ಬಿಡುಗಡೆಯಾಗದ ಅನುದಾನ: ಬಡವರು ಅತಂತ್ರ

ಸರ್ಕಾರಿ ಯೋಜನೆಗಳು ಕುಂಟಿತ ,ಮನೆ ನಿರ್ಮಾಣ ಸ್ಥಗಿತ

Team Udayavani, Sep 20, 2020, 2:41 PM IST

ಬಿಡುಗಡೆಯಾಗದ ಅನುದಾನ: ಬಡವರು ಅತಂತ್ರ

ಸಾಂದರ್ಭಿಕ ಚಿತ್ರ

ಕನಕಪುರ: ಸರ್ಕಾರದ ಸಹಾಯಧನ ನಂಬಿಕೊಂಡು ಮನೆ ಕಟ್ಟಲು ಮುಂದಾಗುವ ಮಧ್ಯಮ ಮತ್ತು ಬಡ ವರ್ಗದ ಜನರಿಗೆ ನಿಗದಿತ ಸಮಯಕ್ಕೆ ಅನುದಾನ ಬಿಡುಗಡೆಯಾಗದೆ ತಾಲೂಕಿನ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಸರ್ಕಾರ ಗುಡಿಸಲು ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಆಶ್ರಯಯೋಜನೆ, ಬಸವ ವಸತಿ ಯೋಜನೆ, ಇಂದಿರಾ ಆವಾಸ್‌ ಯೋಜನೆ ಮತ್ತು ಅಂಬೇಡ್ಕರ್‌ ಯೋಜನೆಯಡಿಯಲ್ಲಿ ವಿಧವೆಯರು, ಕುಶಲಕರ್ಮಿಗಳು ಮತ್ತು ಅಂಗವಿಕಲರಿಗೆ ಸೇರಿದಂತೆ ಮನೆ ಇಲ್ಲದವರಿಗೆ ಗ್ರಾಮ ಪಂಚಾಯಿತಿ ಮೂಲಕ ಮನೆ ನಿರ್ಮಾಣಕ್ಕೆ ತಳಹದಿ ಗೋಡೆ ಚಾವಣಿ ಸೇರಿದಂತೆ ನಾಲ್ಕು ಹಂತದಲ್ಲಿ ಸಹಾಯಧನ ನೀಡುತ್ತಿದೆ.

7 ವರ್ಷಗಳಿಂದ ಅನುದಾನ ಇಲ್ಲ: ಸರ್ಕಾರದ ಸಹಾಯಧನ ನಂಬಿಕೊಂಡು ಮನೆ ನಿರ್ಮಾಣ ಮಾಡಲು ಮುಂದಾಗಿರುವ ತಾಲೂಕಿನ ಕೆಲವು ಕುಟುಂಬಗಳಿಗೆ ಕಳೆದ 7 ವರ್ಷಗಳಿಂದ ಅನುದಾನ ಬಿಡುಗಡೆಯಾಗಿಲ್ಲ. ಸರ್ಕಾರದ ಅನುದಾನ ನಂಬಿಕೊಂಡು ಗುಡಿಸಲು ಇದ್ದ ಜಾಗದಲ್ಲಿ ತಳಹದಿ ಹಾಕಿ ಮೊದಲನೆ ಹಂತದ ಅನುದಾನಕ್ಕಾಗಿ ಕಾಯುತ್ತಿರುವವರುಒಂದೆಡೆಯಾದರೆ,ಮತ್ತೂಂದಡೆ ಗೋಡೆ ನಿರ್ಮಾಣ ಮತ್ತು ಚಾವಣಿ ಹಾಕಲು ವಿವಿಧ ಹಂತದ ಅನುದಾನಕ್ಕಗಿ ಕಾಯುತ್ತಿದ್ದಾರೆ.

16,313 ಮನೆ ನಿರ್ಮಾಣದ ಗುರಿ: ಇರುವ ನಿವೇಶನದಲ್ಲೇ ಮನೆ ಕಟ್ಟಲು ಮುಂದಾಗಿರುವ ಕೆಲವರಿಗೆ ಮನೆ ಪೂರ್ಣಗೊಳ್ಳದೆ, ವಾಸಕ್ಕೆ ಮನೆ ಇಲ್ಲದಂತಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಇನ್ನೂ ಕಲವು ನಿರ್ಗತಿಕ ಕುಟುಂಬಗಳು ಬಾಡಿಗೆ ಕಟ್ಟಲು ಹಣವಿಲ್ಲದೆ ಸಂಬಂಧಿಕರ ಖಾಲಿ ಜಾಗದಲ್ಲಿ ತಾತ್ಕಾಲಿಕ ಗುಡಿಸಲು ನಿರ್ಮಾಣ ಮಾಡಿಕೊಂಡು ಅತಂತ್ರ ಸ್ಥಿತಿಯಲ್ಲಿ ಬದುಕುವ ಪರಿಸ್ಥಿತಿ ಎದುರಾಗಿದೆ.

ಕೆಲವರು ವಾಸಕ್ಕೆ ಮನೆ ಇಲ್ಲದೆ, ಸರ್ಕಾರದ ಅನುದಾನ ಕಾಯದೆ ಸಾಲ ಮಾಡಿ ಮನೆ ಕಟ್ಟಿಕೊಂಡು ಕೋವಿಡ್‌ನಿಂದಾಗಿ ಸಾಲ ತೀರಿಸಲಾಗದೆ ಹೆಣಗಾಡುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಿಂದ ತಾಲೂಕಿನ 43 ಗ್ರಾಮ ಪಂಚಾಯ್ತಿಗಳಿಗೆ 16,313 ಮನೆ ನಿರ್ಮಾಣದ ಗುರಿ ನೀಡಲಾಗಿತ್ತು.

7 ಕೋಟಿ ಅನುದಾನ ಬರಬೇಕಿದೆ: ಮನೆ ನಿರ್ಮಾಣಕ್ಕೆ ಅರ್ಜಿಸಲ್ಲಿಸಿರುವ 935 ಕುಟುಂಬಗಳು ಸರ್ಕಾರದ ಅನುದಾನಕ್ಕೆ ಬೇಸತ್ತು ಕಾಮಗಾರಿಯನ್ನೇ ಆರಂಭಿಸಿಲ್ಲ. ಒಟ್ಟಾರೆಯಾಗಿ ತಾಲೂಕಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅನುದಾನದಲ್ಲಿ 43 ಗ್ರಾಮ ಪಂಚಾಯ್ತಿಗಳಿಂದ ನಿರ್ಮಾಣ ಮಾಡಿಕೊಂಡಿರುವ ಮನೆಗಳಿಗೆ 7,98,92,850 ಕೋಟಿ ಅನುದಾನ ಬಿಡುಗಡೆಯಾಗಬೇಕಿದೆ. ವರ್ಷಕ್ಕೊಮ್ಮೆ ಬದಲಾಗುತ್ತಿರುವ ಸರ್ಕಾರಗಳಿಂದ ಅನುದಾನಬಿಡುಗಡೆಯಾಗದೆ ಪರಿತಪಿಸುತ್ತಿರುವ ಜನರ ನೆರವಿಗೆ ಸರ್ಕಾರ ಬರಬೇಕಿದೆ.

‌ವಸತಿ ಯೋಜನೆಗೆ ಆಯ್ಕೆಯಾದ ಫ‌ಲಾನುಭವಿಗಳಿಗೆ ವರ್ಷಗಳಿಂದ ಹಣ ಬಿಡುಗಡೆಯಾಗದೆ, ಮನೆಗಳು ಪೂರ್ಣಗೊಂಡಿಲ್ಲ. ಕೋವಿಡ್‌ನಿಂದಾಗಿ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗಿದೆ. ಹಾಗಾಗಿ ಫ‌ಲಾನುಭವಿಗಳು ಆತಂಕ ಪಡುವುದು ಬೇಡ, ಸರ್ಕಾರ ಆದಷ್ಟು ಬೇಗ ಹಣ ಬಿಡುಗಡೆ ಮಾಡಲಿದೆ. ಶಿವರಾಮು, ತಾಪಂ ಇಒ

 

– ಉಮೇಶ್‌.ಬಿ.ಟಿ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.