ಆರೋಗ್ಯದ ಅರಿವಿಗೆ ಸಂಚಾರಿ ರಥ
Team Udayavani, Oct 17, 2021, 6:06 PM IST
ರಾಮನಗರ: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಆರೋಗ್ಯ ಇಲಾಖೆ ಮೂಲಕ ದೊರೆಯುವ ಸೇವೆಗಳನ್ನು ಸಾರುವ ದೊಡ್ಡ ಎಲ್ಇಡಿ ಪರದೆಯುಳ್ಳ ರಥ ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಕೆಲವು ಗ್ರಾಮಗಳಲ್ಲಿ ಸಂಚಾರ ಮುಗಿಸಿದೆ.
10 ಗ್ರಾಮಗಳಲ್ಲಿ 2 ದಿನ ಸಂಚಾರ: ಇತ್ತೀಚೆಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ನಿ ರಂಜನ್ ಈ ರಥಕ್ಕೆ ಚಾಲನೆ ನೀಡಿದ್ದರು. ರಾಮನಗರ ತಾಲೂಕಿನ ಶ್ಯಾನುಭೋಗನಹಳ್ಳಿ, ಜಾಲಮಂಗಲ, ಅಕ್ಕೂರು, ವಿರೂಪಸಂದ್ರ, ಚಿಕ್ಕಗಂಗವಾಡಿ, ಚನ್ನಪಟ್ಟಣದ ಬುಕ್ಕಸಂದ್ರ, ಭೈರಶೆಟ್ಟಿಹಳ್ಳಿ, ಎಂ.ಎನ್. ಹೊಸಳ್ಳಿ, ನಾಯಿದೊಳೆ, ಕನ್ನಿದೊಡ್ಡಿ ಹೀಗೆ ಒಟ್ಟು 10 ಗ್ರಾಮಗಳಲ್ಲಿ 2 ದಿನ ಸಂಚರಿಸಿ, ಆರೋಗ್ಯ ಇಲಾಖೆಯಲ್ಲಿನ ಸೇವೆಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಿ ಎಂದು ಆರ್.ಸಿ.ಎಚ್.ಅಧಿಕಾರಿ ಡಾ.ಪದ್ಮ ತಿಳಿಸಿದ್ದಾರೆ.
ಇದನ್ನೂ ಓದಿ;- ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ
ಗ್ರಾಮಗಳಲ್ಲಿ ರಥ ಸಂಚರಿಸಿದ ವೇಳೆ ಆರೋಗ್ಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆಯಾ ಭಾಗದ ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹ ಭಾಗವಹಿಸಿ ದ್ದರು. ಡಿ.ಎಲ್.ಒ. ಡಾ.ಮಂಜು ನಾಥ್, ಡಿ.ಟಿ.ಒ. ಡಾ.ಕುಮಾರ್, ಡಾ.ಆದರ್ಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್. ಗಂಗಾಧರ್, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕರಾದ ಸುರೇಶ್ ಬಾಬು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಂಭುಲಿಂಗಯ್ಯ ಮುಂತಾದವರು ರಥ ಸಂಚಾರಕ್ಕೆ ಸಹಕರಿಸಿ ದ್ದರು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ