ಬೋನಿಗೆ ಬಿದ್ದ ನರಭಕ್ಷಕ ಚಿರತೆ
Team Udayavani, May 14, 2020, 5:55 AM IST
ಮಾಗಡಿ: ನರಭಕ್ಷಕ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಮಂಗಳವಾರ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಬೆಳಗುಂಬ ಗ್ರಾಪಂ ವ್ಯಾಪ್ತಿಯ ಕದರಯ್ಯನಪಾಳ್ಯದ ಗ್ರಾಮದಲ್ಲಿ ಕಳೆದ 5 ದಿನಗಳ ಹಿಂದೆಯಷ್ಟೆ ಮನೆಯಲ್ಲಿ ಮಲಗಿದ್ದ ಮೂರು ವರ್ಷದ ಹೇಮಂತ್ ಎಂಬ ಮಗು ಹೊತ್ತೂಯ್ದು ಭಕ್ಷಿಸಿದ್ದ ನರಭಕ್ಷಕ ಚಿರತೆ, ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ.
ಅದನ್ನು ಸೆರೆಹಿಡಿದ ಅರಣ್ಯಾಧಿಕಾರಿಗಳು ದೂರದ ಕಾಡಿಗೆ ಬಿಟ್ಟಿದ್ದಾರೆ. ನರಭಕ್ಷಕ ಚಿರತೆ ದಾಳಿಗೆ ಬಲಿಯಾದ ದಿನವೇ ಮಗುವಿನ ಮನೆಗೆ ಬಂದಿದ್ದ, ಅರಣ್ಯ ನಂದ್ಸಿಂಗ್ ಮತ್ತು ಸಂಸದ ಡಿ.ಕೆ. ಸುರೇಶ್ ಹಾಗೂ ಶಾಸಕ ಎ. ಮಂಜುನಾಥ್, ಕುಟುಂಬಕ್ಕೆ ಸಾಂತ್ವನ ಹೇಳಿ ಸರ್ಕಾರದಿಂದ 7.5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು.
ಮೂರು ವರ್ಷದ ಹೇಮಂತ್ ಎಂಬ ಮಗುವನ್ನು ಬಲಿ ತೆಗೆದಕೊಂಡ ನರಭಕ್ಷಕ ಚಿರತೆಯನ್ನು ಕಾರ್ಯಾಚರಣೆ ನಡೆಸಿ ಹಿಡಿಯಬೇಕೆಂದು ವಲಯ ಅರಣ್ಯಾಧಿಕಾರಿ ಕೆ. ಪುಷ್ಪಲತಾ ಅವರಿಗೆ ಸೂಕ್ತ ನಿರ್ದೇ ಶಕ ನೀಡಿ ಆದೇಶಿಸಿದ್ದರು.
ಕಾರ್ಯ ಪ್ರವೃತ್ತರಾದ ಅರಣ್ಯಾಧಿಕಾರಿಗಳು ಚಿರತೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೂ ಸ್ಥಳೀಯವಾಗಿ ಜನರು ನರಭಕ್ಷಕ ಚಿರತೆ ಇದಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದು, ಮತ್ತೂಂದು ಚಿರತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಏನೇ ಆದರೂ ಜನರಲ್ಲಿದ್ದ ಭೀತಿ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್