರ ಎಂದು ಕಂಪನಿ ಹೇಳಿತ್ತು. ಮರುದಿನ ನ.10, 2020ರಂದು ಕಂಪನಿ ಲಾಕೌಟ್‌ ಘೋಷಿಸಿತ್ತು. ಬಳಿಕ ನ.18ರಂದು ಲಾಕೌಟ್‌ ತೆರವುಗೊಳಿಸಲಾಗಿತ್ತು. ಆದರೂ ಕಾರ್ಮಿಕರು ಸುಮಾರು 4 ತಿಂಗಳವರೆಗೆ ಮುಷ್ಕರ ನಡೆಸಿದ್ದರು. ಇದು ಅಶಿಸ್ತು ಎಂದು ಪರಿಗಣಿಸಿದ ಕಂಪನಿ ಮುಷ್ಕರ ನಿರತ ತಂಡದ 66 ಕಾರ್ಮಿಕರ ವಿರುದ್ಧ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿತ್ತು.

3 ತಿಂಗಳ ಕಾಲ ತೃತೀಯ ವ್ಯಕ್ತಿಗಳು ವಿಚಾರಣೆ ನಡೆಸಿ ಕಾರ್ಮಿಕರದ್ದೇ ತಪ್ಪು ಎಂದು ನಿರ್ಧರಿಸಿದ ಹಿನ್ನೆಲೆ45 ಕಾರ್ಮಿಕರನ್ನು ಕಂಪನಿಯಿಂದ ವಜಾಗೊಳಿಸಲಾಗಿದೆ. ಉಳಿದವರಿಗೆ ಸಣ್ಣ ಶಿಸ್ತು ಕ್ರಮಗಳೊಂದಿಗೆ ಕೆಲಸಕ್ಕೆ ಹಿಂತೆಗೆದುಕೊಳ್ಳಲಾಗಿದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಕಾರ್ಮಿಕರ ಸಂಘದಿಂದ ಖಂಡನೆ : ಟೊಯೊಟಾ ಕಿರ್ಲೋಸ್ಕರ್‌ ಮೋಟಾರ್‌ ಸಂಸ್ಥೆ ಆಡಳಿತ ಮಂಡಳಿ 45 ಕಾರ್ಮಿಕರನ್ನು ಸೇವೆಯಿಂದ ವಜಾ ಮಾಡಿರುವ ಕ್ರಮವನ್ನು ಟಿಕೆಎಂ ಕಾರ್ಮಿಕ ಸಂಘ ತೀವ್ರವಾಗಿ ಖಂಡಿಸಿದೆ.

ಕಂಪನಿ ತನ್ನ ಹಠಮಾರಿ ಧೋರಣೆ ಮತ್ತು ಕಾರ್ಮಿಕ ವಿರೋಧಿ ನೀತಿ ತಾಳಿದೆ. ಈ ಹಿಂದೆ ಪ್ರತಿಭಟನಾ ನಿರತ 66 ಕಾರ್ಮಿಕರನ್ನು ಅಮಾನತು ಹಾಗೂ 8 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.  ಈಗ ಈ ಪೈಕಿ 45 ನೌಕರರನ್ನು ಸೇವೆಯಿಂದ ವಜಾ ಮಾಡುವ ಮೂಲಕ ದುರಹಂಕಾರದ ಪರಮಾವಧಿ ಮೆರೆದಿದೆ ಎಂದು ಕಾರ್ಮಿಕ ಸಂಘ ಕಿಡಿಕಾರಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.