ಬಿಡುಗಡೆಯಾಗದ ಅನುದಾನ: ಬಡವರು ಅತಂತ್ರ

ಸರ್ಕಾರಿ ಯೋಜನೆಗಳು ಕುಂಟಿತ ,ಮನೆ ನಿರ್ಮಾಣ ಸ್ಥಗಿತ

Team Udayavani, Sep 20, 2020, 2:41 PM IST

ಬಿಡುಗಡೆಯಾಗದ ಅನುದಾನ: ಬಡವರು ಅತಂತ್ರ

ಸಾಂದರ್ಭಿಕ ಚಿತ್ರ

ಕನಕಪುರ: ಸರ್ಕಾರದ ಸಹಾಯಧನ ನಂಬಿಕೊಂಡು ಮನೆ ಕಟ್ಟಲು ಮುಂದಾಗುವ ಮಧ್ಯಮ ಮತ್ತು ಬಡ ವರ್ಗದ ಜನರಿಗೆ ನಿಗದಿತ ಸಮಯಕ್ಕೆ ಅನುದಾನ ಬಿಡುಗಡೆಯಾಗದೆ ತಾಲೂಕಿನ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಸರ್ಕಾರ ಗುಡಿಸಲು ಮುಕ್ತ ಸಮಾಜ ನಿರ್ಮಾಣ ಮಾಡಬೇಕು ಎಂಬ ಉದ್ದೇಶದಿಂದ ಆಶ್ರಯಯೋಜನೆ, ಬಸವ ವಸತಿ ಯೋಜನೆ, ಇಂದಿರಾ ಆವಾಸ್‌ ಯೋಜನೆ ಮತ್ತು ಅಂಬೇಡ್ಕರ್‌ ಯೋಜನೆಯಡಿಯಲ್ಲಿ ವಿಧವೆಯರು, ಕುಶಲಕರ್ಮಿಗಳು ಮತ್ತು ಅಂಗವಿಕಲರಿಗೆ ಸೇರಿದಂತೆ ಮನೆ ಇಲ್ಲದವರಿಗೆ ಗ್ರಾಮ ಪಂಚಾಯಿತಿ ಮೂಲಕ ಮನೆ ನಿರ್ಮಾಣಕ್ಕೆ ತಳಹದಿ ಗೋಡೆ ಚಾವಣಿ ಸೇರಿದಂತೆ ನಾಲ್ಕು ಹಂತದಲ್ಲಿ ಸಹಾಯಧನ ನೀಡುತ್ತಿದೆ.

7 ವರ್ಷಗಳಿಂದ ಅನುದಾನ ಇಲ್ಲ: ಸರ್ಕಾರದ ಸಹಾಯಧನ ನಂಬಿಕೊಂಡು ಮನೆ ನಿರ್ಮಾಣ ಮಾಡಲು ಮುಂದಾಗಿರುವ ತಾಲೂಕಿನ ಕೆಲವು ಕುಟುಂಬಗಳಿಗೆ ಕಳೆದ 7 ವರ್ಷಗಳಿಂದ ಅನುದಾನ ಬಿಡುಗಡೆಯಾಗಿಲ್ಲ. ಸರ್ಕಾರದ ಅನುದಾನ ನಂಬಿಕೊಂಡು ಗುಡಿಸಲು ಇದ್ದ ಜಾಗದಲ್ಲಿ ತಳಹದಿ ಹಾಕಿ ಮೊದಲನೆ ಹಂತದ ಅನುದಾನಕ್ಕಾಗಿ ಕಾಯುತ್ತಿರುವವರುಒಂದೆಡೆಯಾದರೆ,ಮತ್ತೂಂದಡೆ ಗೋಡೆ ನಿರ್ಮಾಣ ಮತ್ತು ಚಾವಣಿ ಹಾಕಲು ವಿವಿಧ ಹಂತದ ಅನುದಾನಕ್ಕಗಿ ಕಾಯುತ್ತಿದ್ದಾರೆ.

16,313 ಮನೆ ನಿರ್ಮಾಣದ ಗುರಿ: ಇರುವ ನಿವೇಶನದಲ್ಲೇ ಮನೆ ಕಟ್ಟಲು ಮುಂದಾಗಿರುವ ಕೆಲವರಿಗೆ ಮನೆ ಪೂರ್ಣಗೊಳ್ಳದೆ, ವಾಸಕ್ಕೆ ಮನೆ ಇಲ್ಲದಂತಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಇನ್ನೂ ಕಲವು ನಿರ್ಗತಿಕ ಕುಟುಂಬಗಳು ಬಾಡಿಗೆ ಕಟ್ಟಲು ಹಣವಿಲ್ಲದೆ ಸಂಬಂಧಿಕರ ಖಾಲಿ ಜಾಗದಲ್ಲಿ ತಾತ್ಕಾಲಿಕ ಗುಡಿಸಲು ನಿರ್ಮಾಣ ಮಾಡಿಕೊಂಡು ಅತಂತ್ರ ಸ್ಥಿತಿಯಲ್ಲಿ ಬದುಕುವ ಪರಿಸ್ಥಿತಿ ಎದುರಾಗಿದೆ.

ಕೆಲವರು ವಾಸಕ್ಕೆ ಮನೆ ಇಲ್ಲದೆ, ಸರ್ಕಾರದ ಅನುದಾನ ಕಾಯದೆ ಸಾಲ ಮಾಡಿ ಮನೆ ಕಟ್ಟಿಕೊಂಡು ಕೋವಿಡ್‌ನಿಂದಾಗಿ ಸಾಲ ತೀರಿಸಲಾಗದೆ ಹೆಣಗಾಡುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆಗಳಿಂದ ತಾಲೂಕಿನ 43 ಗ್ರಾಮ ಪಂಚಾಯ್ತಿಗಳಿಗೆ 16,313 ಮನೆ ನಿರ್ಮಾಣದ ಗುರಿ ನೀಡಲಾಗಿತ್ತು.

7 ಕೋಟಿ ಅನುದಾನ ಬರಬೇಕಿದೆ: ಮನೆ ನಿರ್ಮಾಣಕ್ಕೆ ಅರ್ಜಿಸಲ್ಲಿಸಿರುವ 935 ಕುಟುಂಬಗಳು ಸರ್ಕಾರದ ಅನುದಾನಕ್ಕೆ ಬೇಸತ್ತು ಕಾಮಗಾರಿಯನ್ನೇ ಆರಂಭಿಸಿಲ್ಲ. ಒಟ್ಟಾರೆಯಾಗಿ ತಾಲೂಕಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅನುದಾನದಲ್ಲಿ 43 ಗ್ರಾಮ ಪಂಚಾಯ್ತಿಗಳಿಂದ ನಿರ್ಮಾಣ ಮಾಡಿಕೊಂಡಿರುವ ಮನೆಗಳಿಗೆ 7,98,92,850 ಕೋಟಿ ಅನುದಾನ ಬಿಡುಗಡೆಯಾಗಬೇಕಿದೆ. ವರ್ಷಕ್ಕೊಮ್ಮೆ ಬದಲಾಗುತ್ತಿರುವ ಸರ್ಕಾರಗಳಿಂದ ಅನುದಾನಬಿಡುಗಡೆಯಾಗದೆ ಪರಿತಪಿಸುತ್ತಿರುವ ಜನರ ನೆರವಿಗೆ ಸರ್ಕಾರ ಬರಬೇಕಿದೆ.

‌ವಸತಿ ಯೋಜನೆಗೆ ಆಯ್ಕೆಯಾದ ಫ‌ಲಾನುಭವಿಗಳಿಗೆ ವರ್ಷಗಳಿಂದ ಹಣ ಬಿಡುಗಡೆಯಾಗದೆ, ಮನೆಗಳು ಪೂರ್ಣಗೊಂಡಿಲ್ಲ. ಕೋವಿಡ್‌ನಿಂದಾಗಿ ಅನುದಾನ ಬಿಡುಗಡೆಯಲ್ಲಿ ವಿಳಂಬವಾಗಿದೆ. ಹಾಗಾಗಿ ಫ‌ಲಾನುಭವಿಗಳು ಆತಂಕ ಪಡುವುದು ಬೇಡ, ಸರ್ಕಾರ ಆದಷ್ಟು ಬೇಗ ಹಣ ಬಿಡುಗಡೆ ಮಾಡಲಿದೆ. ಶಿವರಾಮು, ತಾಪಂ ಇಒ

 

– ಉಮೇಶ್‌.ಬಿ.ಟಿ

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.