ಗ್ರಾಪಂ ಅಧ್ಯಕ್ಷರ ಅವಿರೋಧ ಆಯ್ಕೆ
Team Udayavani, Oct 26, 2019, 3:51 PM IST
ಕುದೂರು: ಹುಲಿಕಲ್ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪ್ರೇಮ ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ನಾಗರಾಜು ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪ್ರೇಮ ವೆಂಕಟೇಶ್ ಹೊರತುಪಡಿಸಿ, ಯಾರು ನಾಮ ಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿ ರಂಗನಾಥ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.
ಮಾದರಿ ಗ್ರಾಮಕ್ಕಾಗಿ ಶ್ರಮ: ನೂತನ ಅಧ್ಯಕ್ಷೆ ಪ್ರೇಮಾ ವೆಂಕಟೇಶ್ ಮಾತನಾಡಿ, ಇಲ್ಲಿನ ರೈತರು ಮತ್ತು ಯುವಕರು ಉದ್ಯೋಗಕ್ಕಾಗಿ ಬೆಂಗಳೂರು, ತುಮಕೂರಿಗೆ ಹೋಗುತ್ತಿದ್ದಾರೆ. ಇದನ್ನು ತಪ್ಪಿಸಲು ನರೇಗಾ ಯೋಜನೆಯಡಿ ಉದ್ಯೋಗ ಸೃಷ್ಟಿಸಲಾಗುವುದು. ಸ್ವಯಂ ಉದ್ಯೋಗ ಕೈಗೊಳ್ಳಲು ಯೋಜನೆಯನ್ನುಸಮರ್ಪಕವಾಗಿ ಬಳಸಿಕೊಳ್ಳಬೇಕು. ಮಾದರಿ ಗ್ರಾಪಂ ಮತ್ತು ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಕೆಇಬಿ ರಾಜಣ್ಣ ಮಾತನಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಮಂಜುಳಾ, ಸದಸ್ಯರಾದ ಅನುಸೂಯ, ಕೆಂಪರತ್ನಮ್ಮ,ನಂಜುಂಡಯ್ಯ, ಲೋಕೇಶ್, ಗೌರಮ್ಮ, ಸಾಬೀರ್ಪಾಷ ಹಾಗೂ ಕುದೂರು ಗ್ರಾಪಂ ಅಧ್ಯಕ್ಷ ಕೆ.ಟಿ.ವೆಂಕಟೇಶ್, ಮಾಜಿ ಅಧ್ಯಕ್ಷ ಟಿ.ಹನುಮಂತರಾಯಪ್ಪ, ಶ್ರೀಗಿರಿಪುರ ಪ್ರಕಾಶ್, ತಾಪಂ ಮಾಜಿ ಅಧ್ಯಕ್ಷ ಸುರೇಶ್, ಪ್ರಭುದೇವ್, ಮಾದೇಶ್, ಕಿರಣ್, ಕಾಳಪ್ಪ, ಪಿಡಿಒ ಪ್ರೇಮ, ಕಾರ್ಯದರ್ಶಿ ಭೈಲಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ