Road potholes: ಪ್ರವಾಸಿಗರ ಪ್ರಾಣ ಹಿಂಡುವ ಗುಂಡಿ ಬಿದ್ದ ರಸ್ತೆ!


Team Udayavani, May 27, 2024, 12:01 PM IST

11

ಮಾಗಡಿ: ವೀರೇಗೌಡನದೊಡ್ಡಿಯಿಂದ ಮಂಚನಬೆಲೆ ರಸ್ತೆ ಸುಮಾರು 4 ಕಿ.ಮೀ. ತೀರಾ ಹದಗೆಟ್ಟಿದ್ದು, ವಾಹನಗಳ ಸವಾರರು ಸ್ಪಲ್ಪ ಯಾಮಾರಿದರೂ ಪ್ರಾಣಾಪಾಯ ಕಟ್ಟಿಟ್ಟ ಬುತ್ತಿ.

ತಾಲೂಕಿನ ಮಾಡಬಾಳ್‌ ಹೋಬಳಿ ಹಂಚೀಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಚನಬೆಲೆ ಜಲಾಶಯವಿದೆ. ಪ್ರಕೃತಿ ಮಡಿಲಲ್ಲಿರುವ ಮಂಚನಬೆಲೆ ಜಲಾಶಯ ಅತ್ಯಂತ ಸುಂದರವಾದ ಪ್ರವಾಸಿ ತಾಣ. ರಜಾ ಬಂತೆಂದರೆ ಸಾಕು, ಬೆಂಗಳೂರು ನಗರದಿಂದ ಮೋಜು, ಮಸ್ತಿಗಾಗಿ ಪ್ರವಾಸಿಗರು ಬರುತ್ತಾರೆ. ಇಲ್ಲಿಗೆ ಬರುವವರು ಮೊದಲು ಪ್ರಸಿದ್ಧ ಸಾವನದುರ್ಗಕ್ಕೂ ಬರುವುದುಂಟು.

ಉತ್ತರವಿಲ್ಲ: ವೀರೇಗೌಡನದೊಡ್ಡಿಯಿಂದ ಮಂಚನ ಬೆಲೆಗೆ ತೆರಳುವ ರಸ್ತೆ ಡಾಂಬರೀಕರಣಗೊಂಡು ಹಲವು ವರ್ಷಗಳೇ ಉರುಳಿವೆ. ಹಂಚೀಕುಪ್ಪೆ ಗ್ರಾಪಂಗೆ ಸೇರುವ ಈ ರಸ್ತೆ ಮೂಲಕವೇ ಹತ್ತಾರು ಗ್ರಾಮಗಳಿವೆ. ಈ ಗ್ರಾಮಕ್ಕೆ ತೆರಳುವ ಜನರೂ ಹದಗೆಟ್ಟ ರಸ್ತೆ ಸಂಚಾರಕ್ಕೆ ರೋಸಿ ಹೋಗಿದ್ದಾರೆ. ಗರ್ಭಿಣಿಯರು ಅಥವಾ ಅನಾರೋಗ್ಯಕ್ಕೆ ತುತ್ತಾದ ವಯೋವೃದ್ಧರನ್ನೋ ಈ ಹದಗೆಟ್ಟ ರಸ್ತೆ ಮೂಲಕ ಕರೆ ತಂದರೆ, ಬಹುಷಃ ನೋವಿನಿಂದ ರಸ್ತೆ ಮಧ್ಯೆಯೇ ಹೆರಿಗೆ ಆಗಬಹುದು, ಇನ್ನು ವಯೋ ವೃದ್ಧರು ಮಾರ್ಗಮಧ್ಯೆ ಸಾವನ್ನಪ್ಪಬಹುದು. ಆದರೆ, ಸಮಸ್ಯೆ ಹೀಗಿದ್ದರೂ ಜನಪ್ರತಿನಿಧಿಗಳು ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಗ್ರಾಪಂನಲ್ಲಿ ಉತ್ತರವೇ ಇಲ್ಲ.

ಕ್ರಮ ಕೈಗೊಳ್ಳಿ: ಕಾಡಿನ ನಡುವೆ ಈ ರಸ್ತೆ ಹಾದು ಹೋಗುವುದು, ಕಾಡುಪ್ರಾಣಿಗಳ ಕಾಟ ತಪ್ಪಿಸಿಕೊಂಡು ಸಂಚರಿ ಸಬೇಕಾದ ಅನಿವಾರ್ಯತೆ ಇದೆ. ಇಂಥ ಪರಿಸ್ಥಿತಿಯಲ್ಲಿ ಕನಿಷ್ಠ ತೇಪೆ ಕೆಲಸವನ್ನಾದರೂ ಪಂಚಾಯ್ತಿ ಅಧಿಕಾರಿಗಳು ಮಾಡಿಸಬಹುದಿತ್ತು. ಆದರೂ, ಕಂಡು ಕಾಣದಂತೆ ಜಾಣ ಕುರುಡು ಪ್ರದ ರ್ಶನದಿಂದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಇನ್ನಾ ದರೂ ಪಂಚಾಯ್ತಿ ಅಧಿಕಾರಿಗಳಾಗಲಿ, ಸಂಬಂಧ ಪಟ್ಟ ಲೋಕೋ ಪಯೋಗಿ ಅಧಿ ಕಾರಿಗಳಾಗಲಿ ಇತ್ತ ಗಮನಹರಿಸಿ ರಸ್ತೆ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಸಾವನದುರ್ಗಕ್ಕೆ ಬರುವ ದಾರಿ ದುರ್ಗಮ : ಪ್ರವಾಸಿಗರು ಸಾವನದುರ್ಗದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ಮತ್ತು ಪುರಾತನವಾದ ಸಾವಂಧಿ ವೀರಭದ್ರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪ್ರಕೃತಿ ಮಡಿಲಲ್ಲಿರುವ ಮಂಚನಬೆಲೆ ಜಲಾಶಯವನ್ನು ನೋಡಿಕೊಂಡು ಸಂಜೆ ವೇಳೆಗೆ ನಗರಕ್ಕೆ ವಾಪಸ್ಸಾಗುತ್ತಾರೆ. ಆದರೆ, ಮಂಚನಬೆಲೆ ಜಲಾಶಯದಿಂದ ವೀರೇಗೌಡನದೊಡ್ಡಿ ಮೂಲಕ ಸಾವನದುರ್ಗಕ್ಕೆ ಬರುವ ದಾರಿ ಅತ್ಯಂತ ದುರ್ಗಮಯವಾಗಿದೆ. ಅದರಲ್ಲೂ ರಸ್ತೆ ತೀರಾ ಹಳ್ಳಗುಂಡಿಗಳಿಂದ ಕೂಡಿದೆ. ವಾಹನಗಳ ಸವಾರರು ಹಳ್ಳ ಗುಂಡಿಗಳನ್ನು ತಪ್ಪಿಸಿಕೊಂಡು ಸರ್ಕಸ್‌ ಮಾಡಿಕೊಂಡೇ ಸಂಚರಿಸಬೇಕಿದೆ. ಈ ಸಂಬಂಧಪಟ್ಟ ನಿತ್ಯ ಸವಾರರು ಲೋಕೋ ಪಯೋಗಿ ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.

ಜಲಾಶಯದ ಹಿಂಭಾಗದ ಶಿಥಿಲ ಸೇತುವೆಯನ್ನು ತೆರವುಗೊಳಿಸಿ ಹೊಸ ಸೇತುವೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಂಚನಬೆಲೆ- ವೀರೇಗೌಡನದೊಡ್ಡಿ ರಸ್ತೆ ದುರಸ್ತಿಗೆ ಮೊದಲ ಆದ್ಯತೆ ಕೊಡುವ ಮೂಲಕ ಶೀಘ್ರ ಕಾಮಗಾರಿ ಪ್ರಾರಂಭಿಸುತ್ತೇನೆ. ●ಎಚ್‌.ಸಿ.ಬಾಲಕೃಷ್ಣ, ಶಾಸಕರು

ವೀರೇಗೌಡನದೊಡ್ಡಿ- ಮಂಚನಬೆಲೆ ರಸ್ತೆ ತೀರ ಹಳ್ಳಗುಂಡಿಗಳಿಂದ ಕೂಡಿ ಹದಗೆಟ್ಟಿದ್ದರೂ ಕನಿಷ್ಠ ತೇಪೆ ಹಾಕದೆ ಇರುವುದು ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ. ಅಕ್ಷರಶಃ ಈ ರಸ್ತೆ ಸಂಚಾರ ಯಮಯಾತನೆ. ●ಶಿವರಾಜು, ಮಂಚನಬೆಲೆ ನಿವಾಸಿ

ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Magadi; Mother-son passed away due to gas leak from geyser

Magadi; ಗೀಸರ್ ನಿಂದ ಅನಿಲ ಸೋರಿಕೆಯಿಂದ ಮೃತಪಟ್ಟ ತಾಯಿ – ಮಗ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Ramanagara: ಮಳೆಗೆ ಗವಿಯ ಆಸರೆ ಪಡೆದಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಹಾರೋಹಳ್ಳಿ ತಹಸೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

1-train

Train;ಬೆಂಗಳೂರು-ಮೈಸೂರು ಮಾರ್ಗದ ಎಲ್ಲಾ ರೈಲುಗಳು ಸ್ಥಗಿತ: ಪ್ರಯಾಣಿಕರಿಗೆ ಅನಾನುಕೂಲ

HD-Kumaraswamy

Bengaluru South; ನಾನು ಅಧಿಕಾರಕ್ಕೆ ಬಂದಾಗ ಇವರಿಟ್ಟ ಹೆಸರು ಕಿತ್ತೆಸೆಯುವೆ: ಎಚ್‌ಡಿಕೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.