ಲಕ್ಷ್ಮೀದೇವಿ ಅಮ್ಮನಿಗೆ ವಿಶೇಷ ಅಲಂಕಾರ
Team Udayavani, Aug 1, 2020, 9:26 AM IST
ಕುದೂರು: ಕೋವಿಡ್ ಸೋಂಕು ಎಲ್ಲೆಡೆ ಹೆಚ್ಚಾಗುತ್ತಿರುವ ನಡುವೆಯೇ ವರಮಹಾ ಲಕ್ಷ್ಮೀ ಹಬ್ಬವನ್ನು ಭಕ್ತರು ಸಡಗರ ಸಂಭ್ರಮ ದಿಂದ ಆಚರಿಸಿದರು. ಹೋಬಳಿಯ ಪ್ರಸಿದ್ಧ ಶ್ರೀ ಲಕ್ಷ್ಮೀ ಅಮ್ಮ ನವರ ದೇವಸ್ಥಾನಕ್ಕೆ ಶುಕ್ರವಾರ ಬೆಳಗ್ಗೆ ಯಿಂದಲೇ ನೂರಾರು ಮಂದಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಕುದೂರು ಮತ್ತು ಅಕ್ಕಪಕ್ಕದ ಊರುಗಳಿಂದ ನೂರಾರು ಭಕ್ತರು ಆಗಮಿಸಿದ್ದರು.ಲಕ್ಷ್ಮೀ ದೇವಿ ಅಮ್ಮನ ದೇವಾಲಯ ಸದಾ ಭಕ್ತರಿಂದ ಕೂಡಿರುತ್ತಿತ್ತು. ಕೋವಿಡ್ ಭಯದ ಹಿನ್ನೆಲೆಯಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಲು ಹಿಂದೇಟು ಹಾಕಿದರು. ದೇವಾಲಯದ ಪ್ರಧಾನ ಅರ್ಚಕರಾದ ಮಲ್ಲಣ್ಣ ಭಕ್ತರಿಗೆ ಸಾಮಾಜಿಕ ಅಂತರ ಕಾಪಾಡಿ ಕೊಂಡು ಮಾಸ್ಕ್, ಹಾಕಿಕೊಂಡು ಪೂಜಾ ಕಾರ್ಯಕ್ರಮದಲ್ಲಿ ತೊಡಗಬೇಕು ಎಂದು ಮನವಿ ಮಾಡಿದರು. ದೇವಾಲಯಕ್ಕೆ ಬರುವ ಭಕ್ತರಿಗೆ ಬಮೂಲ್ ನಿರ್ದೇಶಕ ಡಾ. ರಾಜಣ್ಣ ಪ್ರಸಾದ ವಿನಿಯೋಗ ಮಾಡಿದರು. ದೇವಾಲಯದ ಸಂಘದ ಅಧ್ಯಕ್ಷರಾದ ಕೆ.ಆರ್. ಯತಿರಾಜು ಮಾತನಾಡಿ, ಕೊರೊನಾ ಬರುವುದಕ್ಕೂ ಮುಂಚೆ ಹಬ್ಬ ಎಂದರೆ ಸಾಕಿತ್ತು. ದೇವಸ್ಥಾನದ ಹೊರಗೆ ಮಾರುದ್ದ ಸರದಿ ಇರುತ್ತಿತ್ತು. ಆದರೆ, ಈ ವರ್ಷ ಕೊರೊನಾ ಕರಿನೆರಳು ಬಿದ್ದಿರುವುದರಿಂದ ಭಕ್ತರ ಸಂಖ್ಯೆ ಇಳುಮುಖವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ