ಅನೇಕ ಕೃತಿಗಳಿಗೆ ರಾಮಾಯಣ ಪ್ರೇರಣೆ


Team Udayavani, Oct 10, 2022, 3:59 PM IST

ಅನೇಕ ಕೃತಿಗಳಿಗೆ ರಾಮಾಯಣ ಪ್ರೇರಣೆ

ಕನಕಪುರ: ವಾಲ್ಮೀಕಿ ಮಹರ್ಷಿ ರಚಿಸಿದ ಮಹಾಕಾವ್ಯ ರಾಮಾಯಣ ಗ್ರಂಥ ಹಲವಾರು ಕೃತಿಗಳಿಗೆ ಪ್ರೇರಣೆಯಾಗಿದೆ ಎಂದು ಸಾಹಿತಿ ಕೂ.ಗಿ. ಗಿರಿಯಪ್ಪ ತಿಳಿಸಿದರು.

ನಗರದ ಮಿನಿವಿಧಾನ ಸೌಧದ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದ ಅವರು, ಗಂಗಾನದಿಯ ತೀರದಲ್ಲಿ ದಾರಿಹೋಕರನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ವಾಲ್ಮೀಕಿ ಮನ ಪರಿವರ್ತನೆಗೊಂಡು ರಾಮಾಯಣ ಎಂಬ ಗ್ರಂಥವನ್ನು ರಚಿಸಿದ್ದಾರೆ . 7 ಸಾವಿರ ವರ್ಷಗಳ ಹಿಂದೆ ಈ ರಾಮಾಯಣ ನಡೆದಿದೆ ಎಂಬ ಮಾಹಿತಿ ಇದೆ. ಏಳು ಕಾಂಡಗಳ ಕಥಾ ಹಂದರಲ್ಲಿ ಮಹಾಕಾವ್ಯ ರಾಮಾಯಣ ಗ್ರಂಥ ರಚನೆಯಾಗಿದೆ ಎಂದರು.

ರಾಮಾಯಣ ಗ್ರಂಥ ಜನರ ಮನಸ್ಸಿನ ಮೇಲೆ ಅಗಾಧವಾದ ಪ್ರಭಾವ ಬೀರಿದೆ. ರಾಮಾಯಣದಂತಹ ಮಹಾಕಾವ್ಯ ವಾಲ್ಮೀಕಿ ಮಹರ್ಷಿಯಂತಹ ಮಹಾಕವಿ ದೊರೆತಿದ್ದು, ಭುವನದ ಭಾಗ್ಯ ಎಂದು ಅನೇಕ ಕವಿ, ಸಾಹಿತಿಗಳು ವರ್ಣನೆ ಮಾಡಿದ್ದಾರೆ. ರಾಮಾಯಣ ಗ್ರಂಥವನ್ನು ಆಧಾರವಾಗಿಟ್ಟು ಕೊಂಡು ಕುವೆಂಪು ಅವರು ಶ್ರೀ ರಾಮಾಯಣ ದರ್ಶನಂ ಎಂಬ ಕೃತಿಯನ್ನು ವಿವಿಧ ಆಯಾಮಗಳಲ್ಲಿ ರಚಿಸಿದ್ದಾರೆ ಎಂದರು.

ಇತಿಹಾಸಕಾರರನ್ನು ಸ್ಮರಿಸಿ: ತಾಪಂ ಇಒ ಮಧು ಮಾತನಾಡಿ, ಆಧುನಿಕ ಸಮಾಜದಲ್ಲಿ ಮೌಲ್ಯಯುತ ಜೀವನ ಮತ್ತು ಬದುಕನ್ನು ಕಟ್ಟಿಕೊಳ್ಳಲು ಸಾಕಷ್ಟು ವಿಚಾರ ವಾಲ್ಮೀಕಿ ಅವರು ರಚಿಸಿರುವ ರಾಮಾಯಣ ಗ್ರಂಥದಲ್ಲಿದೆ. ರಾಮಾಯಣ, ಮಹಾಭಾರತದಂತಹ ಗ್ರಂಥ ಮುಂದಿನಪಿಳಿಗೆಗೂ ತಲುಪಬೇಕು. ಶರಣರು, ದಾರ್ಶನಿಕರು, ಇತಿಹಾಸಕಾರರನ್ನು ಸ್ಮರಿಸಿ ಅವರ ಆಚಾರ-ವಿಚಾರ ಮಾನವ ಕುಲಕ್ಕೆ ತಿಳಿವಳಿಕೆ ನೀಡಿ ಆ ಮೂಲಕ ವಾಲ್ಮೀಕಿಯವರಂತೆ ಸಮಾಜದ ಪರಿವರ್ತನೆ ಮಾಡುವ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಗ್ರೇಡ್‌-2 ತಹಶೀಲ್ದಾರ್‌ ಶಿವಕುಮಾರ್‌, ಶಿರಸ್ತೆದಾರ್‌ ಜಗದೀಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ, ಬಿಆರ್‌ಸಿ ಶ್ರೀನಿವಾಸ್‌, ಶಿರಸ್ತೇದಾರ್‌ ಪ್ರಕಾಶ್‌, ಸಹಾಯಕ ನಿರ್ದೇಶಕ ಜಯಪ್ರಕಾಶ್‌, ನಗರಸಭೆ ಪೌರಾಯುಕ್ತೆ ಶುಭಾ, ತಾಪಂ ಸಹಾಯಕ ನಿರ್ದೇಶಕ ಮೋಹನ್‌ ಬಾಬು, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸತೀಶ್‌, ಶಿಕ್ಷಕ ಗುರುಮೂರ್ತಿ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.